
ವರುಣಾ ಕ್ಷೇತ್ರ: ಸಿದ್ದರಾಮಯ್ಯ ಮತಯಾಚನೆ
Team Udayavani, Mar 30, 2023, 6:49 AM IST

ನಂಜನಗೂಡು: ನಾನು ಇನ್ನು ಕ್ಷೇತ್ರದಲ್ಲಿ ಮತಯಾಚನೆಗೆ ಬರುವುದಿಲ್ಲ. ಪುತ್ರ ಯತೀಂದ್ರರೇ ತಮ್ಮ ಪರವಾಗಿ ಮಾತಯಾಚಿಸುತ್ತಾರೆ. ವರುಣಾ ಜನತೆ ಈ ಹಿಂದೆ ತಮಗೆ ಆಶೀರ್ವಾದ ನೀಡಿದ್ದರಿಂದಲೇ ವಿಪಕ್ಷದ ನಾಯಕ, ಮುಖ್ಯಮಂತ್ರಿ ಸಹಿತ ಎಲ್ಲ ಅಧಿಕಾರವನ್ನು ಅನುಭವಿಸುವಂತಾಯಿತು.
ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ತಾವು ರಾಜ್ಯಾದ್ಯಂತ ಪ್ರವಾಸ ಮಾಡಬೇಕಿರುವುದರಿಂದ ನೀವೇ ನನ್ನ ಪರವಾಗಿ ಕೆಲಸ ಮಾಡಿ ಮತ ನೀಡಿ ಗೆಲ್ಲಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
ತಾಲೂಕಿನ ಬಿಳುಗಲಿಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕಪಿಲಾ ಸೇತುವೆ ಉದ್ಘಾಟನೆ ಹಾಗೂ ಡಾ| ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಕ್ಷ ಅಳೆದು ತೂಗಿ ನನ್ನನ್ನು ಇಲ್ಲಿ ನಿಲ್ಲಿಸಿದೆ. ಈಗ ನೀವು ನಿಲ್ಲು ಎನ್ನುತ್ತೀರಾ, ಬೇಡ ಎನ್ನುತ್ತಿರಾ? ನೀವು ಹೇಳಿದ ಹಾಗೆ ಎಂದು ಸಿದ್ದರಾಮಯ್ಯ ನುಡಿದಾಗ ಸಭೆಯಿಂದ “ನೀವೇ ನಿಲ್ಲಿ’ ಎಂಬ ಒಕ್ಕೊರಲಿನ ಧ್ವನಿ ಕೇಳಿ ಬಂದಿತು. ಹಾಗಾದರೆ ಮತಯಾಚನೆಯಲ್ಲಿ ಯತೀಂದ್ರರಿಗೆ ಮಾಜಿ ಸಚಿವ ಡಾ| ಎಚ್.ಸಿ. ಮಹದೇವಪ್ಪ ಹಾಗೂ ಡಾ| ತಿಮ್ಮಯ್ಯ ಸಹಿತ ಕೈ ಪಕ್ಷದ ನೂರಾರು ಮುಖಂಡರು ಸಾಥ್ ನೀಡುತ್ತಾರೆಂದು ಸಿದ್ದರಾಮಯ್ಯ ತಿಳಿಸಿದರು.
ಹಣದ ಚೀಲದೊಂದಿಗೆ ಬಿಜೆಪಿ ಕಣಕ್ಕಿಳಿಯಲಿದೆ
ನಂಜನಗೂಡು -ಸಮಾನತೆ ಬೇಡವಾದ ಬಿಜೆಪಿ ಭ್ರಷ್ಟಾಚಾರದ ಹಣದ ತೈಲಿಯೊಂದಿಗೆ ಈ ಬಾರಿ ಚುನಾವಣಾ ಕಣಕ್ಕಿಳಿಯಲಿದೆ. ಮತದಾರರೇ ಜಾಗೃತರಾಗಿರಿ ಎಂದು ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್, ಸೇನ್ ಕ್ವಾರ್ಟರ್ ಫೈನಲಿಗೆ