ಕಡಿಮೆ ಖರ್ಚು; ಮಣ್ಣಿಗೂ ಆರೋಗ್ಯಕ್ಕೂ ಪೂರಕ

ಕಲ್ಲಂಗಡಿ ಬೆಳೆಗೆ ಸಾವಯವ ಕೀಟನಾಶಕ ಬಳಕೆ

Team Udayavani, May 14, 2020, 5:30 AM IST

ಕಡಿಮೆ ಖರ್ಚು; ಮಣ್ಣಿಗೂ ಆರೋಗ್ಯಕ್ಕೂ ಪೂರಕ

ಕೋಟ: ದಶಕಗಳ ಹಿಂದೆ‌ ರೈತರು ಸರಳ ಸಾವಯವ ವಿಧಾನದ ಮೂಲಕವೇ ಬೆಳೆಗಳಿಗೆ ತಗಲುವ ರೋಗಬಾಧೆಗಳನ್ನು ಹತೋಟಿ ಮಾಡುತ್ತಿದ್ದರು. ಆದರೆ ಆಧುನಿಕ ಕೃಷಿ ಪದ್ಧತಿಯ ಪರಿಣಾಮ ರಾಸಾಯನಿಕಯುಕ್ತ ಕೀಟನಾಶಕಗಳ ಬಳಕೆ ಹೇರಳವಾಯಿತು ಹಾಗೂ ಇದರಿಂದ ಕ್ಯಾನ್ಸರ್‌ ಮುಂತಾದ ಮಾರಕ ರೋಗಗಳಿಗೆ ತುತ್ತಾಗಬೇಕಾಯಿತು. ಈ ನಡುವೆ ಕೋಟ ಸಮೀಪದ ಕೋಟತಟ್ಟುವಿನ ಪ್ರಗತಿಪರ ಕೃಷಿಕ ಹರಿಕೃಷ್ಣ ಹಂದೆಯವರು ಸಾಂಪ್ರದಾಯಿಕ ಪದ್ಧತಿಯಂತೆ ರಾಸಾಯನಿಕ ರಹಿತವಾದ ಸಾವಯವ ಕೀಟನಾಶಕವನ್ನು ಅಭಿವೃದ್ಧಿಪಡಿಸಿ ಕಲ್ಲಂಗಡಿ ಬೆಳೆಯ ಮೇಲೆ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ.

ಏನಿದು ಸಾವಯವ ಕ್ರಿಮಿನಾಶಕ
ಹುಳಗಳ ಬಾಧೆ, ಬೆಳೆನಾಶ, ಫಲವತ್ತತೆ ಕೊರತೆಯನ್ನು ಹೊಗಲಾಡಿಸಲು ಮನೆಯಲ್ಲೇ ಸಿಗುವ ಮಜ್ಜಿಗೆ, ಗೋಮೂತ್ರ, ಹೊಗೆಸೊಪ್ಪು, ಬೆಳ್ಳುಳ್ಳಿ, ಹಸಿಮೆಣಸುಗಳನ್ನು ಬಳಸಿ ಕೀಟನಾಶಕವನ್ನು ತಯಾರಿಸಿ ರೋಗ ಬಾಧೆಯನ್ನು ನಿಯಂತ್ರಿಸುವ ವಿಧಾನವೇ ಸಾವಯವ ಕ್ರಿಮಿನಾಶಕ ವಿಧಾನ. ಕಲ್ಲಂಗಡಿಯಲ್ಲಿ ಕಂಡು ಬರುವ ಗಂಟುಹುಳು ಬಾಧೆ, ಎಲೆ ಕೊಳೆತಕ್ಕೆ ಗೋಮೂತ್ರ, ಮಜ್ಜಿಗೆಯನ್ನು ಮಿಶ್ರಣ ಮಾಡಿ ರಾಸಾಯನಿಕ ರೀತಿಯಲ್ಲೇ ಗಿಡಗಳಿಗೆ ಸಿಂಪಡಿಸುವ ಮೂಲಕ ಯಶಸ್ಸು ಪಡೆಯಲಾಗುತ್ತಿದೆ ಹಾಗೂ ಎಲೆ ಮುರುಟುವಿಕೆ, ಮಣ್ಣಿನ ಫಲವತ್ತತೆ ಹೆಚ್ಚಿಸಲು ಹೊಗೆಸೊಪ್ಪು, ಬೆಳ್ಳುಳ್ಳಿ, ಹಸಿಮೆಣಸುಗಳನ್ನು ಪುಡಿಮಾಡಿ ಕುದಿಸಿ ಕಷಾಯ ರೀತಿಯಲ್ಲಿ ಸಿದ್ಧಪಡಿಸಿ ಬೆಳೆಗಳಿಗೆ ಸಿಂಪಡಿಸಲಾಗುತ್ತದೆ.

ಕಡಿಮೆ ಖರ್ಚು- ಆರೋಗ್ಯಕ್ಕೆ ದುಷ್ಪರಿಣಾಮವಿಲ್ಲ
ಸಾವಯವ ಕ್ರಿಮಿನಾಶಕವನ್ನು ನೈಸರ್ಗಿಕವಾದ ವಸ್ತುಗಳ ಮೂಲಕ ತಯಾರು ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮವಿಲ್ಲ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಬಳಸಿದರೂ ಬೆಳೆಗಳಿಗೆ ಹಾನಿ ಇಲ್ಲ. ರಾಸಾಯನಿಕ ವಿಧಾನದಲ್ಲಿ 10ಸಾವಿರ ರೂ ತಗಲುವ ವೆಚ್ಚ ಈ ವಿಧಾನದಲ್ಲಿ ಕೇವಲ 1ಸಾವಿರ ರೂ ಒಳಗೆ ಮುಗಿಯುತ್ತದೆ. ಇಳುವರಿ ಹೆಚ್ಚಿಸಲು ಮಣ್ಣಿನ ಫಲವತ್ತತೆ ಜಾಸ್ತಿ ಮಾಡಲು ಕೂಡ ಇದು ಸಹಕಾರಿ.

ಅಭಿವೃದ್ಧಿಪಡಿಸಿದರೆ ಉತ್ತಮ
ಇದೇ ಮಾದರಿಯ ಹಲವು ವಿಧಾನಗಳು ಶೂನ್ಯ ಬಂಡಾವಳ ಕೃಷಿಯಲ್ಲಿ ಪ್ರಯೋಗಿಸಲಾಗಿತ್ತು. ಆದರೆ ಹಲವಾರು ಕಾರಣಗಳಿಂದ ಹೆಚ್ಚಿನ ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ. ಇದೀಗ ಈ ರೈತರು ತಯಾರಿಸಿ ಶೇಕಡಾ 100ರಷ್ಟು ಯಶಸ್ಸು ಪಡೆದಿರುವ ವಿಧಾನವನ್ನು ಕೃಷಿ ವಿಜ್ಞಾನಿಗಳು ಸಂಶೋಧಿಸಿ ಅಭಿವೃದ್ಧಿಪಡಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದಲ್ಲಿ ಕೃಷಿ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಳಿದೆ.

ಯಶಸ್ವಿ ವಿಧಾನ
ಗ್ರಾಮಾಂತರ ಭಾಗದಲ್ಲಿ ರಾಸಾಯನಿಕ ಬಳಕೆಗೆ ಮೊದಲು ಇಂತಹ ವಿಧಾನ ಹೆಚ್ಚು ಚಾಲ್ತಿಯಲ್ಲಿತ್ತು. ನಾನು ಹಾಗೂ ಒಂದಷ್ಟು ಮಂದಿ ರೈತ ಮಿತ್ರರು ಈ ರೀತಿಯ ಪ್ರಯೋಗಗಳನ್ನು ಈ ಭಾಗದಲ್ಲಿ ಮಾಡಿ ಯಶಸ್ವಿಯಾಗಿದ್ದೇವೆ. ಕಲ್ಲಂಗಡಿ ಬೆಳೆಗೆ ಇದು ಅತ್ಯಂತ ಸೂಕ್ತವಾಗಿದೆ. ಈ ಕುರಿತು ಇಲಾಖೆ ವತಿಯಿಂದ ಸಂಶೋಧನೆಗಳು ನಡೆದಲ್ಲಿ ಪೂರಕ.
-ಹರಿಕೃಷ್ಣ ಹಂದೆ, ಸಾವಯವ ವಿಧಾನ ಬಳಕೆ ಮಾಡಿದ ಕೃಷಿಕರು

ಸಂಶೋಧನೆ ನಡೆದಿದೆ
ಈ ರೀತಿಯ ಹಲವು ವಿಧಾನಗಳನ್ನು ಈಗಾಗಲೇ ಅನ್ವೇಷಣೆ ನಡೆಸಲಾಗಿದೆ. ಆದರೆ ಸಾವಯವ ವಿಧಾನದಲ್ಲಿ ತಯಾರಿಸಿದ ಕಿಮಿನಾಶಕಗಳು ಬೇಗ ಹಾಳಾಗುವುದು ಮತ್ತು ಹೆಚ್ಚು ಕಾಲ ಸಂಗ್ರಹಿಸಲು ಕಷ್ಟವಾಗುತ್ತದೆ. ರಾಸಾಯನಿಕಕ್ಕಿಂತ ಎರಡು-ಮೂರು ಪಟ್ಟು ಹೆಚ್ಚು ಬಳಕೆ ಮಾಡಬೇಕಾಗುತ್ತದೆ. ಹೀಗಾಗಿ ಹೆಚ್ಚು ಬಳಕೆಯಲ್ಲಿಲ್ಲ. ಕಡಿಮೆ ಬೆಳೆ ಇರುವವರು ಮನೆಯಲ್ಲೇ ತಯಾರಿಸಿ ಉಪಯೋಗಿಸುವುದಾದರೆ ಸೂಕ್ತ.
-ಎಸ್‌.ಯು. ಪಾಟೀಲ್‌, ಸ.ಸಂ. ನಿರ್ದೇಶಕರು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.