ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಜೊತೆಗೆ ಹೈಬ್ರೀಡ್ ತಳಿಗಳನ್ನು ಬಳಸಲು ಕೃಷಿ ವಿ.ವಿ ಸಲಹೆ
Team Udayavani, Sep 19, 2020, 6:38 PM IST
ಹನೂರು : ದೇಶದಲ್ಲಿ ಪ್ರಸ್ತುತ 292 ಮಿಲಿಯನ್ ಟನ್ ಆಹಾರ ಪದಾರ್ಥಗಳ ಉತ್ಪಾದನೆಯಾಗುತ್ತಿದ್ದು, ಏರುತ್ತಿರುವ ಜನಸಂಖ್ಯೆಗನುಗುಣವಾಗಿ ಪೌಷ್ಠಿಕಾಂಶ ಮತ್ತು ಲಘು ಲವಣಾಂಶಗಳ ಉತ್ಪಾನೆ ಅವಶ್ಯಕತೆಯಿದೆ. ಈ ಹಿನ್ನೆಲೆ ಅತ್ಯಾಧುನಿಕ ತಾಂತ್ರಿಕತೆ ಮತ್ತು ಹೈಬ್ರೀಡ್ ಬಿತ್ತನೆ ತಳಿಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ|ಎಸ್.ರಾಜೇಂದ್ರ ಪ್ರಸಾದ್ ತಿಳಿಸಿದರು.
ತಾಲೂಕಿನ ಗಡಿಯಂಚಿನ ನೆಕ್ಕುಂದಿ ಪೋಡಿಗೆ ಭೇಟಿ ನೀಡಿ ಬುಡಕಟ್ಟು ಉಪ ಯೋಜನೆಯಡಿ ತರಭೇತಿ ಮತ್ತು ಕೃಷಿ ಪರಿಕರಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜೇಂದ್ರ ಪ್ರಸಾದ್ ದೇಶದಲ್ಲಿ ದಿನೇದಿನೇ ಜನಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಆಹಾರ ಪದಾರ್ಥಗಳೂ ಹೆಚ್ಚಿನ ಉತ್ಪಾದನೆಯಾಗಬೇಕಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಗಿರಿಜನರಿಗಾಗಿ ಹತ್ತು ಹಲವು ಯೋಜನೆಗಳನ್ನು ನೀಡುತ್ತಿದೆ. ಅಲ್ಲದೆ ಆ ಆಹಾರದಲ್ಲಿ ಮಾನವನಿಗೆ ದೈಹಿಕವಾಗಿ ಅಗತ್ಯವಿರುವ ಪೌಷ್ಠಿಕಾಂಶ ಮತ್ತು ಲಘು ಲವಣಾಂಶಗಳ ಆಹಾರ ಪದಾರ್ಥ ಉತ್ಪಾದನೆ ಮಾಡಬೇಕಿದೆ. ಆದರೆ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅವಶ್ಯಕವಿರುವಷ್ಟು ಪೌಷ್ಠಿಕಾಂಶ ದೊರೆಯುತ್ತಿಲ್ಲ. ಆದುದರಿಂದ ಕೃಷಿ ವಿಶ್ವವಿದ್ಯಾನಿಲಯಗಳ ಮೂಲಕ ಉತ್ತಮವಾದ ಅಭಿವೃದ್ಧಿಪಡಿಸಿದ ಹೈಬ್ರೀಡ್ ಬಿತ್ತನೆ ಬೀಗಳನ್ನು ನೀಡಲಾಗುತ್ತಿದೆ. ಈ ಹೈಬ್ರೀಡ್ ತಳಿಗಳು ಸ್ಥಳೀಯವಾಗಿ ಬಳಕೆ ಮಾಡುವ ತಳಿಗಳಿಗಿಂತ 2-3ಪಟ್ಟು ಹೆಚ್ಚಿನ ಇಳುವರಿ ನೀಡುತ್ತವೆ. ಆದುದರಿಂದ ಈ ನೂತನ ತಳಿಗಳನ್ನು ಬೆಳೆಯುವ ಮೂಲಕ ಉತ್ತಮ ಇಳುವರಿ ಪಡೆದು ರೈತರೂ ಕೂಡ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕಿವಿಮಾತು ಹೇಳಿದರು.
ಜಿ.ಪಂ ಸದಸ್ಯ ಬಸವರಾಜು ಮಾತನಾಡಿ ರಾಮಾಪುರ ಹೋಬಳಿಯು ರಾಜ್ಯದ ಕಟ್ಟಕಡೆಯ ಮತ್ತು ಆರ್ಥಿಕವಾಗಿ ಹಿಂದುಳಿದ ಹೋಬಳಿಯಾಗಿದೆ. ಈ ಭಾಗದಲ್ಲಿ ಕೃಷಿ ವಿಶ್ವವಿದ್ಯಾನಿಲಯದವತಿಯಿಂದ ದೊರಕುವ ಎಲ್ಲಾ ಸವಲತ್ತುಗಳನ್ನು ದೊರಕಿಸಿಕೊಟ್ಟು ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಮತ್ತು ರೈತರಿಗೆ ಕಾಲಕಾಲಕ್ಕೆ ಅಗತ್ಯ ತರಭೇತಿ ಮತ್ತು ಮಾಹಿತಿಯನ್ನು ನೀಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ 150 ಗಿರಿಜನ ಕುಟುಂಬಗಳಿಗೆ ಗುದ್ದಲಿ, ಸನಿಕೆ, ಕುಡುಗೋಲು , ಟಾರ್ಪಲಿನ್ ಮತ್ತು ಆಹಾರ ಪದಾರ್ಥಗಳ ಬಿತ್ತನೆ ಬೀಜಗಳ ಸಂರಕ್ಷಣಾ ಪೆಟ್ಟಿಗೆಯನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾನಿಲಯದ ಕೆ.ಮಧುಸೂದನ್, ಎಂ.ಪಿ.ರಾಜಣ್ಣ, ಟಿ.ಎಂ.ರಮಣಪ್ಪ, ನಿರಂಜನಮೂರ್ತಿ, ರಮಣಪ್ಪ, ಸಿದ್ಧರಾಜು, ವಿಶ್ವನಾಥ್ ಮತ್ತು ರೀಡಾ ಸಂಸ್ಥೆಯ ಶಿವರುದ್ರಪ್ಪ ಇನ್ನಿತರರು ಹಾಜರಿದ್ದರು.
ಜಮೀನುಗಳಿಗೆ ಭೇಟಿ, ಪರಿಶೀಲನೆ: ಕಾರ್ಯಕ್ರಮಕ್ಕೂ ಮುನ್ನ ಕುಲಪರಿ ಡಾ.ರಾಜೇಂದ್ರ ಪ್ರಸಾದ್ ಅವರು ಮಾದೇವಮ್ಮ ಎಂಬ ರೈತ ಮಹಿಳೆಯ ಜಮೀನಿಗೆ ಭೇಟಿ ನೀಡಿ ವಿಶ್ವವಿದ್ಯಾನಿಲಯದವತಿಯಿಂದ ನೀಡಿರುವ ಎಂಎಲ್-365 ತಳಿಯ ರಾಗಿ ಬೆಳೆ ಮತ್ತು ತರಕಾರಿ ಬೆಳೆಗಳನ್ನು ಪರಿಶೀಲನೆ ಮಾಡಿದರು. ಇದೇ ವೇಳೆ ರೈತ ಮಹಿಳೆಯೊಂದಿಗೆ ಔಪಚಾರಿಕ ಚರ್ಚೆ ನಡೆಸಿ ವಿಶ್ವವಿದ್ಯಾನಿಲಯ ನೀಡುತ್ತಿರುವ ಸವಲತ್ತುಗಳ ಬಗ್ಗೆ ತಿಳಿಸಿ ಇದರ ಸದುಪಯೋಗಪಡೆದುಕೊಳ್ಳುವಂತೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ