Uppunda ತಾರಾಪತಿ: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಕುಸಿದು ಬಿದ್ದು ಮೀನುಗಾರ ಸಾವು
Team Udayavani, Aug 19, 2023, 11:01 PM IST
ಉಪ್ಪುಂದ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಕುಸಿದು ಬಿದ್ದು ಮೀನುಗಾರ ಮೃತಪಟ್ಟ ಘಟನೆ ಆ. 19ರಂದು ಕಿರಿಮಂಜೇಶ್ವರದಲ್ಲಿ ಸಂಭವಿಸಿದೆ.
ತಾರಾಪತಿ ಪಾಳ್ಯದವರ ತೊಪ್ಲು ಮಯ್ಯಾಳನ ಮನೆ ಕುಮಾರ್ (44) ಮೃತಪಟ್ಟವರು.
ಆ. 19ರಂದು ಬೆಳಗ್ಗೆ ಕಿರಿಮಂಜೇಶ್ವರ ಬಳಿ ಅರಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಬಲೆಯನ್ನು ಎಳೆಯುತ್ತಿರುವಾಗ ದೋಣಿಯೊಳಗೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು ಚಿಕಿತ್ಸೆಯ ಬಗ್ಗೆ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಕುಮಾರ್ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.