ಹಳ್ಳಿಗಳಲ್ಲಿ ಅಗತ್ಯ ಸೇವೆ ಸಲ್ಲಿಸುವ ಇಲಾಖೆಗೆ ರಜೆ
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ನೈರ್ಮಲ್ಯ ಸಮಸ್ಯೆ ಸಾಧ್ಯತೆ
Team Udayavani, Mar 28, 2020, 5:58 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ದೇಶಾದ್ಯಂತ ಲಾಕ್ಡೌನ್ ಆಗಿದ್ದು, ಕೆಲವು ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯನ್ನೇ ಅಗತ್ಯ ಸೇವೆಯಿಂದ ಹೊರಗಿಡುವ ಮೂಲಕ ಸರಕಾರ ವೃಥಾ ಸಮಸ್ಯೆ ಸೃಷ್ಟಿಸಿದೆ.
ಕೇಂದ್ರ ಸರಕಾರ ಲಾಕ್ಡೌನ್ ಘೋಷಣೆ ಮಾಡಿದ ಅನಂತರ ರಾಜ್ಯ ಸರಕಾರವೂ ಅಗತ್ಯ ಸೇವೆ ಒದಗಿಸುವ 9 ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳ ಬಿ, ಸಿ ಮತ್ತು ಡಿ ದರ್ಜೆಯ ನೌಕರರಿಗೆ ರಜೆ ಘೋಷಣೆ ಮಾಡಿದೆ.
ವಿಚಿತ್ರವೆಂದರೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ನೋಡಿಕೊಳ್ಳುವ ಸಿಬಂದಿಗೂ ರಜೆ ನೀಡಲಾಗಿದೆ. ಇದರಿಂದಾಗಿ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಸ್ಯೆ ಉದ್ಭವಿಸಿದೆ ಎಂಬ ಆರೋಪ ಕೇಳಿಬಂದಿದೆ.
ಜವಾಬ್ದಾರಿಯಿಂದ ದೂರ ಉಳಿದ ಇಲಾಖೆ
ಗ್ರಾಮೀಣ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಗಿದೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕಾಗಿರುವ ಸೆಕÏನ್ ಆಫೀಸರ್, ಜೂನಿಯರ್ ಎಂಜಿನಿಯರ್ ಮತ್ತು ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ಗಳಿಗೆ ರಜೆ ನೀಡಲಾಗಿದ್ದು, ಕೋವಿಡ್ 19 ಭೀತಿಯ ನಡುವೆ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರಾಮೀಣ ಜನರ ಕಷ್ಟಕ್ಕೆ ಸ್ಪಂದಿಸುವವರು ಇಲ್ಲದಂತಾಗಿದೆ.
ಗ್ರಾ.ಪಂ. ನೌಕರರಿಗೆ ಸಿಗದ ವಿಮೆ ಸೌಲಭ್ಯ
ತುರ್ತು ಸೇವೆ ನಿರ್ವಹಿಸುತ್ತಿರುವ ಗ್ರಾ.ಪಂ. ಸಿಬಂದಿಯ ಜೀವ ರಕ್ಷಣೆಗೆ ಮಾಸ್ಕ್, ಸ್ಯಾನಿಟೈಸರ್ ಸಹಿತ ಆರೋಗ್ಯ ರಕ್ಷಕ ಅಗತ್ಯ ವಸ್ತುಗಳನ್ನು ನೀಡಿಲ್ಲ. ಅದಕ್ಕಿಂತ ಮುಖ್ಯವಾಗಿ ಕಾರ್ಯ ನಿರ್ವಹಿಸು ವವರಿಗೆ ವಿಮೆ ಸೌಲಭ್ಯ ಒದಗಿಸಿಲ್ಲ. ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಾಟರ್ ಮ್ಯಾನ್, ಡಾಟಾ ಆಪರೇಟರ್, ಕ್ಲರ್ಕ್, ಪಿಡಿಒ ಸಹಿತ ಕನಿಷ್ಠ 10 ಸಿಬಂದಿ ಸೇವೆ ಸಲ್ಲಿಸುತ್ತಾರೆ. ರಾಜ್ಯದಲ್ಲಿ ಸುಮಾರು 6,022 ಗ್ರಾ.ಪಂ.ಗಳಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಇಲಾಖೆ ವ್ಯಾಪ್ತಿಯಡಿಯಲ್ಲಿ ಲಕ್ಷಕ್ಕೂ ಹೆಚ್ಚು ನೌಕರರಿದ್ದಾರೆ. ಇವರೆಲ್ಲರಿಗೆ ವಿಮೆ ಸೌಲಭ್ಯ ಒದಗಿಸಬೇಕೆಂಬ ಬೇಡಿಕೆ ಪಂಚಾಯತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ