Vijay Hazare: ಬಿಹಾರ ವಿರುದ್ಧವೂ ಕರ್ನಾಟಕದ ಜಯ ಹಾರ


Team Udayavani, Nov 29, 2023, 11:54 PM IST

vijay karna

ಅಹ್ಮದಾಬಾದ್‌: “ವಿಜಯ್‌ ಹಜಾರೆ ಟ್ರೋಫಿ’ ಏಕದಿನ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕರ್ನಾಟಕದ ಗೆಲುವಿನ ನಾಗಾಲೋಟ 4ನೇ ಪಂದ್ಯಕ್ಕೆ ವಿಸ್ತರಿಸಿದೆ. ಬುಧವಾರದ ಮುಖಾಮುಖೀಯಲ್ಲಿ ಮಾಯಾಂಕ್‌ ಅಗರ್ವಾಲ್‌ ಪಡೆ 7 ವಿಕೆಟ್‌ಗಳಿಂದ ಬಿಹಾರವನ್ನು ಪರಾಭವಗೊಳಿಸಿತು.

ಅಹ್ಮದಾಬಾದ್‌ನ “ನರೇಂದ್ರ ಮೋದಿ ಸ್ಟೇಡಿಯಂ”ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಿಹಾರ 7 ವಿಕೆಟಿಗೆ 217 ರನ್‌ ಗಳಿಸಿದರೆ, ಕರ್ನಾಟಕ 33.4 ಓವರ್‌ಗಳಲ್ಲೇ 3 ವಿಕೆಟಿಗೆ 218 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು.

ಚೇಸಿಂಗ್‌ ವೇಳೆ ದೇವದತ್ತ ಪಡಿಕ್ಕಲ್‌ ತಮ್ಮ ಪ್ರಚಂಡ ಫಾರ್ಮ್ ಮುಂದುವರಿಸಿ ಅಜೇಯ 93 ರನ್‌ ಬಾರಿಸಿದರು. ಸ್ಫೋಟಕ ಆಟಕ್ಕೆ ಮುಂದಾದ ಅವರು 9 ಬೌಂಡರಿ ಹಾಗೂ 5 ಸಿಕ್ಸರ್‌ ಸಿಡಿಸಿ ಬಿಹಾರದ ಬೌಲರ್‌ಗಳಿಗೆ ಬೆವರಿಳಿಸಿದರು. ಎದುರಿ ಸಿದ್ದು 57 ಎಸೆತ ಮಾತ್ರ. ನಿಕಿನ್‌ ಜೋಸ್‌ 69 ರನ್‌ ಕೊಡುಗೆ ಸಲ್ಲಿಸಿದರು. 73 ಎಸೆತಗಳ ಈ ಆಕರ್ಷಕ ಆಟದಲ್ಲಿ 7 ಫೋರ್‌, 2 ಸಿಕ್ಸರ್‌ ಒಳಗೊಂಡಿತ್ತು.

ಆರಂಭಕಾರ ಮಾಯಾಂಕ್‌ ಅಗರ್ವಾಲ್‌ 28 ರನ್‌ ಮಾಡಿದರೆ, ಇವರ ಜತೆಗಾರ ಆರ್‌. ಸಮರ್ಥ್ ಮಿಂಚಲು ವಿಫ‌ಲರಾದರು (4). ಪಡಿಕ್ಕಲ್‌ ಜತೆ ಅಜೇಯರಾಗಿ ಉಳಿದ ಆಟಗಾರ ಮನೀಷ್‌ ಪಾಂಡೆ (17).

ಸಕಿಬುಲ್‌ ಗನಿ ಶತಕ
ಬಿಹಾರ ಸರದಿಯಲ್ಲಿ ಮಧ್ಯಮ ಕ್ರಮಾಂಕದ ಆಟಗಾರ ಸಕಿಬುಲ್‌ ಗನಿ ಅವರದು ಏಕಾಂಗಿ ಹೋರಾಟ ವಾಗಿತ್ತು. ಒಂದೆಡೆ ವಿಕೆಟ್‌ ಉರುಳು ತ್ತಿದ್ದರೂ ಕರ್ನಾಟಕದ ಬೌಲಿಂಗ್‌ ದಾಳಿಯನ್ನು ದಿಟ್ಟ ರೀತಿಯಲ್ಲಿ ನಿಭಾಯಿಸಿದ ಸಕಿಬುಲ್‌ ಭರ್ತಿ 100 ಎಸೆತ ಎದುರಿಸಿ ಅಜೇಯ 113 ರನ್‌ ಮಾಡಿದರು. ಸಿಡಿಸಿದ್ದು 9 ಬೌಂಡರಿ ಹಾಗೂ 5 ಸಿಕ್ಸರ್‌. ಇವರನ್ನು ಹೊರತುಪಡಿಸಿದರೆ ಅಜೇಯ 33 ರನ್‌ ಮಾಡಿದ ನಾಯಕ ಅಶುತೋಷ್‌ ಅಮನ್‌ ಅವರದೇ ಹೆಚ್ಚಿನ ಗಳಿಕೆ.

ಕರ್ನಾಟಕದ ಬೌಲಿಂಗ್‌ ಸರದಿ ಯಲ್ಲಿ 8 ಮಂದಿ ದಾಳಿಗೆ ಇಳಿದರು. 8ನೇ ವಿಕೆಟಿಗೆ ಜತೆಗೂಡಿದ ಗನಿ-ಅಮನ್‌ ಕ್ರೀಸ್‌ ಆಕ್ರಮಿಸಿಕೊಂಡದ್ದೇ ಇದಕ್ಕೆ ಕಾರಣ. ಕೊನೆಗೂ ಈ ಜೋಡಿಯನ್ನು ಬೇರ್ಪಡಿಸಲು ಕರ್ನಾಟಕಕ್ಕೆ ಸಾಧ್ಯ ವಾಗಲಿಲ್ಲ. ಇವರಿಬ್ಬರು ಸೇರಿ ಕೊಂಡು 117 ರನ್‌ ಜತೆಯಾಟ ನಿಭಾ ಯಿಸಿದರು. 27ಕ್ಕೆ 3 ವಿಕೆಟ್‌ ಉರುಳಿಸಿದ ಜಗದೀಶ್‌ ಸುಚಿತ್‌ ಹೆಚ್ಚಿನ ಯಶಸ್ಸು ಸಾಧಿಸಿದರು.

ಶುಕ್ರವಾರ ಕರ್ನಾಟಕ ತಂಡ ಚಂಡೀಗಢವನ್ನು ಎದುರಿಸಲಿದೆ.

ಸಂಕ್ಷಿಪ್ತ ಸ್ಕೋರ್‌
ಬಿಹಾರ-7 ವಿಕೆಟಿಗೆ 217 (ಸಕಿಬುಲ್‌ ಗನಿ ಔಟಾಗದೆ 113, ಅಶುತೋಷ್‌ ಅಮನ್‌ ಔಟಾಗದೆ 33, ಜೆ. ಸುಚಿತ್‌ 27ಕ್ಕೆ 3). ಕರ್ನಾಟಕ-33.4 ಓವರ್‌ಗಳಲ್ಲಿ 3 ವಿಕೆಟಿಗೆ 218 (ದೇವದತ್ತ ಪಡಿಕ್ಕಲ್‌ ಔಟಾಗದೆ 93, ನಿಕಿನ್‌ ಜೋಸ್‌ 69, ಮಾಯಾಂಕ್‌ ಅಗರ್ವಾಲ್‌ 28, ವೀರ್‌ಪ್ರತಾಪ್‌ 31ಕ್ಕೆ 1).

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.