ಮೊಳಹಳ್ಳಿ: ಹುಂತನ ಕೆರೆಗೆ ಹಾಯಿಸಬೇಕಿದೆ ವಾರಾಹಿ ನೀರು


Team Udayavani, Apr 20, 2021, 3:20 AM IST

ಮೊಳಹಳ್ಳಿ: ಹುಂತನ ಕೆರೆಗೆ ಹಾಯಿಸಬೇಕಿದೆ ವಾರಾಹಿ ನೀರು

ತೆಕ್ಕಟ್ಟೆ: ಇಲ್ಲಿನ ಮೊಳಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಮಾರು 10 ಎಕರೆ ವಿಸ್ತೀರ್ಣದ ಹುಂತನಕೆರೆಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಕೃಷಿ, ಅಂತರ್ಜಲ ಮಟ್ಟ ವೃದ್ಧಿಗೆ ಅನುಗುಣವಾಗಿ ಇದರ ಪುನಶ್ಚೇತನ ಅಗತ್ಯವಿದೆ. ಇದರೊಂದಿಗೆ ಗ್ರಾಮದಲ್ಲಿ ಹಾದು ಹೋದ ವಾರಾಹಿ ಎಡದಂಡೆ ಕಾಲುವೆಗೆ ಉಪನಾಲೆ ನಿರ್ಮಿಸಿ ಕೆರೆಗೆ ನೀರು ಹಾಯಿಸಬೇಕೆಂಬ ಬೇಡಿಕೆ ಗ್ರಾಮಸ್ಥರದ್ದಾಗಿದೆ.

ನೀರು ಪೋಲು
ಪ್ರಸ್ತುತ ವಾರಾಹಿ ಎಡದಂಡೆ ಕಾಲುವೆಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ಕಾಲುವೆ ಹಾದು ಹೋದ ಗ್ರಾಮಗಳಿಗೆ ಸಮರ್ಪಕವಾಗಿ ನೀರು ಸದ್ಬಳಕೆಯಾಗದೆ ನೂರಾರು ಕ್ಯೂಸೆಕ್‌ ನೀರು ಪೋಲಾಗುತ್ತಿದೆ . ಪ್ರಮುಖ ಕಾಲುವೆಗೆ ಉಪ ನಾಲೆ ನಿರ್ಮಿಸುವ ನಿಟ್ಟಿನಿಂದ ತಲ್ಲಕ್ಕಿ ಸಮೀಪ ಇಲಾಖೆ ಗೇಟ್‌ ನಿರ್ಮಿಸಿದೆ. ಆದರೆ ಗೇಟ್‌ನಿಂದ ಸುಮಾರು 500 ಮೀಟರ್‌ ಅಂತರದಲ್ಲಿರುವ ಹುಂತನ ಕೆರೆಗೆ ನೀರು ಹಾಯಿಸುವುದಕ್ಕೆ ಕ್ರಮ ಕೈಗೊಂಡಿಲ್ಲ.

ಪ್ರಯೋಜನಕಾರಿ
ಹುಂತನ ಕೆರೆಗೆ ನೀರು ಹಾಯಿಸುವ ಬಗ್ಗೆ ಗ್ರಾಮಸ್ಥರ ಹಲವು ದಶಕಗಳ ಬೇಡಿಕೆಗೆ ಅನುಗುಣವಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಂಡರೆ ಮಾತ್ರ ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರು, ಪ್ರಾಣಿ, ಪಕ್ಷಿಗಳು ಸೇರಿದಂತೆ ನೂರಾರು ಎಕರೆ ಕೃಷಿ ಭೂಮಿಗಳಿಗೆ ಪ್ರಯೋಜನವಾಗಲಿದೆ. ಅತ್ಯಮೂಲ್ಯ ಕೆರೆಗಳ ಪುನಶ್ಚೇತನಗೊಳ್ಳುವ ಮೂಲಕ ಕೃಷಿ ಭೂಮಿಗಳು ಮತ್ತೆ ಹಸನಾಗಬೇಕಾಗಿರುವುದು ಅಗತ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಹಿರಿಯ ಕೃಷಿಕ ಸಾಧು ಪೂಜಾರಿ ಅವರು.

ಒತ್ತುವರಿ
ನಿರ್ವಹಣೆಯ ಕೊರತೆಯಿಂದಾಗಿ ಸೊರಗಿ ಹೋಗಿರುವ ಈ ಕೆರೆ ಸುತ್ತ ಗಿಡಗಂಟಿಗಳು ಆವರಿಸಿವೆ. ಅಪಾರ ನೀರಿನಾಶ್ರಯ ಹೊಂದಿದ ಕೆರೆಯ ಪ್ರದೇಶವನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡ ಬಗ್ಗೆ ಆರೋಪಗಳಿವೆ.

ಯೋಜನೆ ಸಿದ್ಧ
ಉಪ ನಾಲೆಗಳ ನಿರ್ಮಾಣಕ್ಕೆ ಈಗಾಗಲೇ ಯೋಜನೆ ಸಿದ್ಧಗೊಂಡಿದ್ದು , ಉಪನಾಲೆಯಿಂದ ನೇರವಾಗಿ (ಈಜಿrಛಿcಠಿ Ouಠಿlಛಿಠಿ) ಕೆರೆಗೆ ನೀರು ಹಾಯಿಸುವ ಪ್ರಕ್ರಿಯೆ ನಡೆಯಲಿದ್ದು, ಈ ಕುರಿತು ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ. ಮಳೆಗಾಲದ ಅನಂತರ ಕಾಮಗಾರಿ ಆರಂಭಗೊಳ್ಳಲಿದೆ.
– ಪ್ರಸನ್ನ ಶೇಟ್‌, ಅಭಿಯಂತ, ವಾರಾಹಿ ಯೋಜನಾ ವಿಭಾಗ.

ಉತ್ತಮ ನೀರಿನಾಶ್ರಯ
ಮೊಳಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಮಾರು 10 ಎಕರೆ ವಿಸ್ತೀರ್ಣದ ಹುಂತನ ಕೆರೆಯಲ್ಲಿ ಉತ್ತಮ ನೀರಿನಾಶ್ರಯವನ್ನು ಹೊಂದಿದೆ. ಇದನ್ನು ಪುನರುಜ್ಜೀವನಗೊಳಿಸುವುದರೊಂದಿಗೆ ವಾರಾಹಿ ಕಾಲುವೆ ಯಿಂದ ಉಪ ನಾಲೆಯ ಮೂಲಕ ಹುಂತನ ಕೆರೆಗೆ ನೀರು ಹಾಯಿಸಿದಾಗ ಗ್ರಾಮದಲ್ಲಿ ಎದುರಾಗುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ.

– ದಿನೇಶ್‌ ಹೆಗ್ಡೆ ಮೊಳಹಳ್ಳಿ, ಸದಸ್ಯರು, ಗ್ರಾ.ಪಂ. ಮೊಳಹಳ್ಳಿ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.