ಪಣಜಿಯ ಮತದಾರರಿಗೆ ಬಹಿರಂಗ ಪತ್ರ ಬರೆದ ಉತ್ಪಲ್ ಪರ್ರಿಕರ್
Team Udayavani, Feb 16, 2022, 4:38 PM IST
ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಬಳಿಕ ಪಣಜಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ದಿ. ಮನೋಹರ್ ಪರ್ರಿಕರ್ ಪುತ್ರ ಉತ್ಪಲ್ ಪರ್ರಿಕರ್ ಪಣಜಿಯ ಮತದಾರರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಬೆಂಬಲಿಸಿದವರಿಗೆ ಮತ್ತು ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಕಳೆದ ತಿಂಗಳು ನಾನು ಪಣಜಿ ಕ್ಷೇತ್ರದಲ್ಲಿ ಸಾಕಷ್ಟು ಸಂಚರಿಸಿದ್ದೇನೆ. ಈ ಸಂದರ್ಭದಲ್ಲಿ ಹಲವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು. ನನ್ನ ತಂದೆ ಮನೋಹರ್ ಪರ್ರಿಕರ್ ರವರಿಗೆ ಪಣಜಿ ಜನತೆಯಿಂದ ಹೇಗೆ ಪ್ರೀತಿ ಸಿಕ್ಕಿರಬಹುದು ಎಂಬುದು ಈಗ ನನಗೆ ಅರಿವಿಗೆ ಬಂದಿದೆ. ಪ್ರಸಕ್ತ ಚುನಾವಣೆಯಲ್ಲಿ ಪಣಜಿ ಕ್ಷೇತ್ರದ ಜನತೆಯಿಂದ ನನಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಪತ್ರದಲ್ಲಿ ನಮೂದಿಸಿದ್ದಾರೆ.
ನನಗಾಗಿ ಹಗಲಿರುಳು ಶೃಮಿಸಿದ ನನ್ನ ಎಲ್ಲಾ ಬೆಂಬಲಿಗರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ. ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಬಂದು ತಮ್ಮ ಸ್ವಂತ ವಾಹನಗಳನ್ನು ಬಳಸಿಕೊಂಡು ಪ್ರಚಾರಕ್ಕೆ ಓಡಾಟ ನಡೆಸಿದರು. ನನಗಾಗಿ ತಮ್ಮ ಅಮೂಲ್ಯವಾದ ಸಮಯವನ್ನು ಕೊಟ್ಟರು. ಪಣಜಿಯನ್ನು ಸ್ಮಾರ್ಟ್ ಸಿಟಿಯನ್ನಾಗಿ ಮಾಡುವ ನನ್ನ ಭರವಸೆಯನ್ನು ನಾನು ಇದೀಗ ಮತ್ತೆ ಪುನರುಚ್ಛರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಉತ್ಪಲ್ ಪರ್ರಿಕರ್ ರವರು ತಮ್ಮ ವಿರೋಧಿಗಳು ಮತ್ತು ಟೀಕಾಕಾರರಿಗೂ ಧನ್ಯವಾದ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ