UV Fusion: ನೋವುಣಿಸಿದವನಿಗೂ ಒಳಿತನ್ನೇ ಬಯಸಿದ ನೆಲ್ಸನ್‌ ಮಂಡೇಲಾ

ಚುನಾವಣೆಯಲ್ಲಿ ಭರ್ಜರಿ ವಿಜಯ ಗಳಿಸಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರಾಗಿ ಆಯ್ಕೆಯಾದರು.

Team Udayavani, Aug 15, 2023, 2:40 PM IST

UV Fusion: ನೋವುಣಿಸಿದವನಿಗೂ ಒಳಿತನ್ನೇ ಬಯಸಿದ ನೆಲ್ಸನ್‌ ಮಂಡೇಲಾ

ಮಹಾನ್‌ ಚಳುವಳಿಗಾರ ನೆಲ್ಸನ್‌ ಮಂಡೇಲಾ ಅವರು 1918ರ ಜುಲೈ 18ರಂದು ದಕ್ಷಿಣ ಆಫ್ರಿಕಾದ : ಟ್ರಾನ್ಸ್ಕಿ ಎಂಬ ನಗರದಲ್ಲಿ ಜನಿಸಿದರು. ನೆಲ್ಸನ್‌ ಮಂಡೇಲಾ 20ನೇ ಶತಮಾನ ಕಂಡ ಮಹಾನ್‌ ನಾಯಕ ಎನ್ನಬಹುದು. ಏಕೆಂದರೆ ದಕ್ಷಿಣ ಆಫ್ರಿಕಾದಲ್ಲಿದ್ದ ವರ್ಣಬೇದ ನೀತಿಯ ವಿರುದ್ಧ ಚಳವಳಿಯನ್ನು ಕೈಗೊಂಡ ಇವರನ್ನು ಆಫ್ರಿಕಾದ ಗಾಂಧಿ ಎಂದೇ ಕರೆಯಲಾಗುತ್ತದೆ.

ಮಾರ್ಕ್ಸ್ ವಾದಿ ವಿಚಾರಗಳಿಂದ ಪ್ರಭಾವಿತರಾದ ಮಂಡೇಲಾ ಅವರು ರಹಸ್ಯವಾಗಿ ನಿಷೇಧಕ್ಕೆ ಒಳಗಾಗಿದ್ದ ದಕ್ಷಿಣ ಆಫ್ರಿಕಾದ ಕಮುನಿಸ್ಟ್‌ ಪಕ್ಷವನ್ನು ಸೇರಿದರು. ಪ್ರಾರಂಭದಲ್ಲಿ ಅವರು ಅಹಿಂಸಾ ಮಾರ್ಗಕ್ಕೆ ಹೆಚ್ಚು ಬದ್ಧರಾಗಿದ್ದರೂ ಮುಂದೆ ಕಮುನಿಸ್ಟ್‌ ಪಕ್ಷವನ್ನು ಸೇರಿದ್ದರಿಂದ ಶಸ್ತಸಜ್ಜಿತ ಉಮ್ಕಾಂತೋ ವೀ ಸಿಜ್ವೆ ಎಂಬ ಸಂಘಟನೆಯನ್ನು ಹುಟ್ಟುಹಾಕಿ ಸರಕಾರದ ವಿರುದ್ಧ ಚಳವಳಿಯನ್ನು ತೀವ್ರಗೊಳಿಸಿದರು. ಇದರ ಪರಿಣಾಮವಾಗಿ ಮಂಡೇಲಾರು ಬಂಧಿತರಾಗಿ 27 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮುಂದೆ ಅಂತಾರಾಷ್ಟ್ರೀ ಯ ಮಟ್ಟದಲ್ಲಿ ಇವರ ಬಿಡುಗಡೆಗೆ ಒತ್ತಡ ಹೆಚ್ಚಿದ್ದರಿಂದ ಆಗಿನ ಅಧ್ಯಕ್ಷ ಎಫ್.ಡಬ್ಲೂé ಕ್ಲರ್ಕ್‌ 1990ರಲ್ಲಿ ಮಂಡೇಲಾರನ್ನು ಜೈಲಿನಿಂದ ಬಿಡುಗಡೆಗೊಳಿಸಿದರು. ಮುಂದೆ 1994ರ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ವಿಜಯ ಗಳಿಸಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರಾಗಿ ಆಯ್ಕೆಯಾದರು.

ನೆಲ್ಸನ್‌ ಮಂಡೇಲಾ ಮೊದಲ ಬಾರಿ ರಾಷ್ಟ್ರಪತಿಯಾದ ಅನಂತರ ತನ್ನ ಅಂಗರಕ್ಷಕರ ಜತೆ ಒಂದು ಹೊಟೇಲ್‌ಗೆ ಊಟಕ್ಕೆಂದು ಹೋಗಿದ್ದರು. ಜತೆಗಿದ್ದವರೆಲ್ಲರೂ ತಮಗೆ ಇಷ್ಟವಾದ ಊಟವನ್ನು ಆರ್ಡರ್‌ ಮಾಡಿ ಊಟಕ್ಕಾಗಿ ಕಾಯುತ್ತಿದ್ದರು. ಅದೇ ವೇಳೆಗೆ ಮಂಡೇಲಾರು ಕುಳಿತಿದ್ದ ಕುರ್ಚಿಯ ಎದುರುಗಡೆ ಒಬ್ಬ ವ್ಯಕ್ತಿ ಊಟಕ್ಕೆ ಆರ್ಡರ್‌ ಮಾಡಿ ಊಟಕ್ಕಾಗಿ ಕಾಯುತ್ತಾ ಕುಳಿತಿದ್ದನು. ಮಂಡೇಲಾ ತನ್ನ ಅಂಗರಕ್ಷಕರ ಬಳಿ ಆ ವ್ಯಕ್ತಿಯನ್ನೂ ತನ್ನ ಟೇಬಲ್‌ ಬಳಿ ಕುಳಿತುಕೊಳ್ಳುವಂತೆ ಹೇಳಿ ಕಳುಹಿಸಿದರು. ಅದರಂತೆ ಆ ವ್ಯಕ್ತಿಯು ಮಂಡೇಲಾ ಅವರ ಟೇಬಲ್‌ ಹತ್ತಿರ ಬಂದು ಕುಳಿತುಕೊಂಡನು. ಎಲ್ಲರೂ ಊಟ ಮಾಡುತ್ತಿದ್ದಂತೆ ಆ ವ್ಯಕ್ತಿಯೂ ಊಟ ಮಾಡಲು ಪ್ರಾರಂಭಿಸಿದನು ಅದರೆ ಆ ವ್ಯಕ್ತಿಯ ಕೈಗಳು ನಡುಗುತ್ತಿದ್ದವು.

ಎಷ್ಟು ಸಾಧ್ಯವೋ ಅಷ್ಟು ವೇಗವಾಗಿ ಊಟ ಮಾಡಿ ಆ ವ್ಯಕ್ತಿಯು ತಲೆ ತಗ್ಗಿಸಿಕೊಂಡು ಅಲ್ಲಿಂದ ಹೊರಗೆ ಹೋದನು. ಆ ವ್ಯಕ್ತಿಯು ಹೋದ ಅನಂತರ ಮಂಡೇಲಾ ಅವರ ಅಂಗರಕ್ಷಕರ ತಂಡದ ಅಧಿಕಾರಿಯು, ಸರ್‌ ಅವರಿಗೆ ಜ್ವರ ಬಂದಿರಬಹುದು ಹಾಗಾಗಿ ಊಟ ಮಾಡುವಾಗ ಅವರ ಕೈಗಳು ನಡುಗುತ್ತಿದ್ದವು ಎಂದು ತಿಳಿಸಿದನು. ಆಗ ಮಂಡೇಲಾ ನಗುತ್ತಾ, ಆ ವ್ಯಕ್ತಿಯು ರೋಗಗ್ರಸ್ತನಲ್ಲ, ಬದಲಿಗೆ ನಾನು ಬಂಧಿಯಾಗಿದ್ದ ಜೈಲಿನ ಜೈಲರ್‌ ಆತ. ಅಲ್ಲಿ ಆತ ನನಗೆ ಬಹಳ ಹಿಂಸೆ ಕೊಡುತ್ತಿದ್ದ, ನಾನು ಏಟು ತಿಂದು ತಿಂದು ಸುಸ್ತಾಗಿ ನೀರು ಕೇಳಿದಾಗ ಆತನು, ನಿನಗೆ ನೀರು ಬೇಕೇ? ಕುಡಿ ಎಂದು ನನ್ನ ಮುಖದ ಮೇಲೆ ಮೂತ್ರ ಮಾಡುತ್ತಿದ್ದನು ಎಂದರು.

ಈಗ ನಾನು ಈ ದೇಶದ ರಾಷ್ಟ್ರಪತಿ ಆಗಿದ್ದುದರಿಂದ ಈಗ ಆ ವ್ಯಕ್ತಿಗೆ ಅಂದು ತಾನು ಮಾಡಿದ ತಪ್ಪಿಗೆ ಇಂದು ನನಗೆ ದೊಡ್ಡ ಪ್ರಮಾಣದ ಶಿಕ್ಷೆ ಆಗಬಹುದು ಎಂದು ಆತನಿಗೆ ಈಗ ಮನವರಿಕೆ ಆಗಿದ್ದು, ಅದಕ್ಕೆ ಆತನ ಕೈಗಳು ನಡುಗುತ್ತಿದ್ದವು. ಅದರೆ ಆ ರೀತಿ ದ್ವೇಷವನ್ನು ಸಾಧಿಸುವುದು ನನ್ನ ಚರಿತ್ರೆಯೇ ಅಲ್ಲ. ದ್ವೇಷದ ಭಾವನೆಯಿಂದ ಕೆಲಸ ಮಾಡಿದರೆ ಅದು ವಿನಾಶಕ್ಕೆ ದಾರಿ ಮಾಡಿ ಕೊಡುತ್ತದೆ. ಧೈರ್ಯ ಮತ್ತು ಸಹಿಷ್ಣುತೆ ಇದ್ದರೆ ಮನುಷ್ಯನಲ್ಲಿ ಮಾನಸಿಕ ಪರಿಪಕ್ವತೆ ಪೂರ್ಣವಾಗಿ ಸಾಧಿಸುತ್ತದೆ ಎಂದು ಮಂಡೇಲಾ ಹೇಳಿದರು.

ಯಾವುದೋ ಸಂದರ್ಭದಲ್ಲಿ ನಾವು ಅಧಿಕಾರದಲ್ಲಿಲ್ಲದೇ ಇದ್ದಾಗ ಅನುಭವಿಸಿದ ಕಷ್ಟವನ್ನು, ನಾವು ಅಧಿಕಾರಕ್ಕೆ ಏರಿದಾಗ ಕಷ್ಟವನ್ನು ನೀಡಿದ ವ್ಯಕ್ತಿಯ ಮೇಲೆ ದ್ವೇಷ ಸಾಧನೆಯನ್ನು ಮಾಡುವ ಬದಲು, ಅವರನ್ನು ಮಾನವೀಯವಾಗಿ ಪ್ರೀತಿಯಿಂದ ಆಧರಿಸಿ ಗೌರವಿಸಿದಾಗ ನಮ್ಮ ಮೌಲ್ಯವೇ ಹೆಚ್ಚುತ್ತದೆ. ದ್ವೇಷ ಸಾಧನೆ ಕೇವಲ ಕ್ಷಣಿಕವಾದರೆ ಮಾನವೀಯತೆಯು ಶಾಶ್ವತವಾಗಿ ಉಳಿಯುತ್ತದೆ.

*ಸಂತೋಷ್‌ ರಾವ್‌ ಪೆರ್ಮುಡ, ಬೆಳ್ತಂಗಡಿ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.