ಸಚಿವೆ ನಿರ್ಮಲಾ ಎದುರು ಕಣ್ಣೀರಾದ ಸಂತ್ರಸ್ತರು


Team Udayavani, Aug 11, 2019, 3:07 AM IST

sachive-ni

ಬೆಳಗಾವಿ: ನಗರ ಸೇರಿ ವಿವಿಧೆಡೆ ಸುರಿದ ಧಾರಾ ಕಾರ ಮಳೆಯಿಂದ ಬೆಳಗಾವಿ ಜಿಲ್ಲೆ ತತ್ತರಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್‌ ಅವರ ಎದುರು ನೆರೆ ಪೀಡಿತ ಸಂತ್ರಸ್ತರು ನೋವು ತೋಡಿಕೊಂಡು ಕಣ್ಣೀರು ಸುರಿಸಿದರು.

ನಗರದ ವಡಗಾಂವಿ ಪ್ರದೇಶದ ಸಾಯಿಭವನದಲ್ಲಿ ಜಿಲ್ಲಾಡಳಿತ ಸ್ಥಾಪಿಸಿರುವ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಅಲ್ಲಿದ್ದ ಮಹಿಳೆಯರು, ಮಳೆ ಬಂದು ನಮ್ಮ ಬದುಕೇ ಕೊಚ್ಚಿಕೊಂಡು ಹೋಗಿದೆ. ಮನೆಯೂ ಇಲ್ಲ, ಉದ್ಯೋಗವೂ ಇಲ್ಲದಂತಾಗಿದೆ. ಸರ್ಕಾರ ನಮ್ಮ ನೆರವಿಗೆ ನಿಲ್ಲಬೇಕು ಎಂದು ಮನವಿ ಮಾಡಿಕೊಂಡರು.

ನೇಕಾರಿಕೆ ಮಾಡಿಕೊಂಡು ಹೊಟ್ಟೆ ತುಂಬಿಕೊಳ್ಳುತ್ತಿದ್ದೇವೆ. ಮಳೆಯಿಂದ ಮನೆ ಹಾಗೂ ನಮ್ಮ ಉದ್ಯೋಗಕ್ಕೆ ಆಸರೆಯಾಗಿದ್ದ ಮಗ್ಗಗಳೂ ನೀರು ಪಾಲಾಗಿವೆ. ಸೂಕ್ತ ಪುನರ್ವಸತಿ ಕಲ್ಪಿಸಿ ಮಗ್ಗಗಳನ್ನೂ ಕೊಡಿಸಬೇಕು ಎಂದು ಸಂತ್ರಸ್ತ ಮಹಿಳೆ ವಿದ್ಯಾರಾಣಿ ಮಕಾಟಿ ಕಣ್ಣೀರಿಡುತ್ತಿದ್ದಂತೆ ಸಚಿವೆಯ ಕಣ್ಣುಗಳೂ ಒದ್ದೆಯಾಗಿದ್ದವು. ಆಗ ಜಿಲ್ಲಾ ಧಿಕಾರಿ ಡಾ|ಎಸ್‌.ಬಿ. ಬೊಮ್ಮನಹಳ್ಳಿ ಅವರನ್ನು ಕರೆಯಿಸಿ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವಂತೆ ಸೂಚಿಸಿದರು. ಬಳಿಕ ಆ ಮಹಿಳೆಯನ್ನು ತಬ್ಬಿ ಸಂತೈಸಿ ಧೈರ್ಯ ನೀಡಿದರು.

ಚಪ್ಪಾಳೆಯ ಸ್ವಾಗತ: ಈ ಮಧ್ಯೆ ಪುನರ್ವಸತಿ ಕೇಂದ್ರಕ್ಕೆ ಸಚಿವೆ ನಿರ್ಮಲಾ ಆಗಮಿಸುತ್ತಿದ್ದಂತೆ ಸಂತ್ರಸ್ತರು ಚಪ್ಪಾಳೆ ಹೊಡೆದು ಸ್ವಾಗತಿಸಿದರು. ಖುದ್ದಾಗಿ ಪ್ರತಿ ಮಹಿಳೆಯ ಸಮಸ್ಯೆ ಆಲಿಸಿ ಸಾಂತ್ವನ ಹೇಳಿದರು. ಸಾಲಾಗಿ ಕುಳಿತಿದ್ದ ಸಂತ್ರಸ್ತರ ನೋವಿಗೆ ದನಿಯಾದರು. ಶಾಂತ ಚಿತ್ತದಿಂದ ಅವರ ಮಾತು ಕೇಳಿದರು. ಕೂಡಲೇ ಪರಿಹಾರ ಒದಗಿಸುವ ಭರವಸೆ ನೀಡಿದರು.

ಇದಕ್ಕೂ ಮುನ್ನ ಧಾಮಣೆ ರಸ್ತೆ ಹಾಗೂ ನೇಕಾರ ಕಾಲೋನಿಗೆ ಭೇಟಿ ನೀಡಿದ ಸಚಿವರು ಮನೆಗಳಿಗೆ ನೀರು ನುಗ್ಗಿದ ಪ್ರದೇಶವನ್ನು ವೀಕ್ಷಿಸಿದರು. ಬಳ್ಳಾರಿ ನಾಲಾದಿಂದ ಹಾನಿಗೊಳಗಾದ ನೇಕಾರ ಕುಟುಂಬದವರನ್ನು ಭೇಟಿಯಾಗಿ ಅಗತ್ಯ ಸೌಲಭ್ಯ ನೀಡುವುದಾಗಿ ತಿಳಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅ ಧಿಕಾರಿಗಳಿಂದ ಸಚಿವೆ ಜಿಲ್ಲೆಯ ಪ್ರವಾಹ ಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಇನ್ನೂ ಹೆಚ್ಚಿನ ಸೌಲಭ್ಯ ಬೇಕಾದರೆ ಕೊಡಲು ಸಿದ್ಧ.

ಸೇನೆಯ ಹೆಲಿಕಾಪ್ಟರ್‌ ಸೇರಿಯಾವುದೇ ಸಹಾಯ ಬೇಕಾದರೂ ನೀಡಲು ಕೇಂದ್ರ ಸರಕಾರ ಸಿದ್ಧವಿದೆ ಎಂದರು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಆಗಿರುವ ಹಾನಿಯ ತಾಲೂಕುವಾರು ಸಮಗ್ರ ಮಾಹಿತಿ ನೀಡಿದರು. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಸವಿಸ್ತಾರವಾಗಿ ಪ್ರವಾಹ ಕುರಿತು ಮಾಹಿತಿ ನೀಡಿದರು. ಸಂತ್ರಸ್ತರು ಕನ್ನಡದಲ್ಲಿ ಹೇಳುತ್ತಿರುವುದನ್ನು ಹಿಂದಿಯಲ್ಲಿ ಅನುವಾದಿಸಿ ತಿಳಿಸುತ್ತಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.