ಉಪ್ಪಿನಕುದ್ರು ಲವ್‌ ಜೆಹಾದ್‌ ಪ್ರಕರಣ: ವಿಹಿಂಪ, ಬಜರಂಗದಳ ಪ್ರತಿಭಟನೆ


Team Udayavani, Jun 1, 2022, 1:21 AM IST

ಉಪ್ಪಿನಕುದ್ರು ಲವ್‌ ಜೆಹಾದ್‌ ಪ್ರಕರಣ: ವಿಹಿಂಪ, ಬಜರಂಗದಳ ಪ್ರತಿಭಟನೆ

ಕುಂದಾಪುರ: ಉಪ್ಪಿನಕುದ್ರು ಲವ್‌ ಜೆಹಾದ್‌ ಪ್ರಕರಣದ ಹಿಂದಿನ ಶಕ್ತಿಗಳ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಪರಾರಿಯಾದ ಆರೋಪಿಗಳು ಕೇರಳದಲ್ಲಿ ಇದ್ದರು. ಅಲ್ಲಿ ಲವ್‌ ಜೆಹಾದ್‌ಗೆ ತರಬೇತಿ ನೀಡುವ ಸಂಸ್ಥೆಯೇ ಕಾರ್ಯಾಚರಿಸುತ್ತಿದೆ. ಘಟನೆಯ ಹಿಂದಿನ ಸಂಘಟನೆ, ಶಕ್ತಿಗಳ ಮುಖವಾಡ ಬಯಲಾಗಬೇಕು ಎಂದು ವಿಶ್ವ ಹಿಂದೂ ಪರಿಷತ್‌ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಹೇಳಿದರು.

ಅವರು ಮಂಗಳವಾರ ಸಂಜೆ ಇಲ್ಲಿನ ಶಾಸ್ತ್ರಿ ವೃತ್ತದ ಬಳಿ ವಿಹಿಂಪ ಹಾಗೂ ಬಜರಂಗದಳ ವತಿಯಿಂದ ನಡೆದ ಲವ್‌ ಜೆಹಾದ್‌ ವಿರುದ್ಧದ ಪ್ರತಿಭಟನೆ ಹಾಗೂ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉನ್ನತ ತನಿಖೆಗೆ ಆಗ್ರಹಿಸಿ ಬುಧವಾರ ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿಗೆ ಮನವಿ ನೀಡಲಾಗುವುದು. ಮುಂದಿನ ದಿನಗಳಲ್ಲಿ ಶಿಲ್ಪಾ ರೀತಿ ಬೇರೆ ಹೆಣ್ಣುಮಕ್ಕಳಿಗೆ ಅನ್ಯಾಯ ಆದರೆ ಹಿಜಾಬ್‌ ಘಟನೆಯಂತೆಯೇ ಆರ್ಥಿಕ ಬಹಿಷ್ಕಾರ ಹಾಕಲಾಗುವುದು. ಕುಂದಾಪುರದ ಜನ ಸೌಮ್ಯವಾದಿಗಳು. ಇಂದು ಒಂದು ಮನೆಯಲ್ಲಿ ನಡೆದುದು ನಾಳೆ ಇನ್ನೊಂದಷ್ಟು ಮನೆಗಳಿಗೆ ಹಬ್ಬದಂತೆ ಹಿಂದೂ ಸಮಾಜ ಜಾಗೃತಗೊಳ್ಳಬೇಕು. ಸಾಮಾ ಜಿಕ ಜಾಲತಾಣಗಳಿಂದ ಹೆಣ್ಮಕ್ಕಳು ದೂರ ಇರಬೇಕು ಎಂದರು.

ಪ್ರತೀ ಗ್ರಾಮದಲ್ಲಿ
ಮಹಿಳಾ ಬ್ರಿಗೇಡ್‌
ಬಜರಂಗದಳ ಪ್ರಾಂತ ಸಂಯೋಜಕ ಸುನಿಲ್‌ ಕೆ.ಆರ್‌. ಮಾತನಾಡಿ, ಲವ್‌ ಜೆಹಾದ್‌ ವ್ಯವಸ್ಥಿತವಾಗಿ ವ್ಯಾಪಿಸುತ್ತಿದೆ. ಇದು ಕೇವಲ ಪ್ರತಿಭಟನೆ ಅಲ್ಲ, ಜನಜಾಗೃತಿ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರತೀ ಗ್ರಾಮಗಳಲ್ಲಿ ಮಹಿಳಾ ಬ್ರಿಗೇಡ್‌ ಆರಂಭಿಸಲಾಗುವುದು ಎಂದರು.

ವಿಹಿಂಪ ಉಡುಪಿ ಜಿಲ್ಲಾ ಕಾರ್ಯ ದರ್ಶಿ ದಿನೇಶ್‌ ಮೆಂಡನ್‌, ಸಮಾಜದ ರಕ್ಷಣೆಗೆ ತ್ರಿಶೂಲ ದೀಕ್ಷೆ ನೀಡಲಾಗಿದೆ. ಅಗತ್ಯ ಬಿದ್ದರೆ ಅದರ ಉಪಯೋಗ ನಮಗೆ ತಿಳಿದಿದೆ. ಘಟನೆಯ ಹಿಂದಿನ ಎಲ್ಲ ಷಡ್ಯಂತ್ರ ಬಯಲಾಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು.

ವಿಹಿಂಪ ಕೇಂದ್ರ ವಿಶ್ವಸ್ತ ಮಂಡಳಿ ಸದಸ್ಯ ಪ್ರೇಮಾನಂದ ಶೆಟ್ಟಿ ಬಜರಂಗದಳ ವಿಭಾಗ ಸಂಯೋಜಕ ಭುಜಂಗ ಕುಲಾಲ್‌, ವಿಹಿಂಪ ಜಿಲ್ಲಾ ಉಪಾಧ್ಯಕ್ಷ ಶ್ರೀಧರ ಬಿಜೂರು, ಮಾತೃಶಕ್ತಿ ಪ್ರಮುಖ್‌ ಪೂರ್ಣಿಮಾ ಸುರೇಶ್‌, ಮೃತ ಶಿಲ್ಪಾಳ ಸಹೋದರ ರಾಘವೇಂದ್ರ ದೇವಾಡಿಗ, ವಿಹಿಂಪ ಜಿಲ್ಲಾ ಸಂಪರ್ಕ ಪ್ರಮುಖ್‌ ಗಿರೀಶ್‌ ಕುಂದಾಪುರ, ಬಜರಂಗದಳ ತಾಲೂಕು ಸಂಯೋಜಕ ಸುಧೀರ್‌ ಮೇರ್ಡಿ, ಸಂಘಟನೆ ಮುಖಂಡರಾದ ಗುರುರಾಜ್‌ ಸಂಗಂ, ವಸಂತ ಸಂಗಂ, ವಿಹಿಂಪ ತಾಲೂಕು ಕಾರ್ಯದರ್ಶಿ ಪ್ರದೀಪ್‌ ಮಾರ್ಕೋಡು ಉಪಸ್ಥಿತರಿದ್ದರು.

ಸುರೇಂದ್ರ ಕೋಟೇಶ್ವರ ನಿರ್ವಹಿಸಿದರು. ಹೊಸ ಬಸ್‌ ನಿಲ್ದಾಣದಿಂದ ಶಾಸ್ತ್ರಿ ವೃತ್ತದ ವರೆಗೆ ಮೆರವಣಿಗೆ ನಡೆಯಿತು. ಡಿವೈಎಸ್‌ಪಿಗೆ ಮನವಿ ನೀಡಲಾಯಿತು.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.