ಸರಕಾರದ ಧೋರಣೆಗೆ ಮೇಲ್ಮನೆಯಲ್ಲಿ ಗದ್ದಲ- 7ನೇ ವೇತನ ಆಯೋಗ ಜಾರಿಗೆ ಆಗ್ರಹ
ಗದ್ದಲದಿಂದ ಸದನ ಮುಂದೂಡಿಕೆ
Team Udayavani, Dec 5, 2023, 11:09 PM IST
ಬೆಳಗಾವಿ: ಸರಕಾರಿ ನೌಕರರಿಗೆ 7ನೇ ವೇತನ ಆಯೋಗಕ್ಕೆ ಸಂಬಂಧಿಸಿದ ವರದಿ ವಿಚಾರದಲ್ಲಿ ಸರಕಾರದ ಧೋರಣೆ ಖಂಡಿಸಿ ಮೇಲ್ಮನೆಯಲ್ಲಿ ಬಾವಿಗಿಳಿದ ವಿಪಕ್ಷಗಳು, ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಪಟ್ಟುಹಿಡಿದವು. ಇದರಿಂದ ಉಂಟಾದ ಗದ್ದಲದಿಂದ ಸದನವನ್ನು ಬುಧವಾರಕ್ಕೆ ಮುಂದೂಡಲಾಯಿತು.
ಮಂಗಳವಾರ ಮಧ್ಯಾಹ್ನ ಸದನ ಆರಂಭವಾಗುತ್ತಿದ್ದಂತೆ ನಿಯಮ 330ರ ಅಡಿ ವಿಷಯ ಪ್ರಸ್ತಾವಿಸಿದ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ, ಸರಕಾರಿ ನೌಕರರಿಗೆ 7ನೇ ವೇತನ ಆಯೋಗ ವರದಿ ಪೂರ್ಣಗೊಂಡಿದ್ದರೂ, ವಿನಾಕಾರಣ ಸರಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ಎರಡೂವರೆ ಲಕ್ಷ ಹುದ್ದೆಗಳು ಖಾಲಿ ಇವೆ. ಅದರಿಂದ ವೇತನ ರೂಪದಲ್ಲಿ ಪಾವತಿಸಬಹುದಾದ ವಾರ್ಷಿಕ ಅಂದಾಜು ಹತ್ತು ಸಾವಿರ ಕೋಟಿ ರೂ.ಉಳಿಯುತ್ತದೆ. ಅದೇ ಹಣವನ್ನು ಈ ವೇತನ ಆಯೋಗ ಜಾರಿಗೆ ವಿನಿಯೋಗಿಸಲು ಅವಕಾಶವಿದೆ. ಆದ್ದರಿಂದ ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ನ ಬಹುತೇಕ ಎಲ್ಲ ಸದಸ್ಯರು ದನಿಗೂಡಿಸಿದರು. ಆಗ ಪ್ರತಿಕ್ರಿಯಿಸಿದ ಸಭಾ ನಾಯಕ ಬೋಸರಾಜ, ಸೂಕ್ತ ಅಧ್ಯಯನ ನಡೆಸುವ ಅಗತ್ಯತೆ ಮನಗಂಡು ಬರುವ ಮಾರ್ಚ್ 15ರವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ಡಿಸೆಂಬರ್ನಲ್ಲಿದ್ದೇವೆ. ವರದಿ ಕೈಸೇರುತ್ತಿದ್ದಂತೆ ನ್ಯಾಯ ಒದಗಿಸಲು ಸರಕಾರ ಬದ್ಧ ಎಂದರು. ಇದಕ್ಕೆ ತೃಪ್ತರಾಗದ ಪ್ರತಿಪಕ್ಷಗಳ ಸದಸ್ಯರು, ವರದಿ ಪೂರ್ಣಗೊಂಡಾಗಿದೆ. ಆದರೆ, ತೆಗೆದುಕೊಳ್ಳಲು ಸರಕಾರ ತಯಾರಿಲ್ಲ. ಈ ಧೋರಣೆ ಯಾಕೆ? ಈ ವಿಚಾರದಲ್ಲಿ ಸ್ವತಃ ಮುಖ್ಯಮಂತ್ರಿಗಳು ಸದನದಲ್ಲಿ ಸ್ಪಷ್ಟ ನಿಲುವು ಪ್ರಕಟಿಸಬೇಕೆಂದು ಒತ್ತಾಯಿಸಿದರು.
ಮಧ್ಯಪ್ರವೇಶಿಸಿದ ಸಭಾಪತಿಗಳು, ಮನವೊಲಿಸಲು ಯತ್ನಿಸಿದರು. ಆದರೆ, ಪಟ್ಟುಸಡಿಲಿಸದ ಕಾರಣ ಸದನ ಮುಂದೂಡಲಾಯಿತು. ಇದಕ್ಕೂ ಮುನ್ನ ಸದಸ್ಯರಾದ ಶಶೀಲ ನಮೋಶಿ, ಭೋಜೇಗೌಡ, ತೇಜಸ್ವಿನಿಗೌಡ, ಎಸ್.ವಿ. ಸಂಕನೂರ, ಅನಿಲ್ ಕುಮಾರ್, ಮರಿತಿಬ್ಬೇಗೌಡ, ಎಚ್. ವಿಶ್ವನಾಥ್ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್