ಉಜಿರೆ ಎಸ್‌ಡಿಎಂ ಕಾಲೇಜು: ನೌಕಾ ವಿಭಾಗದ 6 ಕೆಡೆಟ್‌ಗಳಿಗೆ ಚಿನ್ನದ ಪದಕ


Team Udayavani, Feb 19, 2023, 8:10 AM IST

ಉಜಿರೆ ಎಸ್‌ಡಿಎಂ ಕಾಲೇಜು: ನೌಕಾ ವಿಭಾಗದ 6 ಕೆಡೆಟ್‌ಗಳಿಗೆ ಚಿನ್ನದ ಪದಕ

ಬೆಳ್ತಂಗಡಿ: ಹೊಸದಿಲ್ಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಉಜಿರೆ ಎಸ್‌ಡಿಎಂ ಕಾಲೇಜಿನ ನೌಕಾ ವಿಭಾಗದ 6 ಕೆಡೆಟ್‌ಗಳು ಶಿಪ್‌ ಮಾಡೆಲಿಂಗ್‌ ವಿಭಾಗದಲ್ಲಿ ಬಂಗಾರದ ಪದಕ ಗಳಿಸಿದ್ದಾರೆ.

ದೇಶದ 17 ಡೈರೆಕ್ಟರೇಟ್‌ನವರು ಸಿದ್ಧಪಡಿಸಿ ಪರೀಕ್ಷೆಗೊಳಪಡಿಸಿದ ಪವರ್‌ ಮಾಡೆಲ್‌ ವಿಭಾಗದಲ್ಲಿ ಪಿಒ ಕೆಡೆಟ್‌ಗಳಾದ ಶ್ರೀರಾಮ ಮರಾಠೆ ಮತ್ತು ಅನನ್ಯಾ ಕೆ.ಪಿ. ಸಿದ್ಧಪಡಿಸಿದ ಮಾಡೆಲ್‌ ಅತ್ಯುತ್ತಮ ಎಂದು ಪರಿಗಣಿಸಿ ಪ್ರಥಮ ಸ್ಥಾನಕ್ಕೆ ಆಯ್ಕೆಯಾಗಿದೆ.

ವಿಐಪಿ ಮಾಡೆಲ್‌ನಲ್ಲಿ ಖುಶಿ ಎಂ., ರಾಘವೇಂದ್ರ ಹಾಗೂ ಯುನೀತ್‌ ಸಿದ್ಧಪಡಿಸಿದ ಮಾಡೆಲ್‌ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್‌ನಲ್ಲಿ ಆಯ್ಕೆಯಾಗಿ ದಿಲ್ಲಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಖುಶಿ ಎಂ. ಸಿದ್ಧಪಡಿಸಿದ ಮಾಡೆಲ್‌ಗೆ ವಿಶಾಖಪಟ್ಟಣದಲ್ಲಿ ನಡೆದ ಅ. ಭಾ. ನೌ ಸೈನಿಕ್‌ ಶಿಬಿರದಲ್ಲಿ ಬಂಗಾರದ ಪದಕ ಬಂದಿದೆ.

ಶಿಪ್‌ ಮಾಡೆಲಿಂಗ್‌ ವಿಭಾಗದಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟನ್ನು ಪ್ರತಿನಿಧಿಸಿ ಪದಕ ಗೆದ್ದ 9 ಕೆಡೆಟ್‌ಗಳಲ್ಲಿ 6 ಮಂದಿ ಉಜಿರೆ ಎಸ್‌ಡಿಎಂ ಕಾಲೇಜಿನವರೆಂಬುದು ವಿಶೇಷ.

ಕಾಲೇಜಿನ ನೇವಿ ಕೆಡೆಟ್‌ಗಳಾದ ಹೇಮಂತ್‌ ಎಂ.ಜಿ. ಮತ್ತು ಮಹಮ್ಮದ್‌ ನವಾಜ್‌ ಅವರು ಪ್ರಧಾನಮಂತ್ರಿಗಳ ಮತ್ತು ವಿಐಪಿಗಳ ಗಾಡ್‌ ಆಫ್‌ ಆನರ್‌ನಲ್ಲಿ ಭಾಗವಹಿಸಿದ್ದರು. ಈ ವಿಭಾಗದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ 7 ಕೆಡೆಟ್‌ಗಳಲ್ಲಿ ಮೂವರು ಉಜಿರೆ ಕಾಲೇಜಿನವರಾಗಿದ್ದರು.

ಪ್ರಶಂಸಾ ಪತ್ರದ ಗೌರವ
ಈ ಎಲ್ಲರ ವಿಶೇಷ ಸಾಧನೆಯನ್ನು ಗಮನಿಸಿ ಬೆಂಗಳೂರಿನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್‌ ಡೆಪ್ಯೂಟಿ ಡೈರೆಕ್ಟರ್‌ ಜನರಲ್‌(ಡಿಡಿಜಿ) ಏರ್‌ ಕಮಾಡೋರ್‌ ಬಿ.ಎಸ್‌. ಕನ್ವರ್‌ ಅವರು ಡಿಡಿಜಿ ಕಮಂಡೇಶನ್‌ (ಪ್ರಶಂಸಾ ಪತ್ರ) ನೀಡಿ ಗೌರವಿಸಿದರು.

ಎಸ್‌ಡಿಎಂ ಕಾಲೇಜಿನ ಎನ್‌ಸಿಸಿ ನೌಕಾವಿಭಾಗದ ಅಧಿಕಾರಿ ಅಸೋಸಿಯೇಟೆಡ್‌ ಎನ್‌ಸಿಸಿ ಆಫೀಸರ್‌ ಲೆಫ್ಟಿನೆಂಟ್‌ ಕಮಾಂಡರ್‌ ಶ್ರೀಧರ ಭಟ್‌ ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಹಿರಿಯ ಎನ್‌ಸಿಸಿ ಕೆಡೆಟ್‌ಗಳಾದ ಅಖಿಲೇಶ್ ಸುವರ್ಣ ಮತ್ತು ಶ್ಯಾಮಪ್ರಸಾದ್‌ ಎಚ್‌.ಪಿ. ಅವರು ಕೆಡೆಟ್‌ಗಳಿಗೆ ವಿಶೇಷ ತರಬೇತಿ ನೀಡಿದ್ದರು.

 

ಟಾಪ್ ನ್ಯೂಸ್

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.