ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯ 10 ಲಕ್ಷ ಜನರ ಗುರಿ

1ನೇ ಡೋಸ್‌ 5.64 ಲಕ್ಷ, 2ನೇ ಡೋಸ್‌ 1.95 ಲಕ್ಷ ಜನರಿಗೆ ವಿತರಣೆ

Team Udayavani, Aug 21, 2021, 6:15 AM IST

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯ 10 ಲಕ್ಷ ಜನರ ಗುರಿ

ಸಾಂದರ್ಭಿಕ ಚಿತ್ರ.

ಉಡುಪಿ: ಕೋವಿಡ್‌ ವಾರ್‌ ರೂಂ ಬಿಡುಗಡೆ ಮಾಡಿದ ರಾಜ್ಯವಾರು ಅತೀ ಹೆಚ್ಚು ಕೋವಿಡ್‌ ಲಸಿಕೆ ವಿತರಣೆ ಮಾಡಿರುವ ಜಿಲ್ಲಾವಾರು ಪಟ್ಟಿಯಲ್ಲಿ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ಶೀಘ್ರದಲ್ಲಿ ಆರೋಗ್ಯ ಇಲಾಖೆ ನೀಡಿರುವ ಲಸಿಕೆ ವಿತರಣೆ ಗುರಿಯನ್ನು ತಲುಪಲಿದೆ.

ರಾಜ್ಯದ ಎಲ್ಲ ಜಿಲ್ಲೆಗಳಿಗೆ ಅಲ್ಲಿನ ಜನಸಂಖ್ಯೆ ಆಧಾರ ಮೇಲೆ ಲಸಿಕೆ ವಿತರಣೆಯ ಗುರಿಯನ್ನು ನೀಡಲಾಗಿದೆ. ಅದರ ಅನ್ವಯ ಆ. 18ರ ವರದಿಯಂತೆ ಬೆಂಗಳೂರು ನಗರ ಪ್ರದೇಶದಲ್ಲಿ ಶೇ. 99, ಉಡುಪಿಯಲ್ಲಿ ಶೇ. 73.47, ಮೈಸೂರು ಶೇ. 66.54, ದ.ಕ. ಶೇ. 65.07, ಕೊಡಗು ಶೇ.61.23ರಷ್ಟು ಲಸಿಕೆ ವಿತರಿಸಿದೆ.

ಈ ಹಿಂದಿನ ವರದಿಯಲ್ಲಿ ಉಡುಪಿ ಜಿಲ್ಲೆಯು ಲಸಿಕೆ ವಿತರಣೆಯಲ್ಲಿ ಅಗ್ರ 5 ಸ್ಥಾನದಲ್ಲಿ ಒಂದು ಸ್ಥಾನ ಗಳಿಸಿತ್ತು.

ಇದನ್ನೂ ಓದಿ:12 ವಯಸ್ಸಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಿದ್ಧವಾದ ಮೊದಲ ಕೋವಿಡ್ ಲಸಿಕೆಗೆ ಭಾರತದಲ್ಲಿ ಅನುಮೋದನೆ

10 ಲಕ್ಷ ಜನರಿಗೆ ಲಸಿಕೆ ಗುರಿ
ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 18-44 ವರ್ಷದೊಳಗಿನ ಒಟ್ಟು 5.88 ಲಕ್ಷ ಜನರಿಗೆ ಹಾಗೂ 45 ವರ್ಷದ ಮೇಲಿನ (ಆರೋಗ್ಯ, ಮುಂಚೂಣಿ) 4.13 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ.

1.95 ಮಂದಿಗೆ ಲಸಿಕೆ ಪೂರ್ಣ
ಜಿಲ್ಲೆಯಲ್ಲಿ 19,608 ಆರೋಗ್ಯ ಕಾರ್ಯಕರ್ತರು, 4,062 ಮುಂಚೂಣಿ ಕಾರ್ಯಕರ್ತರು, 26,808 ಮಂದಿ 18ರಿಂದ 44 ವರ್ಷದೊಳಗಿನ ಸಾರ್ವಜನಿಕರು, 45 ವರ್ಷ ಮೇಲ್ಪಟ್ಟ 1.69 ಲಕ್ಷ ಮಂದಿ ಕೊರೊನಾ 2ನೇ ಡೋಸ್‌ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಒಟ್ಟು 1.95 ಲಕ್ಷ ಮಂದಿ ಎರಡನೇ ಡೋಸ್‌ ಕೋವಿ ಡ್‌ ಲಸಿಕೆ ಪಡೆದುಕೊಂಡಿದ್ದಾರೆ.

2.41 ಲ. ಜನರು ಬಾಕಿ
ಜಿಲ್ಲೆಯಲ್ಲಿ ಪ್ರಥಮ 5.64 ಲಕ್ಷ ಹಾಗೂ ದ್ವಿತೀಯ ಡೋಸ್‌ 1.95 ಲಕ್ಷ ಜನರು ಕೋವಿಡ್‌ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಒಟ್ಟು 10 ಲಕ್ಷ ಜನರಲ್ಲಿ ಈಗಾಗಲೇ 7.59 ಲಕ್ಷ ಜನರು ಕೋವಿಡ್‌ ಲಸಿಕೆಯ ಮೊದಲ ಹಾಗೂ ಎರಡನೇ ಲಸಿಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2.41 ಲಕ್ಷ ಜನರು ಪ್ರಥಮ ಡೋಸ್‌ ಲಸಿಕೆ ಪಡೆದುಕೊಳ್ಳಲು ಬಾಕಿ ಇದೆ.

5.64 ಲ. ಮಂದಿಗೆ ಪ್ರಥಮ ಡೋಸ್‌
ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಸೇರಿದಂತೆ 18ರಿಂದ 44 ವರ್ಷ ದೊಳಗಿನ ಒಟ್ಟು 2,33,126 ಮಂದಿ, 45 ವರ್ಷ ಮೇಲ್ಪಟ್ಟವರಲ್ಲಿ 3,31,927 ಮಂದಿ ಒಂದನೇ ಡೋಸ್‌ ಕೋವಿಡ್‌ ಲಸಿಕೆ ಪಡೆದುಕೊಂಡಿದ್ದಾರೆ. ಇಲ್ಲಿಯವರೆಗೆ ಒಟ್ಟು ಜಿಲ್ಲೆಯಲ್ಲಿ 5.64 ಮಂದಿ ಮೊದಲನೇ ಡೋಸ್‌ ಪಡೆದುಕೊಂಡಿದ್ದಾರೆ.

ಉತ್ತಮ ಸಾಧನೆ
ಲಸಿಕೆ ವಿತರಣೆಯಲ್ಲಿ ಉಡುಪಿ ಜಿಲ್ಲೆ ಉತ್ತಮ ಸಾಧನೆ ಮಾಡಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಕೇಂದ್ರಕ್ಕೆ ಬಂದು ಲಸಿಕೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಇದುವರೆಗೆ 9,000 ಮಂದಿ ಗರ್ಭಿಣಿ ಹಾಗೂ ಬಾಣಂತಿಯರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.
-ಡಾ| ಎಂ.ಜಿ.ರಾಮ,
ಕೋವಿಡ್‌ ವ್ಯಾಕ್ಸಿನ್‌ ಅಧಿಕಾರಿ

4,000 ಗರ್ಭಿಣಿಯರಿಗೆ ವ್ಯಾಕ್ಸಿನ್‌
ಜಿಲ್ಲೆಯಲ್ಲಿ 14,000 ಗರ್ಭಿಣಿಯರು ಹಾಗೂ 15,000 ಬಾಣಂತಿಯರು ಇದ್ದಾರೆ. ಅವರಲ್ಲಿ ಈಗಾಗಲೇ 4000 ಗರ್ಭಿಣಿಯರು ಹಾಗೂ 5,000 ಬಾಣಂತಿಯರು ಇದುವರೆಗೆ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ 2ನೇ ಡೋಸ್‌ ಲಸಿಕೆ ಪಡೆದವರು
    ಗುಂಪು                             ಲಸಿಕೆ            ಪಡೆದವರು ಶೇಕಡಾವಾರು
ಆ. ಕಾರ್ಯಕರ್ತರು                19,608                ಶೇ.99
ಮು. ಕಾರ್ಯಕರ್ತರು              4,062                  ಶೇ.50
45 ವರ್ಷ ಮೇಲ್ಪಟ್ಟವರು         1,69,167              ಶೇ.41

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.