Health Tips: ಬೇಸಿಗೆಯಲ್ಲಿ ತ್ವಚೆಯನ್ನು ರಕ್ಷಿಸಿಕೊಳ್ಳಲು ಈ ಲೋಷನ್ ಬಳಸಿ..

ವಿವಿಧ ಸಂಸ್ಥೆಗಳು ಸನ್ ಸ್ಕ್ರೀನ್ ಕ್ರೀಮ್‍ಗಳನ್ನು ತಯಾರಿಸುತ್ತವೆ.

Team Udayavani, May 24, 2023, 5:35 PM IST

sun-screen-lotion

ಬೇಸಿಗೆಯಲ್ಲಿ ತ್ವಚೆಯ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಕಡಿಮೆಯೇ. ಈಗಿನ ಬಿಸಿಲಿಗೆ ಚರ್ಮ ಬಹಳ ಬೇಗ ಟ್ಯಾನ್ ಆಗುತ್ತದೆ. ಚರ್ಮ ಸುಟ್ಟಂತೆ ಆಗುತ್ತದೆ.  ಸೂರ್ಯನ ಹಾನಿಕಾರಕ ಕಿರಣಗಳಿಂದ ಚರ್ಮವನ್ನು ರಕ್ಷಿಸಲು ಸನ್‌ಸ್ಕ್ರೀನ್ ಲೋಷನ್ ಉತ್ತಮ ಪರಿಹಾರ. ತ್ವಚೆಯ ಆರೈಕೆಯಲ್ಲಿ ಸನ್‌ಸ್ಕ್ರೀನ್‌ ಲೋಷನ್ ಮುಖ್ಯ ಪಾತ್ರ ವಹಿಸುತ್ತದೆ.

ಸೂರ್ಯನ ಯುವಿ ಕಿರಣಗಳು ನೇರವಾಗಿ ಚರ್ಮದ ಮೇಲೆ ಬೀಳುವುದರಿಂದ ಚರ್ಮ ಹಾನಿಗೊಳಗಾಗುತ್ತದೆ. ಸನ್‌ಸ್ಕ್ರೀನ್‌ ಲೋಷನ್​ ಉಪಯೋಗಿಸುವುದರಿಂದ ಇದನ್ನು ತಡೆಗಟ್ಟಬಹುದು. ಸನ್ ಸ್ಕ್ರೀನ್ ಲೋಷನ್ ಯಾವ ಸಮಯದಲ್ಲಿ ಯಾವ ರೀತಿಯಾಗಿ ಹಾಗೂ ಯಾರೆಲ್ಲ ಉಪಯೋಗಿಸಬಹುದು ಎಂಬುದನ್ನು ತಿಳಿದುಕೊಳ್ಳಲು ಮುಂದೆ ಓದಿ.

ಸೂರ್ಯನ ಕಿರಣದಿಂದ ನಮ್ಮ ಚರ್ಮವನ್ನು ರಕ್ಷಿಸಲು ಸನ್‍ಸ್ಕ್ರೀನ್ ಲೋಷನ್ ಬಳಸುವುದು ಉತ್ತಮ. ಇದು ಚರ್ಮದ ಮೇಲೆ ಉಂಟಾಗುವ ಹಾನಿಯನ್ನು ಸುಲಭವಾಗಿ ನಿವಾರಿಸಲು ಸಹಾಯ ಮಾಡುತ್ತದೆ. ಸನ್‍ಸ್ಕ್ರೀನ್ ಗಣನೀಯವಾಗಿ ಬಳಸುವುದರಿಂದ ಮುಖದಲ್ಲಿನ ಮೊಡವೆ, ಶುಷ್ಕತೆ, ಸುಕ್ಕು, ತುರಿಕೆ ಸೇರಿದಂತೆ ಇನ್ನಿತರ ಚರ್ಮದ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.

ಸನ್ ಸ್ಕ್ರೀನ್ ಹಚ್ಚಿಕೊಳ್ಳುವುದರ ಮುಖ್ಯ ಉದ್ದೇಶವೇ ತ್ವಚೆಯನ್ನು ಬಿಸಿಲಿನಿಂದ ಕಾಪಾಡಿಕೊಳ್ಳುವುದು. ನೇರವಾದ ಅಥವಾ ಕಠಿಣವಾದ ಸೂರ್ಯನ ಬೆಳಕಿನಿಂದ ಚರ್ಮದ ಮೇಲೆ ಉಂಟಾಗುವ ಹಾನಿಯನ್ನು ತಡೆಯಲು ಮನೆಯಿಂದ ಹೊರ ಹೋಗುವ ಮುನ್ನ ತಪ್ಪದೇ ಸನ್ ಸ್ಕ್ರೀನ್ ಲೋಷನ್ ಹಚ್ಚಿಕೊಳ್ಳಿ.

ಲೋಷನ್ ಮುಖಕ್ಕೆ ಮಾತ್ರವಲ್ಲದೆ ಸೂರ್ಯನ ಕಿರಣಗಳು ಬೀಳುವ ದೇಹದ ಇತರ ಅಂಗಗಳಿಗೂ ಹಚ್ಚಿ. ಹೆಚ್ಚಿನವರು ಸನ್‍ಸ್ಕ್ರೀನ್ ಕೇವಲ ಮುಖಕ್ಕೆ ಮಾತ್ರ ಹಚ್ಚುತ್ತಾರೆ. ಹೀಗೆ ಮಾಡಬಾರದು. ಅದರ ಬದಲಿಗೆ ಸೂರ್ಯನ ಕಿರಣಗಳು ಬೀಳುವ ನಮ್ಮ ದೇಹದ ಇತರ ಭಾಗಗಳಿಗೂ ಹಚ್ಚಬೇಕು. ತೋಳು, ಕಾಲು, ಕೈ ಕತ್ತುಗಳಿಗೂ ಹಚ್ಚಿಕೊಳ್ಳುವುದು ಉತ್ತಮ.

ಸನ್ ಸ್ಕ್ರೀನ್ ಖರೀದಿಸುವಾಗ ಅದರ ಮೇಲೆ ಎಸ್‍ಪಿಎಫ್ ಪ್ರಮಾಣ ಎಷ್ಟಿದೆ ಎಂಬುದನ್ನು ಪರಿಶೀಲಿಸಿ, 30+ ಅಥವಾ 50 ಎಸ್‍ಪಿಎಫ್ ಗಿಂತ ಹೆಚ್ಚಿರುವುದನ್ನು ಖರೀದಿಸಿ. ಹೆಚ್ಚು ಸಮಯ ಸೂರ್ಯನ ಬೆಳಕಿಗೆ ತೆರೆದುಕೊಳ್ಳುವವರು ಹೆಚ್ಚು ಪ್ರಮಾಣದ ಎಸ್‍ಪಿಎಫ್ ಸನ್ ಸ್ಕ್ರೀನ್ ಕ್ರೀಮ್‍ಗಳನ್ನು ಬಳಸಬೇಕು ಎಂದು ತಜ್ಞರು ಹೇಳುತ್ತಾರೆ.

ವಿವಿಧ ಸಂಸ್ಥೆಗಳು ಸನ್ ಸ್ಕ್ರೀನ್ ಕ್ರೀಮ್‍ಗಳನ್ನು ತಯಾರಿಸುತ್ತವೆ. ಆದ್ದರಿಂದ ಮಾರುಕಟ್ಟೆಯಲ್ಲಿ ನಮಗೆ ಸಾಕಷ್ಟು ಆಯ್ಕೆಗಳಿವೆ. ನಮ್ಮ ಚರ್ಮಕ್ಕೆ ಯಾವುದು ಸೂಕ್ತವೆಂದು ಪರಿಶೀಲಿಸಿ ಖರೀದಿಸುವುದು ಉತ್ತಮ. ಕೆಲವರಿಗೆ ರಾಸಾಯನಿಕ ಉತ್ಪನ್ನಗಳಿಂದ ತಯಾರಿಸಿದ ಲೋಷನ್ ಅಲರ್ಜಿ ಉಂಟು ಮಾಡುತ್ತದೆ. ಹಾಗಾಗಿ ಅಲರ್ಜಿಯಾಗುವ ಉತ್ಪನ್ನಗಳ ಬಗ್ಗೆ ತಿಳಿದುಕೊಂಡು ಪರಿಶೀಲಿಸಿ ಖರೀದಿಸಿ.

ಲೋಷನ್ ಅಥವಾ ಕ್ರೀಮ್ ಮುಖಕ್ಕೆ ಹಚ್ಚುವ ಮೊದಲು ಕೈಗಳಿಗೆ ಸ್ವಲ್ಪ ಹಚ್ಚಿಕೊಂಡು ಪರೀಕ್ಷಿಸಿ, ನಂತರ ಅದನ್ನು ಖರೀದಿ ಮಾಡುವುದು ಅಥವಾ ಬಳಸುವುದು ಒಳಿತು. ಸನ್ ಸ್ಕ್ರೀನ್ ಲೋಷನ್ ಕೇವಲ ಬಿಸಿಲಿರುವಾಗ ಮಾತ್ರವಲ್ಲದೇ ಪ್ರತಿಯೊಂದು ಋತುಮಾನದಲ್ಲೂ ಬಳಸಬಹುದು. ನಿತ್ಯವೂ ಮುಖಕ್ಕೆ ಸನ್‍ಸ್ಕ್ರೀನ್ ಹಚ್ಚುವುದರಿಂದ ಚರ್ಮ ಸೂರ್ಯನ ಕಿರಣದಿಂದ ರಕ್ಷಣೆ ಪಡೆದುಕೊಳ್ಳುವುದರ ಜೊತೆಗೆ ತ್ವಚೆಗೆ ಸಂಬಂಧಿಸಿದ ಇತರ ಅನೇಕ ಸಮಸ್ಯೆಗಳನ್ನು ದೂರ ಇಡಬಹುದು.

ಒಮ್ಮೆ ಹಚ್ಚಿದ ಸನ್‍ಸ್ಕ್ರೀನ್ ದೀರ್ಘ ಸಮಯಗಳ ಕಾಲ ಉಳಿದುಕೊಳ್ಳುವುದಿಲ್ಲ. ನಮ್ಮ ದೇಹಕ್ಕೆ ನೀರು ತಗುಲಿದಾಗ, ಬೆವರಿದಾಗ ಅಥವಾ ಬಟ್ಟೆಯಿಂದ ಮುಖವನ್ನು ಒರೆಸಿಕೊಂಡಾಗ ಕ್ರೀಮ್ ಸುಲಭವಾಗಿ ಸ್ವಚ್ಛವಾಗುತ್ತದೆ. ಹಾಗಾಗಿ ಪ್ರತಿ ಎರಡು ಗಂಟೆಗೊಮ್ಮೆ ಕ್ರೀಮ್ ಹಚ್ಚಿಕೊಳ್ಳಬೇಕು. ಆಗ ಚರ್ಮದ ಸಮಸ್ಯೆಯನ್ನು ನಿವಾರಿಸಬಹುದು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.