ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ


Team Udayavani, Dec 2, 2021, 12:35 PM IST

ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ

ಹುಬ್ಬಳ್ಳಿ : ಬಾಯಿ ಚಪ್ಪರಿಸುವಂತಹ ರುಚಿಕಟ್ಟಾದ ದಕ್ಷಿಣ ಭಾರತದ ತರಹೇವಾರಿ ತಿಂಡಿ ತಿನಿಸುಗಳು, ಪಾಕ ವಿಧಾನ ಉತ್ತರ ಭಾರತದ ಮದುವೆ ಸಮಾರಂಭಗಳಲ್ಲಿ ಘಮಗುಡುತ್ತಿದೆ. ಸಹೋದರರಿಬ್ಬರು ತಂಡ ಕಟ್ಟಿಕೊಂಡು ಕ್ಯಾಟರಿಂಗ್‌ ಮೂಲಕ ಅಲ್ಲಿನ ಜನರಿಗೆ ಈ ಭಾಗದ ರಸವತ್ತಾದ ಭಕ್ಷಭೋಜನ ಉಣಬಡಿಸುತ್ತಿದ್ದಾರೆ. ಬಾಣಸಿಗರು, ಮಸಾಲೆ ಸೇರಿದಂತೆ ಪ್ರತಿಯೊಂದು ಅಡುಗೆ ಸಾಮಗ್ರಿ ಈ ಭಾಗದ್ದೇ ಆಗಿದೆ.

ಉತ್ತರ ಕರ್ನಾಟಕದಲ್ಲಿ ಮೊದಲ ದಾವಣಗೆರೆ ಬೆಣ್ಣೆ ದೋಸೆ ಪರಿಚಯಿಸಿದ ಮುದ್ದಳ್ಳಿ ಕುಟುಂಬದ ಸಹೋದರರಾದ ಮಲ್ಲಿಕಾರ್ಜುನ ಮುದ್ದಳ್ಳಿ, ವೀರೇಶ ಮುದ್ದಳ್ಳಿ ಈ ಕಾರ್ಯದಲ್ಲಿ ತೊಡಗಿದ್ದಾರೆ. ಈ ಭಾಗದ ತಿಂಡಿ, ತಿನಿಸು, ಊಟದ ಸವಿಯನ್ನು ಕಳೆದ 10 ವರ್ಷಗಳಿಂದ ಉತ್ತರ ಭಾರತದ ಮದುವೆ ಸಮಾರಂಭಗಳಲ್ಲಿ ಪರಿಚಯಿಸುತ್ತಿದ್ದಾರೆ. ಪ್ರತಿ ಸೀಸನ್‌ನಲ್ಲಿ ಆ ಭಾಗದ ಸುಮಾರು 60-70 ಮದುವೆಗಳಿಗೆ ದಕ್ಷಿಣ ಭಾರತದ ತರಹೇವಾರಿ ಖಾದ್ಯಗಳು ಇಷ್ಟವಾಗುತ್ತಿವೆ. ರುಚಿಕರ ಆಹಾರ ಪದಾರ್ಥಗಳೊಂದಿಗೆ ಗ್ರಾಮೀಣ ಸಂಸ್ಕೃತಿ ಸೆಟ್‌ ಗಳಿಂದ ಗಮನ ಸೆಳೆಯುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ದಕ್ಷಿಣ ಭಾರತದ ಖಾದ್ಯಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ಕೈ ಹಿಡಿದ ಬೆಣ್ಣೆ ರುಚಿ: ನಗರದಲ್ಲಿ ನೆಲೆಸಿ ವ್ಯಾಪಾರ ವ್ಯವಹಾರ ನಡೆಸುತ್ತಿರುವ ರಾಜಸ್ಥಾನ, ಗುಜರಾತ ಮೂಲದವರು ಇವರ ಬೆಣ್ಣೆ ದೋಸೆ ರುಚಿಗೆ ಮನ ಸೋತಿದ್ದರು. ಹೀಗಾಗಿ ತಮ್ಮ ಮೂಲ ಸ್ಥಳಗಳಲ್ಲಿ ನಡೆಯುವ ಮದುವೆ, ಸಮಾರಂಭಗಳಿಗೆ ಇವರನ್ನು ಕರೆದುಕೊಂಡು ಹೋಗಿ ದಕ್ಷಿಣ ಭಾರತದ ಅಡುಗೆ ರುಚಿ ಉಣಬಡಿಸುತ್ತಿದ್ದರು.

ಇದನ್ನೂ ಓದಿ : ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಒಂದೆರಡು ವರ್ಷ ಆಗುತ್ತಿದ್ದಂತೆ ಕ್ಯಾಟರಿಂಗ್‌ ವ್ಯವಸ್ಥೆ ರೂಪಿಸಿಕೊಂಡು ನೇರವಾಗಿ ಮದುವೆ ಸಮಾರಂಭಗಳಿಗೆ ದಕ್ಷಿಣ ಭಾರತದ ತಿಂಡಿ-ತಿನಿಸುಗಳನ್ನು ರುಚಿ ತೋರಲು ಮುಂದಾದರು. ಇದೀಗ ಒಂದು ಉದ್ಯಮವಾಗಿ ರೂಪುಗೊಂಡಿದ್ದು, ಇಲ್ಲಿನ ಹೋಟೆಲ್‌ ಹಾಗೂ ಕ್ಯಾಟರಿಂಗ್‌ ಸೇರಿ ಸುಮಾರು 120ಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ನೀಡಿದ್ದಾರೆ.

ರಾಜಸ್ಥಾನದ ಜೋಧಪುರ ಕೇಂದ್ರೀಕರಿಸಿಕೊಂಡು ಗುಜರಾತ, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಲ್ಲೂ ಕಾರ್ಯ ವಿಸ್ತರಿಸಿಕೊಂಡಿದ್ದಾರೆ.

ಎಲ್ಲರೂ ಇಲ್ಲಿನವರೇ: ದಕ್ಷಿಣ ಭಾರತದ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳಲ್ಲಿ ಹೆಸರುವಾಸಿಯಾದ ಖಾದ್ಯಗಳನ್ನು ಪರಿಚಯಿಸುತ್ತಿದ್ದಾರೆ. ಅಡುಗೆಗೆ ಬೇಕಾಗುವ ಪದಾರ್ಥಗಳನ್ನು ಇಲ್ಲಿಂದಲೇ ತೆಗೆದುಕೊಂಡು ಹೋಗಲಾಗುತ್ತಿದೆ. ಸುಮಾರು 80 ಯುವಕರ ತಂಡ, ಬಾಣಸಿಗರು ಕೂಡ ಇಲ್ಲಿನವರೇ. ಒಮ್ಮೆ ಹೋದವರು 6 ತಿಂಗಳ
ಕಾಲ ಅಲ್ಲಿಯೇ ಉಳಿದು ಸೀಸನ್‌ ಮುಗಿಸಿ ವಾಪಸಾಗುತ್ತಾರೆ.

– ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.