ಮುಗಿದ ಮತಯುದ್ಧ ; ಫಲಿತಾಂಶದತ್ತ ಎಲ್ಲರ ಚಿತ್ತ

ಮುಂದುವರಿಯಲಿದೆಯೇ ಹೊರಟ್ಟಿ ಅಧಿಪತ್ಯ?; ಗುರಿ ತಲುಪುವಲ್ಲಿ ಯಶ ಕಾಣುವರೇ ಗುರಿಕಾರ?

Team Udayavani, Jun 14, 2022, 10:55 AM IST

4

ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತಯುದ್ಧ ಮುಗಿದಿದೆ. ಇನ್ನೇನಿದ್ದರೂ ವಿಜಯ ಸಾಧಿಸಿದವರು ಯಾರು ಎಂಬ ಫಲಿತಾಂಶವಷ್ಟೇ ಬಾಕಿ ಇದೆ. ಪ್ರಮುಖ ಮೂರು ಪಕ್ಷಗಳು, ಪಕ್ಷೇತರರು ಸೇರಿದಂತೆ ಏಳು ಅಭ್ಯರ್ಥಿಗಳು ಕಣದಲ್ಲಿದ್ದರೂ ಬಿಜೆಪಿ-ಕಾಂಗ್ರೆಸ್‌ ನಡುವಿನ ಸಮರ ಪ್ರಮುಖವಾಗಿದ್ದು, ಇದರಲ್ಲಿ ಗೆಲುವು ಯಾರದು ಎಂಬ ನಿರೀಕ್ಷೆ ಹೆಚ್ಚಿದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದ ಈ ಬಾರಿಯ ಚುನಾವಣೆ ಕೆಲವೊಂದು ವಿಶೇಷಗಳಿಗೆ ವೇದಿಕೆಯಾಗಲಿದ್ದು, ದಾಖಲೆ ಬರೆಯುವ ಚುನಾವಣೆಯಾಗಿದೆ. ಇಡೀ ಚುನಾವಣೆ ಪ್ರಕ್ರಿಯೆಯ ವಿದ್ಯಮಾನ ಗಮನಿಸಿದರೆ ಪಕ್ಷಗಳ ಕುರಿತ ಟೀಕೆಗಳಿಗಿಂತ ವ್ಯಕ್ತಿ ಕೇಂದ್ರಿಕೃತವಾಗಿ ಟೀಕೆ-ಆರೋಪಗಳು ಕೇಳಿ ಬಂದವು. ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಪಕ್ಷೇತರ ಅಭ್ಯರ್ಥಿಗಳು, ಪಕ್ಷಗಳ ನಾಯಕರು ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರನ್ನೇ ಕೇಂದ್ರವಾಗಿಸಿಕೊಂಡು ಆರೋಪಗಳ ಸುರಿಮಳೆಗೆ, ಇದಕ್ಕೆ ಪ್ರತಿಯಾಗಿ ಹೊರಟ್ಟಿ ಹಾಗೂ ಬಿಜೆಪಿ ನಾಯಕರು ಉತ್ತರ ನೀಡಿಕೆಗೆ ಚುನಾವಣೆ ವೇದಿಕೆಯಾಗಿತ್ತು.

ಯಾರಿಗೆ ವಿಜಯಮಾಲೆ: 1980ರಿಂದ 2022ರವರೆಗೆ ಅಂದರೆ ಸುಮಾರು 42 ವರ್ಷಗಳ ಕಾಲ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಸವರಾಜ ಹೊರಟ್ಟಿ ಅವರು ಅಧಿಪತ್ಯ ಸಾಧಿಸಿದ್ದಾರೆ. ಮುಂದೆಯೂ ಅವರ ಅಧಿಪತ್ಯ ಮುಂದುವರಿಯುವುದೇ ಎಂಬ ಕುತೂಹಲ, ನಿರೀಕ್ಷೆ ಅನೇಕರದ್ದಾಗಿದೆ. ಮತ್ತೂಂದು ಕಡೆ ಕ್ಷೇತ್ರದಲ್ಲಿ ಹೊರಟ್ಟಿ ಅವರ ಅಧಿಪತ್ಯ ಕೊನೆಗಾಣಿಸಬೇಕೆಂಬ ನಿಟ್ಟಿನಲ್ಲಿ ಕಾಂಗ್ರೆಸ್‌ ತನ್ನದೇ ಯತ್ನದಲ್ಲಿ ತೊಡಗಿದ್ದು, ಜೆಡಿಎಸ್‌ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಕ್ಕಿಲ್ಲ ಎಂಬ ಕೆಲ ಅಭಿಪ್ರಾಯಗಳನ್ನು ಹುಸಿಯಾಗಿಸಿ ಜೆಡಿಎಸ್‌ ಹೊರಟ್ಟಿ ಅವರೊಂದಿಗೆ ಹಲವಾರು ವರ್ಷಗಳ ಒಡನಾಟ ಹೊಂದಿದ ವ್ಯಕ್ತಿಯನ್ನೇ ಅಭ್ಯರ್ಥಿಯನ್ನಾಗಿಸಿತು. ಪಕ್ಷೇತರ ಅಭ್ಯರ್ಥಿಯೊಬ್ಬರಿಗೆ ಆಮ್‌ಆದ್ಮಿ ಪಕ್ಷ ಬೆಂಬಲ ಸೂಚಿಸಿತ್ತು.

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಲೇಬೇಕೆಂಬ ಉದ್ದೇಶದೊಂದಿಗೆ ಏಳು ಬಾರಿ ಸತತ ಗೆಲುವು ಕಂಡ ಬಸವರಾಜ ಹೊರಟ್ಟಿ ಅವರನ್ನು ಜೆಡಿಎಸ್‌ನಿಂದ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿರುವ ಬಿಜೆಪಿ, ಕ್ಷೇತ್ರದಲ್ಲಿ ಮೊದಲ ಗೆಲುವಿನ ನಗೆ ಬೀರುವ ಕಾತುರದಲ್ಲಿದೆ. 1980ರಲ್ಲಿ ಪಕ್ಷೇತರ ಸದಸ್ಯರಾಗಿ ಪರಿಷತ್ತು ಪ್ರವೇಶಿಸಿದರೂ 1986ರಿಂದ 2016ರವರೆಗೆ ಜನತಾ ಪರಿವಾರದಿಂದ ಅದರಲ್ಲೂ ಸತತ ಮೂರು ಬಾರಿ ಜೆಡಿಎಸ್‌ನಿಂದ ವಿಧಾನ ಪರಿಷತ್ತು ಪ್ರವೇಶಿಸಿದ್ದ ಬಸವರಾಜ ಹೊರಟ್ಟಿಯವರು, ರಾಜಕೀಯ ಜೀವನದಲ್ಲೇ ಮೊದಲ ಬಾರಿಗೆ ಜನತಾ ಪರಿವಾರದ ನಂಟು ಕಳಚಿಕೊಂಡು ಬಿಜೆಪಿ ಸೇರಿದ್ದು, ಪಕ್ಷ ಬದಲಿಸಿದರೂ ಗೆಲುವು ಸಾಧ್ಯ ಎಂಬುದನ್ನು ಸಾಬೀತುಪಡಿಸುವ ಅನಿವಾರ್ಯತೆಯಲ್ಲಿದ್ದಾರೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಉದ್ದೇಶದೊಂದಿಗೆ ಸಾಕಷ್ಟು ಮೊದಲೇ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಕಾಂಗ್ರೆಸ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಅವರ ಬಗ್ಗೆ ಸಾಕಷ್ಟು ಪ್ರಚಾರ, ಶಿಕ್ಷಕರನ್ನು ಸೆಳೆಯಲು ತನ್ನದೇ ಕಸರತ್ತು ಮಾಡಿದೆ. ಶಿಕ್ಷಕರು ಎಷ್ಟರ ಮಟ್ಟಿಗೆ ಸ್ಪಂದಿಸುತ್ತಾರೆ ಎಂಬುದು ಕಾದು ನೋಡಬೇಕಾಗಿದೆ. ಬಸವರಾಜ ಹೊರಟ್ಟಿ ಅವರ ಆಪ್ತ ಸಹಾಯಕರಾಗಿ, ಶಿಕ್ಷಕರಾಗಿ ಹೊರಟ್ಟಿಯವರ ಒಡನಾಡಿಗಳಲ್ಲಿ ಒಬ್ಬರಾಗಿದ್ದ ಶ್ರೀಶೈಲ ಗಡದಿನ್ನಿ ಅವರನ್ನು ಜೆಡಿಎಸ್‌ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದು, ಶಿಕ್ಷಕರು ಬದಲಾವಣೆ ಬಯಸಿದ್ದಾರೆ ಎಂಬುದು ಜೆಡಿಎಸ್‌ ಅಭ್ಯರ್ಥಿ ಪ್ರಚಾರದ ಪ್ರಮುಖ ವಿಷಯವಾಗಿಸಿಕೊಂಡು ಯತ್ನಿಸಿದ್ದು, ಅದೃಷ್ಟ ಏನಾಗಲಿದೆ ಎಂಬುದನ್ನು ಈಗಾಗಲೇ ಶಿಕ್ಷಕರು ನಿರ್ಧರಿಸಿಯಾಗಿದೆ. ಉಳಿದ ಪಕ್ಷೇತರರಲ್ಲಿ ಆಮ್‌ಆದ್ಮಿ ಪಕ್ಷ ಬೆಂಬಲಿತ ವೆಂಕನಗೌಡ ಅವರು ಒಂದಿಷ್ಟು ಪ್ರಚಾರ ನಡೆಸಿದ್ದು ಬಿಟ್ಟರೆ ಬೇರೆ ಯಾವ ಪಕ್ಷೇತರ ಅಭ್ಯರ್ಥಿಗಳು ಅಷ್ಟೊಂದು ಕಾಣಿಸಿಕೊಳ್ಳಲಿಲ್ಲ.

ಅತ್ಯುತ್ತಮ ಮತದಾನ: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿ ಅತ್ಯುತ್ತಮ ಮತದಾನ ಪ್ರಮಾಣ ದಾಖಲಾಗಿದೆ. ಬೆಳಗ್ಗೆಯಿಂದಲೇ ಮತಕೇಂದ್ರಗಳಲ್ಲಿ ಶಿಕ್ಷಕರು ಅತ್ಯುತ್ಸಾಹದಿಂದಲೇ ಮತದಾನದಲ್ಲಿ ಪಾಲ್ಗೊಂಡಿದ್ದರು. ಧಾರವಾಡ ಜಿಲ್ಲೆಯಲ್ಲಿ ಸುಮಾರು ಶೇ.85.69 ಮತದಾನವಾಗಿದ್ದು, ಶಿಕ್ಷಕರ ಉತ್ಸಾಹದ ಪ್ರತೀಕವಾಗಿದೆ. 2016ರಲ್ಲಿ ನಡೆದ ಚುನಾವಣೆಯಲ್ಲಿ ಶೇ.66.72 ಮತದಾನವಾಗಿತ್ತು. ಹಿಂದಿನ ಚುನಾವಣೆಗೆ ಹೋಲಿಸಿದರೆ ಈ ಬಾರಿ ಶೇ.18.97ರಿಂದ ಶೇ.20 ಹೆಚ್ಚಿನ ಮತದಾನ ಆಗಿರುವುದು ಒಳ್ಳೆಯ ಬೆಳವಣಿಗೆ ಎನ್ನಬಹುದಾಗಿದೆ.

ಮತದಾನ ಸಂದರ್ಭದಲ್ಲಿ ಆಯಾ ಅಭ್ಯರ್ಥಿಗಳು ಮತ ಚೀಟಿಗಳನ್ನು ನೀಡಲು ಮತಕೇಂದ್ರಗಳ ಬಳಿ ಟೆಂಟ್‌ ಗಳನ್ನು ಹಾಕಿಕೊಂಡಿದ್ದರು. ಕೆಲವೊಂದು ಟೆಂಟ್‌ಗಳಲ್ಲಿ ಆಯಾ ಪಕ್ಷಗಳ ಕಾರ್ಯಕರ್ತರ ಸಂಖ್ಯೆಯೇ ಅಧಿಕವಾಗಿ ಕಂಡು, ಶಿಕ್ಷಕರ ಸಂಖ್ಯೆ ಕಡಿಮೆ ಇದ್ದದ್ದು ಕಂಡು ಬಂದಿತು. ಇನ್ನು ಕೆಲ ಟೆಂಟ್‌ಗಳಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚಳ ಜತೆಗೆ, ಪಕ್ಷದ ಕಾರ್ಯಕರ್ತರ ಪಡೆಯೂ ಹೆಚ್ಚಿನ ರೀತಿಯಲ್ಲಿತ್ತು. ಮತ್ತಷ್ಟು ಟೆಂಟ್‌ಗಳಲ್ಲಿ ಶಿಕ್ಷಕರ- ಕಾರ್ಯಕರ್ತರ ಸಂಖ್ಯೆಯ ಕೊರತೆ ಎದ್ದು ಕಾಣುತ್ತಿತ್ತು. ಹಲವು ಪಕ್ಷೇತರರ ಟೆಂಟ್‌ ಗಳೇ ಅನೇಕ ಕಡೆ ಕಾಣಿಸಲಿಲ್ಲ.

ಒಟ್ಟಿನಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣಾ ಸಮರ-ಮತಯುದ್ಧ ಮುಗಿದಿದೆ. ಅಭ್ಯರ್ಥಿಗಳ ರಾಜಕೀಯ ಭವಿಷ್ಯಕ್ಕೆ ಶಿಕ್ಷಕ ಮತದಾರರು ಮುದ್ರೆಯೊತ್ತಿಯಾಗಿದೆ. ವಿಜಯದ ಮಾಲೆ ಯಾರ ಕೊರಳಿಗೆ ಎಂಬ ಪ್ರಶ್ನೆಗೆ ಬುಧವಾರ ಉತ್ತರ ದೊರೆಯಲಿದೆ. ಗಿನ್ನಿಸ್‌ ದಾಖಲೆಯೋ, ದಾಖಲೆಯನ್ನು ಮುರಿಯುವ ದಾಖಲೆಯೋ ಎಂಬ ಕುತೂಹಲ ಇದ್ದೇ ಇದೆ.

„ಅಮರೇಗೌಡ ಗೋನವಾರ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.