ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ


Team Udayavani, Dec 2, 2021, 12:35 PM IST

ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ

ಹುಬ್ಬಳ್ಳಿ : ಬಾಯಿ ಚಪ್ಪರಿಸುವಂತಹ ರುಚಿಕಟ್ಟಾದ ದಕ್ಷಿಣ ಭಾರತದ ತರಹೇವಾರಿ ತಿಂಡಿ ತಿನಿಸುಗಳು, ಪಾಕ ವಿಧಾನ ಉತ್ತರ ಭಾರತದ ಮದುವೆ ಸಮಾರಂಭಗಳಲ್ಲಿ ಘಮಗುಡುತ್ತಿದೆ. ಸಹೋದರರಿಬ್ಬರು ತಂಡ ಕಟ್ಟಿಕೊಂಡು ಕ್ಯಾಟರಿಂಗ್‌ ಮೂಲಕ ಅಲ್ಲಿನ ಜನರಿಗೆ ಈ ಭಾಗದ ರಸವತ್ತಾದ ಭಕ್ಷಭೋಜನ ಉಣಬಡಿಸುತ್ತಿದ್ದಾರೆ. ಬಾಣಸಿಗರು, ಮಸಾಲೆ ಸೇರಿದಂತೆ ಪ್ರತಿಯೊಂದು ಅಡುಗೆ ಸಾಮಗ್ರಿ ಈ ಭಾಗದ್ದೇ ಆಗಿದೆ.

ಉತ್ತರ ಕರ್ನಾಟಕದಲ್ಲಿ ಮೊದಲ ದಾವಣಗೆರೆ ಬೆಣ್ಣೆ ದೋಸೆ ಪರಿಚಯಿಸಿದ ಮುದ್ದಳ್ಳಿ ಕುಟುಂಬದ ಸಹೋದರರಾದ ಮಲ್ಲಿಕಾರ್ಜುನ ಮುದ್ದಳ್ಳಿ, ವೀರೇಶ ಮುದ್ದಳ್ಳಿ ಈ ಕಾರ್ಯದಲ್ಲಿ ತೊಡಗಿದ್ದಾರೆ. ಈ ಭಾಗದ ತಿಂಡಿ, ತಿನಿಸು, ಊಟದ ಸವಿಯನ್ನು ಕಳೆದ 10 ವರ್ಷಗಳಿಂದ ಉತ್ತರ ಭಾರತದ ಮದುವೆ ಸಮಾರಂಭಗಳಲ್ಲಿ ಪರಿಚಯಿಸುತ್ತಿದ್ದಾರೆ. ಪ್ರತಿ ಸೀಸನ್‌ನಲ್ಲಿ ಆ ಭಾಗದ ಸುಮಾರು 60-70 ಮದುವೆಗಳಿಗೆ ದಕ್ಷಿಣ ಭಾರತದ ತರಹೇವಾರಿ ಖಾದ್ಯಗಳು ಇಷ್ಟವಾಗುತ್ತಿವೆ. ರುಚಿಕರ ಆಹಾರ ಪದಾರ್ಥಗಳೊಂದಿಗೆ ಗ್ರಾಮೀಣ ಸಂಸ್ಕೃತಿ ಸೆಟ್‌ ಗಳಿಂದ ಗಮನ ಸೆಳೆಯುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ದಕ್ಷಿಣ ಭಾರತದ ಖಾದ್ಯಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ಕೈ ಹಿಡಿದ ಬೆಣ್ಣೆ ರುಚಿ: ನಗರದಲ್ಲಿ ನೆಲೆಸಿ ವ್ಯಾಪಾರ ವ್ಯವಹಾರ ನಡೆಸುತ್ತಿರುವ ರಾಜಸ್ಥಾನ, ಗುಜರಾತ ಮೂಲದವರು ಇವರ ಬೆಣ್ಣೆ ದೋಸೆ ರುಚಿಗೆ ಮನ ಸೋತಿದ್ದರು. ಹೀಗಾಗಿ ತಮ್ಮ ಮೂಲ ಸ್ಥಳಗಳಲ್ಲಿ ನಡೆಯುವ ಮದುವೆ, ಸಮಾರಂಭಗಳಿಗೆ ಇವರನ್ನು ಕರೆದುಕೊಂಡು ಹೋಗಿ ದಕ್ಷಿಣ ಭಾರತದ ಅಡುಗೆ ರುಚಿ ಉಣಬಡಿಸುತ್ತಿದ್ದರು.

ಇದನ್ನೂ ಓದಿ : ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಒಂದೆರಡು ವರ್ಷ ಆಗುತ್ತಿದ್ದಂತೆ ಕ್ಯಾಟರಿಂಗ್‌ ವ್ಯವಸ್ಥೆ ರೂಪಿಸಿಕೊಂಡು ನೇರವಾಗಿ ಮದುವೆ ಸಮಾರಂಭಗಳಿಗೆ ದಕ್ಷಿಣ ಭಾರತದ ತಿಂಡಿ-ತಿನಿಸುಗಳನ್ನು ರುಚಿ ತೋರಲು ಮುಂದಾದರು. ಇದೀಗ ಒಂದು ಉದ್ಯಮವಾಗಿ ರೂಪುಗೊಂಡಿದ್ದು, ಇಲ್ಲಿನ ಹೋಟೆಲ್‌ ಹಾಗೂ ಕ್ಯಾಟರಿಂಗ್‌ ಸೇರಿ ಸುಮಾರು 120ಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ನೀಡಿದ್ದಾರೆ.

ರಾಜಸ್ಥಾನದ ಜೋಧಪುರ ಕೇಂದ್ರೀಕರಿಸಿಕೊಂಡು ಗುಜರಾತ, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಲ್ಲೂ ಕಾರ್ಯ ವಿಸ್ತರಿಸಿಕೊಂಡಿದ್ದಾರೆ.

ಎಲ್ಲರೂ ಇಲ್ಲಿನವರೇ: ದಕ್ಷಿಣ ಭಾರತದ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳಲ್ಲಿ ಹೆಸರುವಾಸಿಯಾದ ಖಾದ್ಯಗಳನ್ನು ಪರಿಚಯಿಸುತ್ತಿದ್ದಾರೆ. ಅಡುಗೆಗೆ ಬೇಕಾಗುವ ಪದಾರ್ಥಗಳನ್ನು ಇಲ್ಲಿಂದಲೇ ತೆಗೆದುಕೊಂಡು ಹೋಗಲಾಗುತ್ತಿದೆ. ಸುಮಾರು 80 ಯುವಕರ ತಂಡ, ಬಾಣಸಿಗರು ಕೂಡ ಇಲ್ಲಿನವರೇ. ಒಮ್ಮೆ ಹೋದವರು 6 ತಿಂಗಳ
ಕಾಲ ಅಲ್ಲಿಯೇ ಉಳಿದು ಸೀಸನ್‌ ಮುಗಿಸಿ ವಾಪಸಾಗುತ್ತಾರೆ.

– ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.