ಮೊದಲ ದಿನವೇ ಟೋಲ್‌ಗ‌ಳಲ್ಲಿ ವಾಹನ ದಟ್ಟಣೆ


Team Udayavani, Dec 16, 2019, 3:08 AM IST

modal-dinaver

ಬೆಳಗಾವಿ/ಮಂಗಳೂರು/ದಾವಣಗೆರೆ/ದೇವನಹಳ್ಳಿ: ಕೇಂದ್ರ ಸರ್ಕಾರದ ನಿರ್ದೇಶನದಂತೆ ಭಾನುವಾರದಿಂದ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್‌ನಲ್ಲಿ 10 ಲೇನ್‌ಗಳ ಪೈಕಿ ನಾಲ್ಕು ಲೇನ್‌, ಹತ್ತರಗಿ ಟೋಲ್‌ನಲ್ಲಿಯ 12 ಲೇನ್‌ಗಳ ಪೈಕಿ ಆರು ಲೇನ್‌ ಹಾಗೂ ಕೊಗನೊಳ್ಳಿ ಟೋಲ್‌ ನಾಕಾದಲ್ಲಿ 12 ಲೇನ್‌ಗಳ ಪೈಕಿ ಆರು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್‌ಗೆ ನಿಗದಿ ಪಡಿಸಲಾಗಿದೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳ ಐದು ಟೋಲ್‌ಗ‌ಳಲ್ಲಿ ಪ್ರಥಮ ದಿನ ನಗದು ಪಾವತಿ ಲೇನ್‌ನಲ್ಲಿ ಒಂದಷ್ಟು ವಾಹನದಟ್ಟಣೆ ಉಂಟಾಗಿ ಸಮಸ್ಯೆಯಾಯಿತು. ಸಾಸ್ತಾನ ಟೋಲ್‌ನಲ್ಲಿ ನಗದು ಪಾವತಿ ಲೇನ್‌ನಲ್ಲಿ ವಾಹನದಟ್ಟಣೆ ಅಧಿಕವಾಗಿತ್ತು. ಇಲ್ಲಿ ನಗದು ಪಾವತಿಗೆ 4, ಸ್ಥಳೀಯರಿಗೆ 2 ಫಾಸ್ಟ್‌ಟ್ಯಾಗ್‌ಗೆ 4 ಲೇನ್‌ಗಳಿದ್ದವು. ವಾಹನದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಹೆಚ್ಚುವರಿಯಾಗಿ 15 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಸೂಚನೆ ನೀಡಿದರೂ ಫಾಸ್ಟ್‌ಟ್ಯಾಗ್‌ ಲೇನ್‌ನಲ್ಲಿ ಸಂಚರಿಸಿದ, ಫಾಸ್ಟ್‌ಟ್ಯಾಗ್‌ ಅಳವಡಿಸದ ವಾಹನಗಳಿಗೆ ದುಪ್ಪಟ್ಟು ಟೋಲ್‌ ವಿಧಿಸಲಾಯಿತು. ಈ ಸಂದರ್ಭ ಟೋಲ್‌ನ ಸಿಬ್ಬಂದಿ ಜತೆ ಜಟಾಪಟಿ ನಡೆಸಿದ ಘಟನೆಯೂ ನಡೆದಿದೆ. ಸುಮಾರು ಶೇ. 25ರಿಂದ 30ರಷ್ಟು ವಾಹನಗಳು ಭಾನುವಾರ ಫಾಸ್ಟ್‌ಟ್ಯಾಗ್‌ನಲ್ಲಿ ಸಂಚರಿಸಿವೆ. ದಾವಣಗೆರೆಯಲ್ಲಿ ಫಾಸ್ಟ್‌ಟ್ಯಾಗ್‌ಗೆ ಪ್ರಾರಂಭಿಕ ಹಂತದಲ್ಲೇ ಹಲವಾರು ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡವು.

ಫಾಸ್ಟ್‌ಟ್ಯಾಗ್‌ ಆ್ಯಕ್ಟಿವೇಷನ್‌ ಆಗಲಿಕ್ಕೆ 1-2 ದಿನಗಳ ಕಾಲಾವಕಾಶ ಬೇಕು. ಆದರೆ, ಅನೇಕರಿಗೆ ಆ ಬಗ್ಗೆ ಮಾಹಿತಿಯೇ ಇಲ್ಲ. ಫಾಸ್ಟ್‌ಟ್ಯಾಗ್‌ ಸ್ಟಿಕ್ಕರ್‌ಗಳನ್ನು ತಮ್ಮ ವಾಹನದಲ್ಲಿ ಅಂಟಿಸಿಕೊಂಡರೆ ಮಗಿಯಿತು ಎಂದೇ ಅನೇಕರು ತಿಳಿದುಕೊಂಡಿದ್ದಾರೆ. ಫಾಸ್ಟ್‌ಟ್ಯಾಗ್‌ ಸ್ಟಿಕ್ಕರ್‌ ಅಳವಡಿಸಿಕೊಂಡಿದ್ದರೂ ಟೋಲ್‌ಗ‌ಳಲ್ಲಿ ರೀಡಿಂಗ್‌ ತೋರಿಸದೇ ಇರುವ ಕಾರಣಕ್ಕೆ ಟೋಲ್‌ಗ‌ಳಲ್ಲಿ ಮುಂದೆ ಹೋಗುವುದಕ್ಕೆ ಅವಕಾಶ ನೀಡಲಾಗುತ್ತಿಲ್ಲ. ಹಾಗಾಗಿ ಕೆಲವು ಕಡೆ ಮಾತಿನ ಚಕಮಕಿ-ವಾಗ್ವಾದ ಸಹ ನಡೆದಿವೆ.

ಫಾಸ್ಟ್‌ಟ್ಯಾಗ್‌ ಆ್ಯಕ್ಟಿವೇಷನ್‌ ಆಗಲಿಕ್ಕೆ 1-2 ದಿನಗಳ ಕಾಲಾವಕಾಶ ಬೇಕು ಎಂಬ ಸಾಮಾನ್ಯ ಮಾಹಿತಿ ನೀಡದೇ ಇರುವುದು ಗೊಂದಲಕ್ಕೆ ಕಾರಣವಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ಸಾದಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿನ ಟೋಲ್‌ ಸಂಗ್ರಹ ಕೇಂದ್ರದ ಬಳಿ ಗಂಟೆಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಸಾವಿರಾರು ವಾಹನ ಸವಾರರು ಪರದಾಟ ನಡೆಸಬೇಕಾಯಿತು.

ಫಾಸ್ಟ್‌ಟ್ಯಾಗ್‌ ಸಾಲಿನಲ್ಲಿ ಹೆಚ್ಚು ವಾಹನಗಳು ಕಂಡು ಬರಲಿಲ್ಲ. ಆದರೆ, ಹಣ ಪಾವತಿಸುವ ಸಾಲುಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು, ನಿಗದಿತ ವೇಳೆಗೆ ವಿಮಾನ ನಿಲ್ದಾಣ ತಲುಪಲಾಗದೇ, ಸಂಕಷ್ಟ ಅನುಭವಿಸಿದರು. ಈ ಮಧ್ಯೆ, ಸೋಮವಾರದಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.