ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಹುದ್ದೆಗಳ ಕಾರುಬಾರು

ಖಾಲಿ ಹುದ್ದೆಗಳೆ ಜಾಸ್ತಿ

Team Udayavani, May 4, 2022, 10:38 AM IST

4

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತು ಹತ್ತು ವರ್ಷ ತುಂಬುತ್ತ ಬಂದಿದೆ. ಆದರೂ, ಆ ಭಾಗದಲ್ಲಿ ಖಾಲಿ ಹುದ್ದೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಲು ಸಾಧ್ಯವಾಗಿಲ್ಲ.

ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳಾದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳು ಅತ್ಯಂತ ಹಿಂದುಳಿದ ಪ್ರದೇಶವೆಂದು ಪರಿಗಣಿಸಿ 2013ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು 371 ಜೆ ಪ್ರಕಾರ ವಿಶೇಷ ಸ್ಥಾನ ಮಾನ ನೀಡಲಾಗಿದೆ. ಕಳೆದ ಹತ್ತು ವರ್ಷದಲ್ಲಿ ರಾಜ್ಯದಲ್ಲಿ ಪ್ರಮುಖ ಮೂರು ಪಕ್ಷಗಳ ಸರ್ಕಾರಗಳು ಅಧಿಕಾರ ನಡೆಸಿ ದ್ದರೂ, ಖಾಲಿ ಹುದ್ದೆಗಳ ಭರ್ತಿಗೆ ಆದ್ಯತೆ ನೀಡದಿರುವುದು ಆ ಭಾಗದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಂತಿದೆ. ಖಾಲಿ ಹುದ್ದೆಗಳೆ ಜಾಸ್ತಿ: ಪ್ರಸ್ತುತ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಎ.ಬಿ. ಮತ್ತು ಸಿ ದರ್ಜೆಯ ಸುಮಾರು 56,500 ಹುದ್ದೆಗಳಿದ್ದು, ಅವುಗಳಲ್ಲಿ ನೇರ ನೇಮಕಾತಿಯ ಮೂಲಕ 32,252 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕಿದೆ. ಅವುಗಳಲ್ಲಿ 13,371 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, ಇನ್ನೂ ಸುಮಾರು 18,549 ಹುದ್ದೆಗಳು ಖಾಲಿ ಇವೆ. ಈಗ ರಾಜ್ಯ ಸರ್ಕಾರ ವಿವಿಧ ಇಲಾಖೆಗಳಿಗೆ 6,204 ಹುದ್ದೆಗಳನ್ನು ನೇರ ನೇಮಕಾತಿ ನಡೆಸಲು ಪ್ರಕಟಣೆ ಹೊರಡಿಸಿದೆ.

ಇದರ ಹೊರತಾಗಿಯೂ ಇನ್ನೂ ಸುಮಾರು 12,345 ಹುದ್ದೆಗಳು ಖಾಲಿ ಉಳಿದು ಕೊಂಡಿವೆ. ಕಳೆದ ಮೂರು ವರ್ಷದಿಂದ ರಾಜ್ಯ ಸರ್ಕಾರ ಕೊರೊನಾ ಕಾರಣದಿಂದಾಗಿ ನೇಮಕಾತಿ ತಡೆ ಹಿಡಿದಿತ್ತು. ಈಗ ಮತ್ತೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಆದರೆ, ನೇಮಕಾತಿಗಳಿಗೂ ಹಗರಣಗಳ ಸೋಂಕು ತಗುಲಿದ್ದು, ಆ ಭಾಗದ ಉದ್ಯೋಗಾಕಾಂಕ್ಷಿ ಗಳಿಗೆ ಮತ್ತಷ್ಟು ನಿರಾಸೆಯುಂಟಾಗುವಂತೆ ಮಾಡಿದೆ.

ಮುಂಬಡ್ತಿಯಲ್ಲಿಯೂ ಖಾಲಿ: ನೇರ ನೇಮಕಾತಿ ಯಷ್ಟೇ ಅಲ್ಲದೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂಬಡ್ತಿ ಅಡಿಯಲ್ಲಿಯೂ ಖಾಲಿ ಹುದ್ದೆಗಳ ದರ್ಬಾರು ಮುಂದುವರಿದಿದೆ. 24,197 ಹುದ್ದೆಗಳು ಮುಂಬಡ್ತಿ ಮೂಲಕ ಭರ್ತಿ ಮಾಡಬೇಕಿದ್ದು, ಪ್ರಸ್ತುತ 14,043 ಹುದ್ದೆಗಳನ್ನು ಮುಂಬಡ್ತಿ ಮೂಲಕ ಭರ್ತಿ ಮಾಡಲಾಗಿದೆ. ಇನ್ನೂ 10,154 ಹುದ್ದೆಗಳು ಖಾಲಿ ಉಳಿದಿದ್ದು, ಈ ಭಾಗದ ಉದ್ಯೋಗಗಳಿಗೆ ಬಡ್ತಿ ಭಾಗ್ಯ ದೊರೆಯದಂತಾಗಿದೆ.

ಅತ್ಯಂತ ಮಹತ್ವದ ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ 7659 ಹುದ್ದೆಗಳಲ್ಲಿ ಕೇವಲ 116 ಹುದ್ದೆಗಳನ್ನು ಮಾತ್ರ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗಿದ್ದು, 6779 ಹುದ್ದೆಗಳು ಖಾಲಿ ಇವೆ. ಮುಂಬಡ್ತಿಯಿಂದ ತುಂಬಬೇಕಿರುವ 3835 ಹುದ್ದೆಗಳಲ್ಲಿ 2488 ಹುದ್ದೆಗಳು ಖಾಲಿ ಉಳಿದಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಐಟಿ ಬಿಟಿ ನೇರ ನೇಮಕಾತಿ ಮಾಡಿಕೊಳ್ಳುವ ಪ್ರಯತ್ನವನ್ನೇ ನಡೆಸಿಲ್ಲ.

ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತರೂ ಈ ಭಾಗದಲ್ಲಿ ಖಾಲಿ ಹುದ್ದೆಗಳ ಭರ್ತಿ ಮಾಡುತ್ತಿಲ್ಲ. ಕಟ್ಟಡ, ರಸ್ತೆ ನಿರ್ಮಾಣಕ್ಕೆ ನೀಡುವ ಆದ್ಯತೆ, ನೇಮಕಾತಿಗೆ ನೀಡದಿರುವುದು ಖಾಲಿ ಹುದ್ದೆಗಳು ಹೆಚ್ಚಾಗಲು ಕಾರಣವಾಗಿದೆ.    -ಭೀಮನಗೌಡ ಪರಗೊಂಡ, ಸಾಮಾಜಿಕ ಕಾರ್ಯಕರ್ತ

● ಶಂಕರ ಪಾಗೋಜಿ

ನೇರ ನೇಮಕಾತಿಯಲ್ಲಿನ ಸ್ಥಿತಿ

ಒಟ್ಟು ಹುದ್ದೆಗಳು – 32352

ನೇಮಕಾತಿಯಾಗಿರುವ ಹುದ್ದೆಗಳು – 13711

ಖಾಲಿ ಹುದ್ದೆಗಳು – 18549

ನೇಮಕಾತಿಗೆ ಪ್ರಸ್ತಾವನೆ – 6204

ಮುಂಬಡ್ತಿಯಲ್ಲಿನ ಸ್ಥಿತಿ

ಒಟ್ಟು ಹುದ್ದೆಗಳು – 24197

ಮುಂಬಡ್ತಿಯಾಗಿರುವ ಹುದ್ದೆಗಳು – 14043

ಖಾಲಿ ಹುದ್ದೆಗಳು – 10154

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.