ರಾಹುಲ್ ಪ್ರಮಾಣ ಮಾಡಿಸಿಕೊಂಡಷ್ಟು ದುರದೃಷ್ಟಕರ ಸಂಗತಿ ಬೇರೊಂದಿಲ್ಲ: ಸ್ಮೃತಿ ಇರಾನಿ
Team Udayavani, Feb 6, 2022, 5:19 PM IST
ಪಣಜಿ: ಅಮೇಠಿಯಲ್ಲಿ ಸೋತಿರುವ ನಾಯಕರೊಬ್ಬರು ಗೋವಾಕ್ಕೆ ಬಂದು ತಮ್ಮ ಅಭ್ಯರ್ಥಿಗಳಾಗಿ ಆಯ್ಕೆಯಾದ ನಂತರ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ಪ್ರಮಾಣ ಮಾಡಿಸಿಕೊಂಡಷ್ಟು ದುರದೃಷ್ಟಕರ ಸಂಗತಿ ಬೇರೊಂದಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ರವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಶನಿವಾರ ಗೋವಾದ ಕಾಣಕೋಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ತವಡಕರ್ ರವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಕೋವಿಡ್ ಲಸಿಕೆ ನೀಡುವಾಗ, ವಿದ್ಯುತ್ ಮತ್ತು ಸಾರ್ವಜನಿಕ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಜನರಿಗೆ ಒದಗಿಸುವಾಗ ಬಿಜೆಪಿ ಎಂದಿಗೂ ಜಾತಿ,ಧರ್ಮ ಪರಿಗಣಿಸುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕದ ಮಾಜಿ ಶಾಸಕ ಸುನೀಲ್ ಹೆಗಡೆ, ಶಾಸಕ ಗಣಪತ್ ಗಾಯಕವಾಡ್, ಕಾಣಕೋಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ತವಡಕರ್, ಉಪಸ್ಥಿತರಿದ್ದರು.
ಸ್ಮೃತಿ ಇರಾನಿ ಅವರು ಪ್ರಚಾರ ಸ್ಥಳಕ್ಕೆ ಹೋಗುತ್ತಿದ್ದಾಗ ಅಪಘಾತಕ್ಕೊಳಗಾದವರಿಗೆ ಸಹಾಯ ಮಾಡಿ ಆದರ್ಶ ಮೆರೆದರು.
ಸ್ಮೃತಿ ಇರಾನಿ ಅವರು ವೆಲಿಮ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಾವಿಯೊ ರಾಡ್ರಿಗಸ್ ಪರವಾಗಿ ಮನೆ ಮನೆಗೆ ಪ್ರಚಾರ ಮಾಡಿದರು. ಗೃಹ ಸಚಿವ ಅಮಿತ್ ಶಾ ಅವರು ಗೋವಾಕ್ಕೆ ಭೇಟಿ ನೀಡುವ ಎರಡು ದಿನಗಳ ಮೊದಲು ಇರಾನಿ ಪ್ರಚಾರ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್