ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ


Team Udayavani, Dec 2, 2021, 6:30 AM IST

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ಭಾರತದಲ್ಲಿ ಕೊರೊನಾ ಲಸಿಕೆ ಹಾಕಿಸದವರಿಗೆ ಉಚಿತ ರೇಷನ್‌ ಕಟ್‌, ಆಸ್ಪತ್ರೆ ಸೌಲಭ್ಯ ಕಟ್‌, ಪೆಟ್ರೋಲ್‌ ಕಟ್‌ ಹೀಗೆ ನಾನಾ ರೀತಿಯ ಕ್ರಮ ಜಾರಿಯಾಗಿವೆ. ಅದೇ ರೀತಿ ವಿದೇಶಗಳಲ್ಲೂ ಲಸಿಕೆ ಅಭಿಯಾನ ಹೆಚ್ಚಿಸುವ ನಿಟ್ಟಿನಲ್ಲಿ ಹರಸಾಹಸ ಮಾಡಲಾಗುತ್ತಿದ್ದು, ಹಲವು ಕಠಿನ ಕ್ರಮಗಳನ್ನೂ ತೆಗದುಕೊಳ್ಳಲಾಗಿದೆ. ಅದರ ಸಂಕ್ಷಿಪ್ತ ವರದಿ ಇಲ್ಲಿದೆ..

ಗ್ರೀಸ್‌, ಆಸ್ಟ್ರಿಯಾ
ಲಸಿಕೆ ಪಡೆಯದ 60 ವರ್ಷ ಮೇಲ್ಪಟ್ಟವರಿಗೆ ತಿಂಗಳಿಗೆ 100 ಯುರೋ(8461 ರೂ.) ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ನವೆಂಬರ್‌ ವರದಿಯ ಪ್ರಕಾರ ದೇಶದಲ್ಲಿ 5,20,000 ವೃದ್ಧರು ಲಸಿಕೆ ಹಾಕಿಸಿಕೊಂಡಿಲ್ಲ. ಆಸ್ಟ್ರಿಯಾದಲ್ಲಿ ಡಿಸೆಂಬರ್‌ ಮಧ್ಯದವರೆಗೆ ದೇಶದಲ್ಲಿ ಲಾಕ್‌ಡೌನ್‌ ಹೇರಲಾಗಿದೆ. ಕೊರೊನಾ ಲಸಿಕೆ ಹಾಕಿಸಿಕೊಂಡವರು ಅಥವಾ ಇತ್ತೀಚೆಗೆ ಸೋಂಕಿನಿಂದ ಗುಣಮುಖರಾದ ವರಿಗೆ ಮಾತ್ರವೇ ಲಾಕ್‌ಡೌನ್‌ ತೆರವುಗೊಳಿಸ ಲಾಗುವುದು. ಲಸಿಕೆ ಪಡೆ ಯದವರಿಗೆ ಫೆಬ್ರವರಿಯಿಂದ 7200 ಯುರೋ ದಂಡ.

ಅಮೆರಿಕ, ಉಕ್ರೇನ್‌
ಅಮೆರಿಕದ ಕೆಲವು ರಾಜ್ಯಗಳಲ್ಲಿ ಲಸಿಕೆ ಪಡೆದವರಿಗೆ ಮಾತ್ರ ಕಚೇರಿಗೆ ಬರಲು ಅನುಮತಿ ನೀಡಲಾಗಿದೆ. ತಪ್ಪಿದರೆ ಕಂಪೆ ನಿಗೆ ಕೋಟಿ ರೂಪಾಯಿ ದಂಡ ಹಾಕಲು ನಿರ್ಧರಿಸಲಾಗಿದೆ. ಉಕ್ರೇನ್‌ನಲ್ಲಿ ಲಸಿಕೆ ಪಡೆಯದ ಸರಕಾರಿ ಸಿಬಂದಿಗೆ ಸಂಬಳರಹಿತ ರಜೆ ನೀಡಲಾಗಿದ್ದು ಜಿಮ್‌, ಬಾರ್‌, ರೆಸ್ಟೋರೆಂಟ್‌ ಸಿಬಂದಿ ಸಂಪೂರ್ಣ ಲಸಿಕೆ ಪಡೆದಿದ್ದರೆ ಮಾತ್ರವೇ ಅನುಮತಿ ನೀಡಬೇಕೆಂದು ಸೂಚಿಸಲಾಗಿದೆ. ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸಾರಿಗೆ ಸೌಲಭ್ಯ ಸಿಗಲಿದೆ ಎಂದು ಸರಕಾರ ಹೇಳಿದೆ.

ಇದನ್ನೂ ಓದಿ:ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಭಾರತದಲ್ಲೂ ಎಚ್ಚರಿಕೆ
ಭಾರತದಲ್ಲಿ ಲಸಿಕೆ ಪಡೆಯದವರಿಗೆ ಕೆಲವು ರಾಜ್ಯಗಳು ಕಠಿ ನ ಕ್ರಮ ಜಾರಿಗೊಳಿಸಿದೆ. ಮಹಾರಾಷ್ಟ್ರ ದಲ್ಲಿ ಲಸಿಕೆ ಪಡೆಯದವರಿಗೆ ಸಾರ್ವಜನಿಕ ಸಾರಿಗೆ ಸೌಲಭ್ಯ ಕಲ್ಪಿಸದಿರಲು ಸರಕಾರ ನಿರ್ಧರಿಸಿದೆ. ಕೇರಳ ದಲ್ಲಿ ಲಸಿಕೆ ಪಡೆಯದವರಿಗೆ ಉಚಿತ ಆರೋಗ್ಯ ಚಿಕಿತ್ಸೆಯಿಲ್ಲ. ಮ.ಪ್ರದೇಶದ ಖಾಂಡವಾ ಜಿಲ್ಲಾಡಳಿ ತವು ಪೂರ್ತಿ ಲಸಿಕೆ ಪಡೆದವರಿಗಷ್ಟೇ ಮದ್ಯ ಖರೀದಿಸಲು ಅವಕಾಶ ನೀಡಿದೆ. ಜಿಲ್ಲೆಯ ಎಲ್ಲ ಬಾರ್‌ ಮಾಲಕರಿಗೂ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.

ಯೂರೋಪ್‌ನಲ್ಲೇ ಫ‌ಸ್ಟ್‌?
ದಕ್ಷಿಣ ಆಫ್ರಿಕಾಗಿಂತಲೂ ಮೊದಲೇ ಯೂರೋಪ್‌ ದೇಶಗಳಲ್ಲಿ ಒಮಿಕ್ರಾನ್‌ ರೂಪಾಂತರಿ ಪತ್ತೆಯಾಗಿತ್ತೇ ಎಂಬ ಅನುಮಾನಗಳು ಈಗ ಸೃಷ್ಟಿಯಾಗಿವೆ. ಇಡೀ ಜಗತ್ತಿಗೆ ಹೊಸ ರೂಪಾಂತರಿ ಬಗ್ಗೆ ದಕ್ಷಿಣ ಆಫ್ರಿಕಾ ಎಚ್ಚರಿಕೆ ನೀಡುವ ಒಂದು ವಾರ ಮುಂಚೆಯೇ ಯೂರೋಪ್‌ನ ದೇಶಗಳಲ್ಲಿ ಇದು ಇತ್ತು ಎಂದು ಹೇಳಲಾಗುತ್ತಿದೆ.

ಹಂಗೇರಿ, ಸ್ಲೊವಾಕಿಯಾ
ಹಂಗೇರಿಯಲ್ಲಿ ಲಸಿಕೆ ಪಡೆದವರಿಗೆ ಮಾತ್ರ ಕಚೇರಿಗೆ ಬರಲು ಅನುಮತಿ ನೀಡಲಾಗಿದೆ. ಲಸಿಕೆ ಪಡೆಯದವರಿಗೆ ಸಂಬಳರಹಿತ ರಜೆ ಘೋಷಣೆ ಮಾಡಲಾಗಿದೆ. ಸ್ಲೊವಾಕಿಯಾದಲ್ಲಿ ಲಸಿಕೆ ಪಡೆಯಲು ಮುಂದೆ ಬರುವ ಹಾಗೂ ಪಡೆದಿರುವ 60 ವರ್ಷ ಮೇಲ್ಪಟ್ಟವರಿಗೆ ಸರ ಕಾ ರದಿಂದ 500 ಯುರೋ(42 ಸಾವಿರ ರೂ) ಮೌಲ್ಯದ ವೋಚರ್‌ ನೀಡಲಾಗುತ್ತಿದೆ.

ಸಿಂಗಾಪುರ, ಲಿಥುವೇನಿಯಾ
ಸಿಂಗಾಪುರದಲ್ಲಿ ಲಸಿಕೆ ಪಡೆಯದವರು ಸೋಂಕಿಗೆ ತುತ್ತಾದರೆ ಅವರ ವೈದ್ಯಕೀಯ ವೆಚ್ಚ ಅವರೇ ಭರಿಸಬೇಕು. ಲಸಿಕೆ ಪಡೆದವರ ವೈದ್ಯಕೀಯ ವೆಚ್ಚವನ್ನು ಸರ ಕಾ ರ ಭರಿಸುತ್ತದೆ. ಲಿಥುವೇನಿಯಾದಲ್ಲಿ 16 ವರ್ಷ ಮೇಲ್ಪಟ್ಟವರು ಯಾವುದೇ ಸಾರ್ವಜನಿಕ ಸ್ಥಳಕ್ಕೆ ತೆರಳಬೇಕಿದ್ದರೂ ಕೊರೊನಾ ಲಸಿಕೆ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಡಿಸೆಂಬರ್‌ ಅಂತ್ಯದಿಂದ 12 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಪ್ರಮಾಣ ಪತ್ರ ಕಡ್ಡಾಯ. 75 ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದುಕೊಂಡರೆ 100 ಯುರೋ ಬಹುಮಾನ ಸಿಗುತ್ತದೆ.

ಫಿನ್ಲಂಡ್‌, ಸ್ಪೇನ್‌
ಫಿನ್ಲಂಡ್‌ ಕೊರೊನಾ ಲಸಿಕೆ ಹಾಕಿಸಿಕೊಳ್ಳದವರಿಗೆ ದೇಶದ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಸಂಜೆ 5 ಗಂಟೆಯ ಅನಂತರ ಪ್ರವೇಶವಿಲ್ಲ. ಲಸಿಕೆ ಹಾಕಿಸಿಕೊಳ್ಳು ವವರಿಗೆ ಉಚಿತ ಪ್ಲಾಸ್ಟಿಕ್‌ ಬಕೆಟ್‌ ಕೊಡಲಾಗುತ್ತಿದೆ. ಸ್ಪೇನ್‌ನಲ್ಲಿ ಲಸಿಕೆ ಪ್ರಮಾಣಪತ್ರವಿಲ್ಲದ ಯುನೈಟೆಡ್‌ ಕಿಂಗ್‌ಡಮ್‌ ನಾಗರಿಕರಿಗೆ ಪ್ರವೇಶ ನಿಷೇಧ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.