Forest: ಕಾಡಾನೆ ದಾಳಿ: ಶಾರ್ಪ್ ಶೂಟರ್ ಸಾವು
Team Udayavani, Aug 31, 2023, 10:58 PM IST
ಹಾಸನ: ಜಿಲ್ಲೆಯ ಆಲೂರು ಹಳ್ಳಿಯೂರಿನಲ್ಲಿ ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡಲು ಅರಿವಳಿಕೆ ನೀಡುವ ಪ್ರಯತ್ನದಲ್ಲಿದ್ದ ಶಾರ್ಪ್ ಶೂಟರ್, ಆಲೂರು ತಾಲೂಕು ಹೊನ್ನವಳ್ಳಿಯ ವೆಂಕಟೇಶ್ (65) ಅವರ ಮೇಲೆಯೇ ಆನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಒಂದು ವಾರದ ಹಿಂದೆ ಎರಡು ಕಾಡಾನೆಗಳ ನಡುವಿನ ಕಾದಾಟದಲ್ಲಿ ಭೀಮ ಎಂಬ 40 ವರ್ಷ ಪ್ರಾಯದ ಕಾಡಾನೆ ಗಾಯಗೊಂಡಿತ್ತು. ಇದಕ್ಕೆ ವೆಂಕಟೇಶ್ ಅವರಿಂದಲೇ ಅರವಳಿಕೆ ಚುಚ್ಚುಮದ್ದು ನೀಡಿ ಪ್ರಜ್ಞೆ ತಪ್ಪಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಭೀಮನಿಗೆ ಗಾಯಗಳು ಹೆಚ್ಚಾಗಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಅನುಮತಿ ನೀಡಿದ್ದರು. ಅದರಂತೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿತ್ತು. ಈ ಸಂದರ್ಭ ದುರಂತ ನಡೆದಿದೆ.
ಆನೆಗೆ ಚುಚ್ಚುಮದ್ದು ನೀಡಿದ ಕೂಡಲೇ ಅದು ಹಿಂದಿರುಗಿ ಬಂದು ಅರಣ್ಯ ಸಿಬಂದಿ ಮೇಲೆ ದಾಳಿಗೆ ಮುಂದಾಯಿತು. ಆಗ ವೆಂಕಟೇಶ್ ಆನೆಗೆ ಸಿಕ್ಕಿಬಿದ್ದರು. ಅವರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾರಣ ಅವರು ಗಂಭೀರವಾಗಿ ಗಾಯಗೊಂಡರು.
ಆನೆಗಳ ತಜ್ಞನೇ ಆಗಿದ್ದ ಶಾರ್ಪ್ ಶೂಟರ್ ವೆಂಕಟೇಶ್
ವೆಂಕಟೇಶ್ 1988ರಿಂದ ಅರಣ್ಯ ಕಾವಲುಗಾರ ( ಫಾರೆಸ್ಟ್ ವಾಚರ್)ರಾಗಿ ದಿನಗೂಲಿಯಾಗಿ ಸೇವೆಗೆ ಸೇರಿದ್ದರು. ಆನೆಗಳ ವಿಷಯದಲ್ಲಿ ಹೆಚ್ಚು ತಜ್ಞರಾಗಿದ್ದ ಅವರು ಇದುವರೆಗೆ 100ಕ್ಕೂ ಹೆಚ್ಚು ಕಾಡಾನೆಗಳಿಗೆ ಚುಚ್ಚುಮದ್ದು ನೀಡಿದ್ದರು. ಅರುಣಾಚಲ ಪ್ರದೇಶದಲ್ಲಿ ಕಾಡಾನೆ ಹಿಡಿಯವ ಕಾರ್ಯಾಚರಣೆಯಲ್ಲೂ ವೆಂಕಟೇಶ್ ಪಾಲ್ಗೊಂಡಿದ್ದರು. ಇಲಾಖೆಯು 2013ರಲ್ಲಿ ವೆಂಕಟೇಶ್ ಅವರ ಸೇವೆಯನ್ನು ಖಾಯಂಗೊಳಿಸಿತು. 2018ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ