ಕೇಂದ್ರ ಬಜೆಟ್ : ಎನ್‌ಇಪಿಗೆ ಗುಣಾತ್ಮಕ ಟಚ್‌


Team Udayavani, Feb 2, 2021, 1:00 AM IST

ಕೇಂದ್ರ ಬಜೆಟ್ : ಎನ್‌ಇಪಿಗೆ ಗುಣಾತ್ಮಕ ಟಚ್‌

ಕಳೆದವರ್ಷ ಕೊರೊನಾ ಇದ್ದಾಗ ರಾಷ್ಟ್ರೀಯ ಶಿಕ್ಷಣನೀತಿಯನ್ನು ಜಾರಿ ಮಾಡುವುದಾಗಿ ಕೇಂದ್ರಸರ್ಕಾರ ಘೋಷಿಸಿತ್ತು. ಇದೀಗ ಶಿಕ್ಷಣಕ್ಕೆ ಸಂಬಂಧಿಸಿದಂತೆ ಇನ್ನೊಂದಷ್ಟು ಮಹತ್ವದ ಘೋಷಣೆಗಳನ್ನು ವಿತ್ತಸಚಿವೆ ನಿರ್ಮಲಾ ಸೀತಾ ರಾಮನ್‌ ಮಾಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಡಿ ದೇಶಾದ್ಯಂತ ಆಯ್ದ 15,000 ಶಾಲೆಗಳನ್ನು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲಾ ಗುತ್ತದೆ. ಇವು ಸ್ಥಳೀಯವಾಗಿ ಅದ್ಭುತವಾಗಿ ರೂಪು ತಳೆಯುತ್ತವೆ ಎಂದು ನಿರ್ಮಲಾ ತಿಳಿಸಿದ್ದಾರೆ. 100 ನೂತನ ಸೈನಿಕ ಶಾಲೆಗಳು ಆರಂಭವಾಗಲಿವೆ. ಇದಕ್ಕೆ ಸರ್ಕಾರೇತರ ಸಂಸ್ಥೆಗಳು, ಶಾಸಗಿ ಶಾಲೆಗಳು, ರಾಜ್ಯಗಳ ಸಹಕಾರ ಪಡೆಯಲಾಗುತ್ತದೆ.

ಉನ್ನತ ಶಿಕ್ಷಣ: ದೇಶದ ಹಲವು ನಗರಗಳಲ್ಲಿ ಗರಿಷ್ಠಪ್ರಮಾಣದಲ್ಲಿ ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳಿವೆ. ಅಂತಹ 9 ನಗರಗಳಲ್ಲಿ ಶಿಕ್ಷಣಸಂಸ್ಥೆಗಳ ನಡುವೆ ಬಾಂಧವ್ಯ ಬೆಸೆಯಲು ಕೇಂದ್ರ ತೀರ್ಮಾನಿಸಿದೆ. ಅದಕ್ಕಾಗಿ ಹಣ ಮೀಸಲಿಡಲಾಗುತ್ತದೆ. ಹೊಸತಾಗಿ ಕೇಂದ್ರಾ ಡಳಿತ ಪ್ರದೇಶವಾಗಿ ಬದಲಾಗಿರುವ ಲಡಾಖ್‌ ಭಾಗದ ಜನರ ಆಸೆ ಈಡೇರಿದೆ. ಅಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಆರಂಭಿಸಲು ನಿರ್ಮಲಾ ಶಿಫಾರಸು ಮಾಡಿದ್ದಾರೆ.

ಪರಿಶಿಷ್ಟರಿಗೆ ಕೊಡುಗೆ: ಪರಿಶಿಷ್ಟ ಪಂಗಡದ (ಬುಡಕಟ್ಟು) ಶಿಕ್ಷಣಕ್ಕಾಗಿ 750 ಏಕಲವ್ಯ ವಸತಿ ಶಾಲೆ ಆರಂಭಿಸುವ ಗುರಿಯಿದೆ. ಈ ಶಾಲೆಗಳ ನಿರ್ವಹಣೆ ವೆಚ್ಚವನ್ನು 20ರಿಂದ 38 ಕೋಟಿ ರೂ.ಗೇರಿಸಲು ನಿರ್ಧರಿಸಲಾಗಿದೆ. ಹಾಗೆಯೇ ಪರ್ವತ ಪ್ರದೇಶಗಳಲ್ಲಿರುವ ಶಾಲೆಗಳಿಗೆ ಈ ಮೊತ್ತವನ್ನು 48 ಕೋಟಿ ರೂ.ಗೇರಿಸಲಾಗಿದೆ. ಇನ್ನು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶಿಕ್ಷಣ ಕ್ಕಾಗಿ, ಮೆಟ್ರಿಕ್‌ (ಎಸ್‌ಎಸ್‌ಎಲ್‌ಸಿ) ನಂತರದ ವಿದ್ಯಾರ್ಥಿವೇತನ ನೀಡಲು ಕೇಂದ್ರದ ನೆರವನ್ನು ಹೆಚ್ಚಿಸ ಲಾಗಿದೆ. ಅದರಂತೆ ಮುಂದಿನ 6 ವರ್ಷಗಳವರೆಗೆ 35,219 ಕೋ.ರೂ.ಗಳನ್ನು ಮೀಸಲಿಡಲಾಗಿದೆ.

ಶಿಕ್ಷಕರ ಸಾಮರ್ಥ್ಯ ಹೆಚ್ಚಳ: ಶಿಕ್ಷಕರಿಗೆ ರಾಷ್ಟ್ರೀಯ ವೃತ್ತಿಪರತೆ ಗುಣಮಟ್ಟ (ಎನ್‌ಪಿಎಸ್‌ಟಿ) ಯೋ ಜನೆ ಯಡಿ, ದೇಶದ 92 ಲಕ್ಷ ಶಿಕ್ಷಕರ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಹಾಗೆಯೇ ರಾಷ್ಟ್ರೀಯ ಡಿಜಿಟಲ್‌ ಶಿಕ್ಷಣ ವಿನ್ಯಾಸವನ್ನು ಜಾರಿ ಮಾಡಲಾಗುತ್ತದೆ. ಇದರ ಮೂಲಕ ಹಲವು ರೀತಿಯಲ್ಲಿ ಶೈಕ್ಷಣಿಕ ಸಾಧನೆ ಮಾಡಲಾಗುತ್ತದೆ.

56 ಲಕ್ಷ ಶಿಕ್ಷಕರಿಗೆ ತರಬೇತಿ ಗುರಿ
ಕಳೆದವರ್ಷ ಕೊರೊನಾ ಇದ್ದ ಕಾರಣ ದಿಗ್ಬಂಧನವನ್ನು ಘೋಷಿಸಲಾಗಿತ್ತು. ಇದರ ಮಧ್ಯೆಯೇ 30 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಡಿಜಿಟಲ್‌ ಮೂಲಕ ತರಬೇತುಗೊಳಿಸಲಾ ಗಿತ್ತು. ಇದನ್ನು 2021-22ರಲ್ಲಿ ಇನ್ನೂ ವಿಸ್ತರಿಸಲಾಗುತ್ತದೆ. ಈ ಬಾರಿ 56 ಲಕ್ಷ ಶಿಕ್ಷಕರನ್ನು ತರಬೇತುಗೊ ಳಿಸುವ ಗುರಿ ಹೊಂದಲಾಗಿದೆ. ಶಾಲಾ ಮುಖ್ಯಸ್ಥರು, ಶಿಕ್ಷಕರನ್ನು ತರಬೇತುಗೊ ಳಿಸುವ ನಿಸ್ಥಾ (NISTHA) ಇದನ್ನು ಸಾಧಿಸಲಾಗುತ್ತದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.