Ullala: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಾಲಕ
Team Udayavani, Apr 10, 2023, 11:44 AM IST
ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10ರ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆಗೈದ ಅಂಗಡಿ ಮಾಲಕ.
ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್ ಗಳಿಗೆ ಸಂಬಂಧಿಸಿದ ಹೊಲಿಗೆ ನೂಲು ಸೇರಿದಂತೆ ಇತರ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು.
ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂದು ಹೇಳಲಾಗಿದೆ. ಮೃತರು ತಾಯಿ, ಪತ್ನಿ ಪುತ್ರನನ್ಬು ಅಗಲಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ