ಮುಂದಿನ ದಿನಗಳಲ್ಲಿ ಕೋವಿಡ್ ಪರಿಸ್ಥಿತಿಯನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ : ಯು ಟಿ ಖಾದರ್
Team Udayavani, May 4, 2021, 3:21 PM IST
ಮಂಗಳೂರು : ಮುಂದಿನ ದಿನಗಳಲ್ಲಿ ಕೋವಿಡ್ ಪರಿಸ್ಥಿತಿಯನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಆಕ್ಸಿಜನ್ ಬಗ್ಗೆ ರಾಜ್ಯ ಸರ್ಕಾರ, ಪ್ರತಿ ಜಿಲ್ಲಾಡಳಿತ ವೈಟ್ ಪೇಪರ್ ಬಿಡುಗಡೆಗೊಳಿಸಬೇಕು. ರಾಜ್ಯಕ್ಕೆ ಆಕ್ಸಿಜನ್ ಬೇಡಿಕೆ ಎಷ್ಟಿದೆ, ಪೂರೈಕೆ ಎಷ್ಟಾಗುತ್ತಿದೆ ಎಂಬ ಸ್ಪಷ್ಟವಾದ ಮಾಹಿತಿ ತಿಳಿಸಬೇಕು. ಏನು ಸಮಸ್ಯೆಯಿಲ್ಲ ಎಂದು ಸರ್ಕಾರ ಈ ಹಿಂದೆ ಹೇಳಿತ್ತು, ಹಾಗಾದ್ರೆ ಚಾಮರಾಜನಗರದ ದುರಂತಕ್ಕೆ ಯಾರು ಹೊಣೆ ಸರ್ಕಾರ ಉತ್ತರ ಕೊಡಬೇಕು ಎಂದು ಶಾಸಕ ಯು.ಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ದಕ್ಷಿಣಕನ್ನಡ ಜಿಲ್ಲೆಗೆ 80% ಆಕ್ಸಿಜನ್ ಜಿಂದಾಲ್ ನಿಂದ ಬರ್ತಿದೆ. 20% ಕೇರಳದ ಪಾಲ್ಗಾಟ್ ನಿಂದ ಬರುತ್ತಿದೆ. ಕೇರಳದಲ್ಲಿ ಕೋವಿಡ್ ಕೇಸ್ ಹೆಚ್ಚಾದ್ರೆ ಆಕ್ಸಿಜನ್ ಸಪ್ಲೈ ನಿಲ್ಲುವ ಸಾಧ್ಯತೆ ಇದೆ. ಇದಕ್ಕಾಗಿ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು. ಜಿಂದಾಲ್ ನಿಂದ ಮಹಾರಾಷ್ಟ್ರ, ಆಂಧ್ರಕ್ಕೆ ಲಿಕ್ವಿಡ್ ಆಕ್ಸಿಜನ್ ಕಳುಹಿಸಲಾಗುತ್ತಿದೆ. ನಮ್ಮ ರಾಜ್ಯಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು.
ತಮಿಳುನಾಡಿನ ಸಂಸದರು ಕೇಂದ್ರಕ್ಕೆ ಒತ್ತಡ ಹಾಕಿ ಹೆಚ್ಚುವರಿ ಆಕ್ಸಿಜನ್ ಪಡೆಯುತ್ತಿದ್ದಾರೆ. ನಮ್ಮ ಸಂಸದರು, ಸರ್ಕಾರಕ್ಕೆ ಯಾಕೆ ಇದು ಸಾಧ್ಯ ಆಗುತ್ತಿಲ್ಲ. ಮೆಡಿಕಲ್ ಎಮರ್ಜೆನ್ಸಿ ಸ್ಟೇಟ್ ಎಂದು ಡಿಕ್ಲೇರ್ ಮಾಡಬೇಕು. ರಾಜ್ಯಕ್ಕೆ ಬೇಕಾದ ಎಲ್ಲ ಮೆಡಿಕಲ್ ಸೌಲಭ್ಯ ಪಡೆದುಕೊಳ್ಳಬೇಕು. ಮಂತ್ರಿಗಳು, ಮುಖ್ಯಮಂತ್ರಿಗಳ ನಡುವೆ ಸಮನ್ವಯತೆ ಇರಬೇಕು. ದಿನಕ್ಕೊಂದು ಹೇಳಿಕೆ ಕೊಟ್ರೆ ಜನ ಸಾಮಾನ್ಯರು ಗೊಂದಲಕ್ಕೆ ಒಳಗಾಗುತ್ತಾರೆ ಎಂದು ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಮಾಜಿ ಆರೋಗ್ಯ ಸಚಿವ ಯು.ಟಿ ಖಾದರ್ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?