ಎರಡು ತಿಂಗಳ ಬಳಿಕವೂ ಲಸಿಕೆ ಕೊಡಬಹುದು: ವೈದ್ಯರು


Team Udayavani, Apr 20, 2020, 5:24 AM IST

ಎರಡು ತಿಂಗಳ ಬಳಿಕವೂ ಲಸಿಕೆ ಕೊಡಬಹುದು: ವೈದ್ಯರು

ಸಾಂದರ್ಭಿಕ ಚಿತ್ರ..

ಉಡುಪಿ: ಕೋವಿಡ್ 19 ಭೀತಿಯಿಂದ ಕಳೆದ ಒಂದು ತಿಂಗಳಿನಿಂದ ಮಕ್ಕಳಿಗೆ ನೀಡಬೇಕಾದ ವಿವಿಧ ಲಸಿಕೆಗಳು ಸ್ಥಗಿತಗೊಂಡಿದೆ. ಇದೀಗ ಮಕ್ಕಳ ಲಸಿಕೆ ಅವಧಿ ಮುಕ್ತಾಯಗೊಂಡಿರುವುದು ಹೆತ್ತವರನ್ನು ಆತಂಕಕ್ಕೀಡು ಮಾಡಿದೆ.

ಮಕ್ಕಳಿಗೆ ಲಸಿಕೆ ಯಾಕೆ?
ಹುಟ್ಟಿದ ಮಕ್ಕಳಲ್ಲಿ ಸ್ವಲ್ಪ ರೋಗ ನಿರೋಧಕ ಶಕ್ತಿ ತಾಯಿಯ ಹಾಲಿನಿಂದ ಶಿಶುವಿಗೆ ಸಿಗುತ್ತದೆ. ಆದರೆ ಇದು ಕ್ರಮೇಣ ಕಡಿಮೆಯಾಗುತ್ತದೆ. ಇದರಿಂದ ಮಕ್ಕಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ಸರಿಯಾದ ಸಮಯದಲ್ಲಿ ಲಸಿಕೆ ನೀಡಬೇಕು. ಆಗ ಮಕ್ಕಳಲ್ಲಿ ಆಂಟಿಬಾಡೀಸ್‌ ಉತ್ಪತ್ತಿಯಾಗಿ ರೋಗಾಣುವಿನೊಂದಿಗೆ ಹೋರಾಡಿ ರೋಗ ಬಾರದಂತೆ ತಡೆಗಟ್ಟುತ್ತದೆ.

ಪ್ರತಿ ಗುರುವಾರ
ಭಾರತ ಸರಕಾರ ರೋಗ ಪ್ರತಿಬಂಧಿತ ಲಸಿಕಾ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಈ ಕಾರ್ಯಕ್ರಮದಲ್ಲಿ ಹಾಕುವ ಲಸಿಕೆಗಳು ಇಡೀ ಸಮಾಜದ ಮಕ್ಕಳ ರಕ್ಷಣೆಗೆ ಅನಿವಾರ್ಯವಾಗಿದೆ. ಆದ್ದರಿಂದ ಸರಕಾರಿ ಆಸ್ಪತ್ರೆ ಯಲ್ಲಿ ಪ್ರತಿ ಗುರುವಾರ ಲಸಿಕೆಗಳನ್ನು ನೀಡಲಾಗುತ್ತಿದೆ. ಇನ್ನು ಖಾಸಗಿ ಆಸ್ಪತ್ರೆಯಲ್ಲಿ ಜನರ ಲಭ್ಯತೆ ಆಧಾರದಲ್ಲಿ ಆಯಾ ದಿನ ನೀಡಲಾಗುತ್ತಿತ್ತು.

ಯಾವ ಲಸಿಕೆ, ಯಾವಾಗ ನೀಡಬೇಕು?
ಮಗು ಜನಿಸಿದ ತ್‌ತ್‌ಕ್ಷಣ ಬಿಸಿಜಿ, ಒಪಿವಿ-, ಹೆಪೆಟೈಟಿಸ್‌-ಬಿ ಲಸಿಕೆ ನೀಡಲಾಗುತ್ತದೆ.

6ನೇ ವಾರದ ಮಗುವಿಗೆ ಒಪಿವಿ-1, ಪೆಂಟಾವಲೆಂಟ್‌-1, ರೊಟಾ-1, ಐಪಿವಿ-1, 10ನೇ ವಾರದ ಮಗುವಿಗೆ ಓಪಿವಿ-2, ಪೆಂಟಾವಲೆಂಟ್‌-2ರೊಟಾ-2, 14ನೇ ವಾರದ ಮಗುವಿಗೆ ಓಪಿವಿ-3 ಪೆಂಟಾವಲೆಂಟ್‌-3 ರೊಟಾ-3 ಐಪಿವಿ-3, 9ನೇ ತಿಂಗಳ ಮಗುವಿಗೆ ಎಂ.ಆರ್‌-1, ಜೆಇ1, 16ರಿಂದ 23ನೇ ತಿಂಗಳ ಮಗುವಿಗೆ ಎಂ.ಆರ್‌.-2, ಜೆ.ಇ- 2, ಓಪಿವಿ ವರ್ಧಕ, ಡಿಟಿಪಿ ವರ್ಧಕ-1, 5ರಿಂದ 6ನೇ ವರ್ಷದ ಮಗುವಿಗೆ ಡಿಪಿಟಿ ವರ್ಧಕ-2, 10ಹಾಗೂ 16 ವರ್ಷದ ಮಗುವಿಗೆ ಟಿ.ಡಿ. ಲಸಿಕೆ ನೀಡಲಾಗುತ್ತದೆ.

ಭಯ ಪಡುವ ಅಗತ್ಯವಿಲ್ಲ
ಯುಕೆ, ಯುಎಸ್‌ಎಗಳಲ್ಲಿ ಮಕ್ಕಳಿಗೆ 2 ರಿಂದ 4 ತಿಂಗಳ ಅಂತರದಲ್ಲಿ ಲಸಿಕೆಯನ್ನು ನೀಡಲಾಗುತ್ತಿದೆ. ಇದರಿಂದಾಗಿ ಮಕ್ಕಳಲ್ಲಿ ಕಾಯಿಲೆಗಳನ್ನು ತಡೆಗಟ್ಟುವ ಸಾಮರ್ಥ್ಯ ಹೆಚ್ಚಾಗುತ್ತದೆ. ಮಕ್ಕಳು ಮನೆಯಿಂದ ಹೊರಗಡೆ ಬಂದು ಆಹಾರ ಸೇವಿಸಿದಾಗ ಹಾಗೂ ಜನಸಮೂಹವನ್ನು ಸಂಪರ್ಕಿಸಿದಾಗ ಅತಿಸಾರ, ದಡಾರ, ರುಬೆಲ್ಲಾ, ನಾಯಿ ಕೆಮ್ಮು ಸೇರಿದಂತೆ ಇತರೆ ಸೋಂಕುಗಳಿಗೆ ತುತ್ತಾಗುತ್ತಾರೆ. ಮನೆಯಲ್ಲಿ ಇರುವುದರಿಂದ ಯಾವುದೇ ಸಮಸ್ಯೆ ಇರದು. ಆದ್ದರಿಂದ ಹೆತ್ತವರು ಭಯ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳುತ್ತಾರೆ.

ಆತಂಕ ಬೇಡ
ಪೋಷಕರು ಹೆದರುವ ಅಗತ್ಯವಿಲ್ಲ. ಲಸಿಕೆಯ ಅವಧಿಯನ್ನು ಎರಡು ತಿಂಗಳ ಮಟ್ಟಿಗೆ ಮುಂದೆ ಹಾಕಬಹುದಾಗಿದೆ. ಲಾಕ್‌ಡೌನ್‌ ತೆರವಾದ ತ್‌ತ್‌ಕ್ಷಣ ಮಕ್ಕಳಿಗೆ ಲಸಿಕೆಯನ್ನು ಹಾಕಿಸಬಹುದಾಗಿದೆ.
-ಡಾ| ಮಹಾಬಲ ಕೆ.ಎಸ್‌.,ಮಕ್ಕಳ ವೈದ್ಯ, ಸಮುದಾಯ ಆರೋಗ್ಯ ಕೇಂದ್ರ,ಬ್ರಹ್ಮಾವರ.

ಲಸಿಕೆಗೂ ಕೋವಿಡ್ 19 ಭೀತಿ
ಎಲ್ಲೆಡೆ ಕೋವಿಡ್ 19 ಭೀತಿ ಇರುವುದರಿಂದ ಮಕ್ಕಳನ್ನು ಮನೆಯಿಂದ ಹೊರ ಕರೆ ತರದಂತೆ ಸರಕಾರ ಆದೇಶ ನೀಡಿದೆ. ಮಗು ಜನಿಸಿದ ತ್‌ತ್‌ಕ್ಷಣ ನೀಡಲಾಗುವ ಲಸಿಕೆಯನ್ನು ಮಾತ್ರ ನೀಡಲಾಗುತ್ತಿದೆ. ಉಳಿದಂತೆ ಲಸಿಕೆ ಹಾಕುವುದನ್ನು ಸರಕಾರ ತಡೆ ಹಿಡಿದಿದೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.