ಅಭಿವೃದ್ಧಿ ಕಾಣದ ಕೊರುಂದೂರು-ಮಜ್ಜಗುಡ್ಡೆ ರಸ್ತೆ

ಪ್ರಧಾನ ಮಂತ್ರಿ ಕಚೇರಿಗೆ ಪತ್ರ ಬರೆದರೂ ಫಲವಿಲ್ಲ

Team Udayavani, Jul 10, 2020, 6:24 AM IST

ಅಭಿವೃದ್ಧಿ ಕಾಣದ ಕೊರುಂದೂರು-ಮಜ್ಜಗುಡ್ಡೆ ರಸ್ತೆ

ವಿಶೇಷ ವರದಿ- ಕಡಬ: ಪೇಟೆಯಿಂದ ಕೊರುಂದೂರು – ಮಜ್ಜಗುಡ್ಡೆ-ಮೂರಾಜೆ ಪ್ರದೇಶಕ್ಕೆ ನೇರ ಸಂಪರ್ಕ ಇರುವ ಕಚ್ಛಾ ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂಬ ಹಲವು ವರ್ಷಗಳ ಬೇಡಿಕೆಗೆ ಇದುವರೆಗೂ ಮನ್ನಣೆ ಸಿಕ್ಕಿಲ್ಲ. ದಿನಂಪ್ರತಿ ನೂರಾರು ಮಂದಿ ಸಂಚರಿಸುವ ಈ ರಸ್ತೆಗೆ ಕಾಂಕ್ರೀಟ್‌ ಹಾಸಿ ಅಭಿವೃದ್ಧಿಪಡಿಸಬೇಕೆಂದು ಪ್ರಧಾನಿ ಕಚೇರಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ.

ಸುಮಾರು 15ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳು ವಾಸ್ತವ್ಯವಿರುವ ಮಜ್ಜಗುಡ್ಡೆ ಕಾಲನಿಗೆ ನೇರ ಸಂಪರ್ಕವಾಗಿರುವ ಈ 1 ಕಿ.ಮೀ. ಉದ್ದದ ಮಣ್ಣಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ಗಾಲದಲ್ಲಿ ವಾಹನ ಸಂಚಾರ ಮಾತ್ರವಲ್ಲ ಜನರು ನಡೆದು ಹೋಗಲೂ ಸಾಧ್ಯ ವಿಲ್ಲದಂತಿದೆ.

ಪರಿಸರದ ಸುಮಾರು 200ರಿಂದ 230 ಮನೆಗಳ ಜನರು ಇದೇ ರಸ್ತೆಯನ್ನು ಅವಲಂಭಿಸಿ ದ್ದಾರೆ. ಕೊರುಂದೂರು ಅಂಗನವಾಡಿ ಕೇಂದ್ರ, ಸರಸ್ವತೀ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಹತ್ತಿರದ ದಾರಿಯಾಗಿರುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕೆಂದು ಕಡಬ ಗ್ರಾಮ ಪಂಚಾಯತ್‌ನ ಪ್ರತಿ ಗ್ರಾಮಸಭೆಗಳಲ್ಲಿ ಸಾರ್ವಜನಿಕರು ಬೇಡಿಕೆ ಇಡುತ್ತಲೇ ಬಂದಿದ್ದಾರೆ.

ಪ್ರಧಾನಿಗೆ ಪತ್ರ
ಬರೆದರೂ ಫಲವಿಲ್ಲ
ಸ್ಥಳೀಯ ರಾಜಕಾರಣಿಗಳು ಗ್ರಾಮಸ್ಥರ ಬೇಡಿಕೆಗೆ ಮನ್ನಣೆ ನೀಡದೇ ಇದ್ದಾಗ ರಸ್ತೆಯ ಫಲಾನುಭವಿ ಗಿರೀಶ್‌ ಗೌಡ ಕೊರುಂದೂರು ಅವರು ಗ್ರಾಮಸ್ಥರ ಸಹಿಯೊಂದಿಗೆ 6 ತಿಂಗಳುಗಳ ಹಿಂದೆ ನೇರವಾಗಿ ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದು ರಸ್ತೆಯನ್ನು ಅಭಿವೃದ್ಧಿಪಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆದರೆ ಬಳಿಕ ದೇಶದೆಲ್ಲೆಡೆ ಕೋವಿಡ್‌ ಬಾಧಿಸಿದ ಕಾರಣದಿಂದಾಗಿ ಆ ಪತ್ರಕ್ಕೂ ಯಾವುದೇ ಸ್ಪಂದನೆ ಸಿಕ್ಕಿಲ್ಲ.

ಕಾಯಕಲ್ಪ ದೊರೆಯಬಹುದೆ?
ಇದೀಗ ಕಡಬ ಗ್ರಾಮ ಪಂಚಾಯತ್‌ ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿದೆ. ಇನ್ನಾದರೂ ಈ ರಸ್ತೆಗೆ ಕಾಯಕಲ್ಪ ದೊರೆಯಬಹುದೇ ಎನ್ನುವುದು ಸ್ಥಳೀಯ ಜನರ ಆಶಯವಾಗಿದೆ.

ಬೇಡಿಕೆ ಈಡೇರಲಿ
ಈ ರಸ್ತೆಯನ್ನು ಉಪ ಯೋಗಿಸುವ ಯಾವುದೇ ಜನ ಪ್ರತಿನಿಧಿ ಇಲ್ಲದಿರುವುದು ನಮ್ಮ ಬೇಡಿಕೆ ಇದುವರೆಗೆ ಈಡೇರದಿರಲು ಕಾರಣ. ರಾತ್ರಿ ನಡೆದು ಹೋಗುವ ಜನ ರಿಗೆ ಅನುಕೂಲವಾಗುವಂತೆ ಬೀದಿ ದೀಪವನ್ನೂ ಈ ರಸ್ತೆಗೆ ಅಳವಡಿಸಿಲ್ಲ. ಪ.ಪಂ. ವ್ಯವಸ್ಥೆಯಲ್ಲಾದರೂ ನಮ್ಮ ಬೇಡಿಕೆ ಈಡೇರಲಿ ಎಂಬುದು ಸ್ಥಳೀಯ ಮುಖಂಡ ಗಿರೀಶ್‌ ಗೌಡ ಕೊರುಂದೂರು ಅವರ ಅಭಿಪ್ರಾಯ.

 ಆದ್ಯತೆ ಮೇರೆಗೆ ಅಭಿವೃದ್ಧಿ
ಕಡಬ ಈಗಾಗಲೇ ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿದ್ದು, ಕಡಬ ಮತ್ತು ಕೋಡಿಂಬಾಳ ಗ್ರಾಮಗಳ ಮೂಲ ಸೌಕರ್ಯಗಳಿಗಾಗಿ ವಿಶೇಷ ಅನುದಾನಗಳು ಲಭಿಸಲಿವೆ. ಆ ಸಂದರ್ಭದಲ್ಲಿ ಆದ್ಯತೆಯ ಮೇಲೆ ಕೊರುಂದೂರು-ಮಜ್ಜಗುಡ್ಡೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು.
-ಅರುಣ್‌ ಕೆ., ಮುಖ್ಯಾಧಿಕಾರಿ,
ಕಡಬ ಪಟ್ಟಣ ಪಂಚಾಯತ್‌

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.