ನಾಳೆಯಿಂದ ಕೆಎಸ್‌ಆರ್‌ಟಿಸಿ ಡಿಪೋ ನವೀಕರಣ

4.5 ಕೋ.ರೂ. ವೆಚ್ಚದಲ್ಲಿ ಕಾಮಗಾರಿ; 2018ರಲ್ಲಿ ಘೋಷಣೆಯಾಗಿದ್ದ ಯೋಜನೆ

Team Udayavani, Jan 30, 2022, 5:50 AM IST

ನಾಳೆಯಿಂದ ಕೆಎಸ್‌ಆರ್‌ಟಿಸಿ ಡಿಪೋ ನವೀಕರಣ

ಕುಂದಾಪುರ: ಅಂತೂ ಇಂತೂ ಕುಂದಾಪುರದ ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ನವೀಕರಣ ಕಾಮಗಾರಿಗೆ ಕಾಲ ಕೂಡಿ ಬಂದಿದೆ. ಇಲ್ಲಿನ ಬಸ್‌ ಡಿಪೋದ ಕಟ್ಟಡ ಹಾಗೂ ಎಲ್ಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 4.5 ಕೋ.ರೂ. ಮಂಜೂರಾಗಿದ್ದು, ಜ. 31ರಿಂದ ಕಾಮಗಾರಿ ಆರಂಭವಾಗಲಿದೆ.

2018ರ ನ. 16ರಂದು ಕುಂದಾಪುರಕ್ಕೆ ಭೇಟಿ ನೀಡಿದ್ದ ಆಗಿನ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು, ಕುಂದಾಪುರದ ಬಸ್ರೂರು ಮೂರುಕೈ ಬಳಿಯಿರುವ ಹಳೆಯ ಕೆಎಸ್‌ಆರ್‌ಟಿಸಿ ಘಟಕವನ್ನು ಕೆಡವಿ, ಮರು ನಿರ್ಮಾಣಕ್ಕೆ 4.5 ಕೋ.ರೂ. ಅನುದಾನವನ್ನು ಘೋಷಿಸಿದ್ದರು. ಸಚಿವರು ಅನುದಾನ ಘೋಷಿಸಿ, 3 ವರ್ಷ ಕಳೆದರೂ, ಇನ್ನೂ ನವೀಕರಣ ಕಾಮಗಾರಿ ಮಾತ್ರ ಕೈಗೂಡಿರಲಿಲ್ಲ.

ಏನೇನು ಅಭಿವೃದ್ಧಿ ?
ಈಗಿರುವ ಕೆಎಸ್‌ಆರ್‌ಟಿಸಿ ಡಿಪೋ ಇರುವ ಜಾಗದಲ್ಲಿಯೇ ಅದನ್ನು ಕೆಡವಿ ಹೊಸದಾಗಿ ಕಟ್ಟಡ, ಬಸ್‌ ನಿಲ್ಲಿಸುವ ಬೇ, ದುರಸ್ತಿಗೆ ಅನುಕೂಲವಾಗುವಂತಹ ಬೇಗಳು, ಹೊಸ ಜನರೇಟರ್‌, ಚಾಲಕ – ನಿರ್ವಾಹಕರಿಗೆ ವಿಶ್ರಾಂತಿ ಕೊಠಡಿ, ವಾಷಿಂಗ್‌ ರ್‍ಯಾಂಪ್‌, ಆವರಣ ಗೋಡೆ ಹೊಸದಾಗಿ ನಿರ್ಮಾಣವಾಗಲಿದೆ. ಇದಲ್ಲದೆ ಹೆದ್ದಾರಿಯ ಮಳೆ ನೀರು ಹರಿದು ಬರದಂತೆ ಸಹ ವ್ಯವಸ್ಥೆಯಾಗಲಿದೆ. ಈಗ ಕಾಮಗಾರಿ ಆರಂಭವಾಗಲಿದ್ದು, ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ.

103 ಬಸ್‌ ನಿಲುಗಡೆ
ಕುಂದಾಪುರದಿಂದ ಬೆಂಗಳೂರು, ಶಿವಮೊಗ್ಗ, ಮೈಸೂರು, ಉತ್ತರ ಕನ್ನಡ, ಹುಬ್ಬಳ್ಳಿ ಸಹಿತ ರಾಜ್ಯದ ಹೆಚ್ಚಿನ ಎಲ್ಲ ಜಿಲ್ಲೆಗಳಿಗೂ ಬಸ್‌ ಸಂಪರ್ಕವಿದೆ. ಪ್ರಸ್ತುತ ಇಲ್ಲಿ 103 ಬಸ್‌ಗಳ ನಿಲುಗಡೆಯಿದೆ.

ಬದಲಿ ವ್ಯವಸ್ಥೆ
ಡಿಪೋ ನವೀಕರಣ ಕಾಮಗಾರಿ ಸಲುವಾಗಿ ಈಗ ಇಲ್ಲಿರುವ ಬಸ್‌ಗಳನ್ನು ನಿಲ್ಲಿಸಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗದಲ್ಲಿ ಜಾಗ ಸಮತಟ್ಟು ಮಾಡಲಾಗಿದೆ. ಇಲ್ಲಿ ಕೆಲವು ಬಸ್‌ಗಳನ್ನು ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

1 ವರ್ಷದವರೆಗೆ ಕಾಮಗಾರಿ
ಕುಂದಾಪುರ ಕೆಎಸ್‌ಆರ್‌ಟಿಸಿ ಘಟಕದ ನವೀಕರಣ ಕಾಮಗಾರಿ ಜ.31 ರಿಂದ ಆರಂಭವಾಗಲಿದೆ. ಈಗಿರುವ ಬಸ್‌ಗಳ ನಿಲುಗಡೆಗೆ ಪರ್ಯಾಯ ವ್ಯವಸ್ಥೆ ಆಗಬೇಕಿರು ವುದರಿಂದ ಸ್ವಲ್ಪ ವಿಳಂಬವಾಗಿದೆ. ಮುಂದಿನ ಒಂದು ವರ್ಷದವರೆಗೆ ಕಾಮಗಾರಿ ನಡೆಯಲಿದೆ. ಹೊಸ ಕಟ್ಟಡ, ರ್‍ಯಾಂಪ್‌, ಬಸ್‌ ಬೇ ಸಹಿತ 4.5 ಕೋ.ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.
-ಸುಜಾತಾ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಪ್ರಭಾರ), ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ: ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ: ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.