Health Tips: ಬೇಸಿಗೆಯಲ್ಲಿ ತ್ವಚೆಯನ್ನು ರಕ್ಷಿಸಿಕೊಳ್ಳಲು ಈ ಲೋಷನ್ ಬಳಸಿ..

ವಿವಿಧ ಸಂಸ್ಥೆಗಳು ಸನ್ ಸ್ಕ್ರೀನ್ ಕ್ರೀಮ್‍ಗಳನ್ನು ತಯಾರಿಸುತ್ತವೆ.

Team Udayavani, May 24, 2023, 5:35 PM IST

sun-screen-lotion

ಬೇಸಿಗೆಯಲ್ಲಿ ತ್ವಚೆಯ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಕಡಿಮೆಯೇ. ಈಗಿನ ಬಿಸಿಲಿಗೆ ಚರ್ಮ ಬಹಳ ಬೇಗ ಟ್ಯಾನ್ ಆಗುತ್ತದೆ. ಚರ್ಮ ಸುಟ್ಟಂತೆ ಆಗುತ್ತದೆ.  ಸೂರ್ಯನ ಹಾನಿಕಾರಕ ಕಿರಣಗಳಿಂದ ಚರ್ಮವನ್ನು ರಕ್ಷಿಸಲು ಸನ್‌ಸ್ಕ್ರೀನ್ ಲೋಷನ್ ಉತ್ತಮ ಪರಿಹಾರ. ತ್ವಚೆಯ ಆರೈಕೆಯಲ್ಲಿ ಸನ್‌ಸ್ಕ್ರೀನ್‌ ಲೋಷನ್ ಮುಖ್ಯ ಪಾತ್ರ ವಹಿಸುತ್ತದೆ.

ಸೂರ್ಯನ ಯುವಿ ಕಿರಣಗಳು ನೇರವಾಗಿ ಚರ್ಮದ ಮೇಲೆ ಬೀಳುವುದರಿಂದ ಚರ್ಮ ಹಾನಿಗೊಳಗಾಗುತ್ತದೆ. ಸನ್‌ಸ್ಕ್ರೀನ್‌ ಲೋಷನ್​ ಉಪಯೋಗಿಸುವುದರಿಂದ ಇದನ್ನು ತಡೆಗಟ್ಟಬಹುದು. ಸನ್ ಸ್ಕ್ರೀನ್ ಲೋಷನ್ ಯಾವ ಸಮಯದಲ್ಲಿ ಯಾವ ರೀತಿಯಾಗಿ ಹಾಗೂ ಯಾರೆಲ್ಲ ಉಪಯೋಗಿಸಬಹುದು ಎಂಬುದನ್ನು ತಿಳಿದುಕೊಳ್ಳಲು ಮುಂದೆ ಓದಿ.

ಸೂರ್ಯನ ಕಿರಣದಿಂದ ನಮ್ಮ ಚರ್ಮವನ್ನು ರಕ್ಷಿಸಲು ಸನ್‍ಸ್ಕ್ರೀನ್ ಲೋಷನ್ ಬಳಸುವುದು ಉತ್ತಮ. ಇದು ಚರ್ಮದ ಮೇಲೆ ಉಂಟಾಗುವ ಹಾನಿಯನ್ನು ಸುಲಭವಾಗಿ ನಿವಾರಿಸಲು ಸಹಾಯ ಮಾಡುತ್ತದೆ. ಸನ್‍ಸ್ಕ್ರೀನ್ ಗಣನೀಯವಾಗಿ ಬಳಸುವುದರಿಂದ ಮುಖದಲ್ಲಿನ ಮೊಡವೆ, ಶುಷ್ಕತೆ, ಸುಕ್ಕು, ತುರಿಕೆ ಸೇರಿದಂತೆ ಇನ್ನಿತರ ಚರ್ಮದ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.

ಸನ್ ಸ್ಕ್ರೀನ್ ಹಚ್ಚಿಕೊಳ್ಳುವುದರ ಮುಖ್ಯ ಉದ್ದೇಶವೇ ತ್ವಚೆಯನ್ನು ಬಿಸಿಲಿನಿಂದ ಕಾಪಾಡಿಕೊಳ್ಳುವುದು. ನೇರವಾದ ಅಥವಾ ಕಠಿಣವಾದ ಸೂರ್ಯನ ಬೆಳಕಿನಿಂದ ಚರ್ಮದ ಮೇಲೆ ಉಂಟಾಗುವ ಹಾನಿಯನ್ನು ತಡೆಯಲು ಮನೆಯಿಂದ ಹೊರ ಹೋಗುವ ಮುನ್ನ ತಪ್ಪದೇ ಸನ್ ಸ್ಕ್ರೀನ್ ಲೋಷನ್ ಹಚ್ಚಿಕೊಳ್ಳಿ.

ಲೋಷನ್ ಮುಖಕ್ಕೆ ಮಾತ್ರವಲ್ಲದೆ ಸೂರ್ಯನ ಕಿರಣಗಳು ಬೀಳುವ ದೇಹದ ಇತರ ಅಂಗಗಳಿಗೂ ಹಚ್ಚಿ. ಹೆಚ್ಚಿನವರು ಸನ್‍ಸ್ಕ್ರೀನ್ ಕೇವಲ ಮುಖಕ್ಕೆ ಮಾತ್ರ ಹಚ್ಚುತ್ತಾರೆ. ಹೀಗೆ ಮಾಡಬಾರದು. ಅದರ ಬದಲಿಗೆ ಸೂರ್ಯನ ಕಿರಣಗಳು ಬೀಳುವ ನಮ್ಮ ದೇಹದ ಇತರ ಭಾಗಗಳಿಗೂ ಹಚ್ಚಬೇಕು. ತೋಳು, ಕಾಲು, ಕೈ ಕತ್ತುಗಳಿಗೂ ಹಚ್ಚಿಕೊಳ್ಳುವುದು ಉತ್ತಮ.

ಸನ್ ಸ್ಕ್ರೀನ್ ಖರೀದಿಸುವಾಗ ಅದರ ಮೇಲೆ ಎಸ್‍ಪಿಎಫ್ ಪ್ರಮಾಣ ಎಷ್ಟಿದೆ ಎಂಬುದನ್ನು ಪರಿಶೀಲಿಸಿ, 30+ ಅಥವಾ 50 ಎಸ್‍ಪಿಎಫ್ ಗಿಂತ ಹೆಚ್ಚಿರುವುದನ್ನು ಖರೀದಿಸಿ. ಹೆಚ್ಚು ಸಮಯ ಸೂರ್ಯನ ಬೆಳಕಿಗೆ ತೆರೆದುಕೊಳ್ಳುವವರು ಹೆಚ್ಚು ಪ್ರಮಾಣದ ಎಸ್‍ಪಿಎಫ್ ಸನ್ ಸ್ಕ್ರೀನ್ ಕ್ರೀಮ್‍ಗಳನ್ನು ಬಳಸಬೇಕು ಎಂದು ತಜ್ಞರು ಹೇಳುತ್ತಾರೆ.

ವಿವಿಧ ಸಂಸ್ಥೆಗಳು ಸನ್ ಸ್ಕ್ರೀನ್ ಕ್ರೀಮ್‍ಗಳನ್ನು ತಯಾರಿಸುತ್ತವೆ. ಆದ್ದರಿಂದ ಮಾರುಕಟ್ಟೆಯಲ್ಲಿ ನಮಗೆ ಸಾಕಷ್ಟು ಆಯ್ಕೆಗಳಿವೆ. ನಮ್ಮ ಚರ್ಮಕ್ಕೆ ಯಾವುದು ಸೂಕ್ತವೆಂದು ಪರಿಶೀಲಿಸಿ ಖರೀದಿಸುವುದು ಉತ್ತಮ. ಕೆಲವರಿಗೆ ರಾಸಾಯನಿಕ ಉತ್ಪನ್ನಗಳಿಂದ ತಯಾರಿಸಿದ ಲೋಷನ್ ಅಲರ್ಜಿ ಉಂಟು ಮಾಡುತ್ತದೆ. ಹಾಗಾಗಿ ಅಲರ್ಜಿಯಾಗುವ ಉತ್ಪನ್ನಗಳ ಬಗ್ಗೆ ತಿಳಿದುಕೊಂಡು ಪರಿಶೀಲಿಸಿ ಖರೀದಿಸಿ.

ಲೋಷನ್ ಅಥವಾ ಕ್ರೀಮ್ ಮುಖಕ್ಕೆ ಹಚ್ಚುವ ಮೊದಲು ಕೈಗಳಿಗೆ ಸ್ವಲ್ಪ ಹಚ್ಚಿಕೊಂಡು ಪರೀಕ್ಷಿಸಿ, ನಂತರ ಅದನ್ನು ಖರೀದಿ ಮಾಡುವುದು ಅಥವಾ ಬಳಸುವುದು ಒಳಿತು. ಸನ್ ಸ್ಕ್ರೀನ್ ಲೋಷನ್ ಕೇವಲ ಬಿಸಿಲಿರುವಾಗ ಮಾತ್ರವಲ್ಲದೇ ಪ್ರತಿಯೊಂದು ಋತುಮಾನದಲ್ಲೂ ಬಳಸಬಹುದು. ನಿತ್ಯವೂ ಮುಖಕ್ಕೆ ಸನ್‍ಸ್ಕ್ರೀನ್ ಹಚ್ಚುವುದರಿಂದ ಚರ್ಮ ಸೂರ್ಯನ ಕಿರಣದಿಂದ ರಕ್ಷಣೆ ಪಡೆದುಕೊಳ್ಳುವುದರ ಜೊತೆಗೆ ತ್ವಚೆಗೆ ಸಂಬಂಧಿಸಿದ ಇತರ ಅನೇಕ ಸಮಸ್ಯೆಗಳನ್ನು ದೂರ ಇಡಬಹುದು.

ಒಮ್ಮೆ ಹಚ್ಚಿದ ಸನ್‍ಸ್ಕ್ರೀನ್ ದೀರ್ಘ ಸಮಯಗಳ ಕಾಲ ಉಳಿದುಕೊಳ್ಳುವುದಿಲ್ಲ. ನಮ್ಮ ದೇಹಕ್ಕೆ ನೀರು ತಗುಲಿದಾಗ, ಬೆವರಿದಾಗ ಅಥವಾ ಬಟ್ಟೆಯಿಂದ ಮುಖವನ್ನು ಒರೆಸಿಕೊಂಡಾಗ ಕ್ರೀಮ್ ಸುಲಭವಾಗಿ ಸ್ವಚ್ಛವಾಗುತ್ತದೆ. ಹಾಗಾಗಿ ಪ್ರತಿ ಎರಡು ಗಂಟೆಗೊಮ್ಮೆ ಕ್ರೀಮ್ ಹಚ್ಚಿಕೊಳ್ಳಬೇಕು. ಆಗ ಚರ್ಮದ ಸಮಸ್ಯೆಯನ್ನು ನಿವಾರಿಸಬಹುದು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.