ವಿಶೇಷ ಶಾಲಾ ಶಿಕ್ಷಕರ ಮನವಿಗೆ ಸಿಗದ ಸ್ಪಂದನೆ; ಉದ್ಯೋಗ ಭದ್ರತೆ, ಗೌರವ ಧನ ಏರಿಕೆಯಿಲ್ಲ

ಉಪವಾಸ ಸತ್ಯಾಗ್ರಹದ ಎಚ್ಚರಿಕೆ

Team Udayavani, Apr 21, 2022, 8:15 AM IST

ವಿಶೇಷ ಶಾಲಾ ಶಿಕ್ಷಕರ ಮನವಿಗೆ ಸಿಗದ ಸ್ಪಂದನೆ; ಉದ್ಯೋಗ ಭದ್ರತೆ, ಗೌರವ ಧನ ಏರಿಕೆಯಿಲ್ಲ

ಸಾಂದರ್ಭಿಕ ಚಿತ್ರ.

ಕುಂದಾಪುರ: ವಿಶೇಷ ಮಕ್ಕಳಿಗೆ ತರಬೇತಿ ಸಹಿತ ಶಿಕ್ಷಣ ನೀಡುತ್ತಿರುವ ವಿಶೇಷ ಶಾಲಾ ಶಿಕ್ಷಕರ ಬದುಕು ಡೋಲಾಯಮಾನವಾಗಿದೆ. ಕಳೆದ 20 – 30 ವರ್ಷಗಳಿಂದ ಭರವಸೆಯ ಎಳೆ ಹಿಡಿದು ಸೇವೆ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರ ಬೇಡಿಕೆಗಳು ಇನ್ನೂ ಈಡೇರಿಲ್ಲ.

ಸರಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹವೇ ನಮಗಿರುವ ದಾರಿ ಎಂದು ಉಡುಪಿ ಜಿಲ್ಲಾ ವಿಶೇಷ ಶಿಕ್ಷಕ ಮತ್ತು ಶಿಕ್ಷಕೇತರರ ಸಂಘ ತಿಳಿಸಿದೆ. ಹಲವು ವರ್ಷಗಳಿಂದ ಸರಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನಕ್ಕೆ ಬಂದಿಲ್ಲ.

2007ರಿಂದ ಇಲ್ಲಿಯವರೆಗೆ ವಿಶೇಷ ಶಿಕ್ಷಕ -ಶಿಕ್ಷಕೇತರರ ಸಂಘ ರಚಿಸಿ ಹಲವಾರು ಬಾರಿ ಹೋರಾಟ ಮಾಡಿದ್ದು, ಸಂಬಂಧಪಟ್ಟ ಎಲ್ಲರಿಗೂ ಮನವಿ ನೀಡಿದರೂ ಈವರೆಗೆ ಸಿಕ್ಕಿರುವುದು ಭರವಸೆ ಮಾತ್ರ.

530 ವಿಶೇಷ ಶಾಲೆಗಳು
ರಾಜ್ಯದಲ್ಲಿ ಅಂದಾಜು 530 ವಿಶೇಷ ಶಾಲೆಗಳಿವೆ. ಅದರಲ್ಲಿ 141 ಶಾಲೆಯವರು ಶಿಶುಕೇಂದ್ರಿತ ಅನುದಾನ ಪಡೆಯುತ್ತಿದ್ದಾರೆ. ಮಕ್ಕಳ ಸಂಖ್ಯೆಗೆ ಅನುಸಾರವಾಗಿ ಅನುದಾನ ನೀಡುತ್ತಿರುವುದರಿಂದ ಮಕ್ಕಳ ಸಂಖ್ಯೆ ಕಡಿಮೆಯಾದಲ್ಲಿ ಶಿಕ್ಷಕರಿಗೆ ಉದ್ಯೋಗದ ಭರವಸೆ ಇಲ್ಲ. ಶ್ರವಣದೋಷವುಳ್ಳ ಮಕ್ಕಳ ಶಾಲೆಯಲ್ಲಿ 10:1, ಅಂಧ ಮಕ್ಕಳ ಶಾಲೆಯಲ್ಲಿ 12:1, ದೈಹಿಕ ನ್ಯೂನತೆ ಇರುವ ವಿಶೇಷ ಶಾಲೆಗಳಲ್ಲಿ 7:1 ಅನುಪಾತದಲ್ಲಿ ಶಿಕ್ಷಕರ ನೇಮಕಾತಿ ನಡೆಯುತ್ತಿದೆ.

ಬೇಕು ನಿರಂತರ ಆರೈಕೆ
ವಿಶೇಷ ಮಕ್ಕಳ ಶಿಕ್ಷಣದಲ್ಲಿ ಅವರ ಯೋಗಕ್ಷೇಮ, ಲಾಲನೆ-ಪಾಲನೆ, ಆರೋಗ್ಯ ಸಂರಕ್ಷಣೆ, ವೃತ್ತಿ ತರಬೇತಿ ಥೆರಪಿ ಮುಂತಾದ ಚಟುವಟಿಕೆಗಳ ಜತೆಗೆ ಮಕ್ಕಳ ಆರೈಕೆ ಮಾಡಬೇಕಾಗುತ್ತದೆ. ಇಷ್ಟೆಲ್ಲ ಮಾಡಿದರೂ ಕನಿಷ್ಠ ವೇತನವೂ ದೊರೆಯದಿರುವುದು ಶೋಚನೀಯ. ಈಗ ಪಡೆಯುತ್ತಿರುವ ಗೌರವಧನದಿಂದ ಜೀವನ ನಿರ್ವಹಣೆ ಕಷ್ಟ. ಸರಕಾರ ಇನ್ನೂ ಮನವಿಗೆ ಸ್ಪಂದಿಸದಿದ್ದಲ್ಲಿ, ಗೌರವಧನ ಏರಿಸದಿದ್ದರೆ, ಉಪವಾಸ ಸತ್ಯಾಗ್ರಹ ಒಂದೇ ದಾರಿ
ಎಂದು ಉಡುಪಿ ಜಿಲ್ಲಾ ವಿಶೇಷ ಶಿಕ್ಷಕ ಹಾಗೂ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ಎಚ್‌. ತಿಳಿಸಿದ್ದಾರೆ.

ಪ್ರಮುಖ ಬೇಡಿಕೆಗಳೇನು?
ದಿನದ 24 ತಾಸು ಕೆಲಸ ನಿರ್ವಹಿಸುವ ವಿಶೇಷ ಶಾಲಾ ಸಿಬಂದಿಗೆ ಉದ್ಯೋಗದ ಭದ್ರತೆ ಇಲ್ಲ. ಗೌರವಧನ ಏರಿಕೆಯಾಗಿಲ್ಲ. ಶ್ರವಣದೋಷ ಮತ್ತು ಅಂಧ ಮಕ್ಕಳಿಗೆ ಕಲಿಸುತ್ತಿರುವ ಶಿಕ್ಷಕರಿಗೆ ಕೇವಲ 13,500 ರೂ., ಮುಖ್ಯ ಶಿಕ್ಷಕರಿಗೆ 16 ಸಾವಿರ ರೂ. ಮತ್ತು ಆಯಾಗಳಿಗೆ 6 ಸಾವಿರ ರೂ. ವೇತನ ನೀಡಲಾಗುತ್ತಿದೆ. ದೈಹಿಕ ನ್ಯೂನತೆ ಹೊಂದಿರುವ ಮಕ್ಕಳ ಶಾಲೆ ಶಿಕ್ಷಕರಿಗೆ 13,500 ರೂ., ಮುಖ್ಯ ಶಿಕ್ಷಕರಿಗೆ 18 ಸಾವಿರ ರೂ., ಆಯಾಗಳಿಗೆ 9 ಸಾವಿರ ರೂ. ಲಭಿಸುತ್ತದೆ. ಇಲ್ಲಿಯೂ ಅನುದಾನದಲ್ಲಿ ಇಬ್ಬಗೆಯ ನೀತಿ ಇದೆ. ಎಲ್ಲ ವಿಶೇಷ ಶಿಕ್ಷಕರಿಗೆ ಮತ್ತು ಸಿಬಂದಿಗೆ ಒಂದೇ ವೇತನ ನಿಯಮ ಅನುಷ್ಠಾನವಾಗಲಿ ಎನ್ನುವುದು ಅವರ ಆಗ್ರಹ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.