ವಿಜಯಪುರ-ಬಾಗಲಕೋಟೆ; ಪರಿಷತ್‌ ಟಿಕೆಟ್‌ ಯಾರಿಗೆ?


Team Udayavani, Nov 10, 2021, 4:04 PM IST

25election

ವಿಜಯಪುರ: ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ದ್ವಿಸದಸ್ಯರ ಸ್ಥಳೀಯ ಸಂಸ್ಥೆಯ ಮೇಲ್ಮನೆ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದೆ.

ಮೇಲ್ಮನೆ ವಿಪಕ್ಷ ನಾಯಕರಾಗಿರುವ ಎಸ್‌.ಆರ್‌.ಪಾಟೀಲ ಹಾಗೂ ಸುನೀಲಗೌಡ ಪಾಟೀಲ ಅವಧಿ 2022, ಜ.5ರಂದು ಮುಕ್ತಾಯವಾಗಲಿದೆ. ಕಾಂಗ್ರೆಸ್‌ ತೆಕ್ಕೆಯಲ್ಲಿರುವ ತೆರವಾಗುವ ಈ ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣೆ ದಿನಾಂಕ ಪ್ರಕಟಿಸಿದೆ.

ಸ್ಥಳೀಯ ಸಂಸ್ಥೆಗಳ ಈ ಕ್ಷೇತ್ರದಲ್ಲಿ ಎರಡು ಸ್ಥಾನಗಳಿರುವ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಹೀಗಾಗಿ ಕಳೆದ ಕೆಲ ತಿಂಗಳಿಂದ ಈ ಬಗ್ಗೆ ಸಣ್ಣದಾಗಿ ಇದ್ದ ರಾಜಕೀಯ ಚಟುವಟಿಕೆಗಳು ಇದೀಗ ಚುರುಕುಗೊಳ್ಳಲು ವೇದಿಕೆ ಸಿಕ್ಕಂತಾಗಿದೆ.

ಕಳೆದ 3-4 ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಯವರೇ ಎರಡೂ ಸ್ಥಾನಗಳಿಗೆ ಆಯ್ಕೆ ಆಗುತ್ತಿದ್ದರು. ಹೀಗಾಗಿ 2016ರಲ್ಲಿ ನಡೆದ ಚುನಾವಣೆಯಲ್ಲಿ ನಮ್ಮ ಜಿಲ್ಲೆಗೂ ಆದ್ಯತೆ ನೀಡಬೇಕೆಂದು ಸ್ಥಳೀಯ ಆಸ್ಮಿತೆಯನ್ನು ಮುಂದಿಟ್ಟುಕೊಂಡು ವಿಜಯಪುರ ಜಿಲ್ಲೆಯಲ್ಲಿ ಸ್ವಾಭಿಮಾನ ಧ್ವನಿ ಎದ್ದಿತ್ತು. ಆದರೂ ಕಾಂಗ್ರೆಸ್‌-ಬಿಜೆಪಿ ಎರಡೂ ಪಕ್ಷಗಳು ಎರಡು ಕ್ಷೇತ್ರ ಎರಡು ತಲಾ ಒಬ್ಬೊಬ್ಬರನ್ನೇ ಕಣಕ್ಕಿಳಿಸಿದ್ದು, ಎರಡೂ ಪಕ್ಷಗಳು ಬಾಗಲಕೋಟೆ ಜಿಲ್ಲೆಯರಿಗೆ ಟಿಕೆಟ್‌ ನೀಡಿದ್ದವು.

ಆಗ ಹಾಲಿ ಸದಸ್ಯರಾಗಿದ್ದ ಕಾಂಗ್ರೆಸ್‌ ಪಕ್ಷ ಬಾಗಲಕೋಟೆ ಜಿಲ್ಲೆಯ ಎಸ್‌.ಆರ್‌.ಪಾಟೀಲ ಅವರಿಗೆ ಟಿಕೆಟ್‌ ನೀಡಿದ್ದರೆ, ಬಿಜೆಪಿ ಜಿ.ಎ.ನ್ಯಾಮಗೌಡ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿತ್ತು. ಇದರಿಂದ ಕೆರಳಿದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಬಸನಗೌಡ ಪಾಟೀಲ ಯತ್ನಾಳ ಪಕ್ಷೇತರರಾಗಿ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ವಿಜಯ ಸಾಧಿಸಿದ್ದರು.

ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರದಲ್ಲಿ ಯಾರ ಮೇಲಾದ್ರೂ ಆಪಾದನೆಯಿದ್ರೆ ತಕ್ಷಣ ಕ್ರಮ : ಈಶ್ವರಪ್ಪ 

ಆಗ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದ ಯತ್ನಾಳ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೇರಿದ್ದರು. ಅಲ್ಲದೇ ವಿಜಯಪುರ ವಿಧಾನಸಭೆ ಕ್ಷೇತ್ರಕ್ಕೆ ಟಿಕೆಟ್‌ ಖಚಿತಪಡಿಸಿಕೊಂಡು ಮೇಲ್ಮನೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯತ್ನಾಳ ಅವರಿಂದ ತೆರವಾಗಿದ್ದ ಸ್ಥಾನಕ್ಕೆ 2018ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ ಅವರ ಸಹೋದರ ಸುನೀಲಗೌಡ ಪಾಟೀಲ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು.

ಆಗ ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದ ಕಾರಣ ಜೆಡಿಎಸ್‌ ಜತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿತ್ತು. 8111 ಮತಗಳಲ್ಲಿ 4819 ಮತ ಪಡೆದಿದ್ದ ಮೈತ್ರಿ ಪಕ್ಷಗಳ ಕಾಂಗ್ರೆಸ್‌ ಅಭ್ಯರ್ಥಿ ಸುನೀಲಗೌಡ ಪಾಟೀಲ 2040 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ವಿಜಯಪುರ ಪಾಲಿಕೆ ಸದಸ್ಯರಾಗಿದ್ದ ಬಿಜೆಪಿ ಉಮೇದುವಾರ ಗೂಳಪ್ಪ ಶೆಟಗಾರ 2779 ಪಡೆದು ಹೀನಾಯ ಸೋಲುಂಡಿದ್ದರು.

ಕಾಂಗ್ರೆಸ್‌ನಿಂದ ಯಾರು?

ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಚುನಾವಣೆ ಟಿಕೆಟ್‌ ಆಕಾಂಕ್ಷಿಗಳಿಂದ ಅ.30ರೊಳಗೆ 1 ಲಕ್ಷ ರೂ. ಶುಲ್ಕವನ್ನು ಡಿಡಿ ಸಹಿತ ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅರ್ಜಿ ಆಹ್ವಾನಿಸಿತ್ತು. ಹಾಲಿ ಸದಸ್ಯರಾದ ಎಸ್‌.ಆರ್‌.ಪಾಟೀಲ, ಸುನೀಲಗೌಡ ಪಾಟೀಲ ಮಾತ್ರವಲ್ಲ ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ ಗಣಿಹಾರ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಬಿಜೆಪಿಯಲ್ಲೂ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದೆ. ಕಳೆದ ತಿಂಗಳು ಬಿಜೆಪಿ ಸೂಚನೆ ಮೇರೆಗೆ ಮೇಲ್ಮನೆ ಸದಸ್ಯ ಪ್ರದೀಪ ಶೆಟ್ಟರ್‌ ಹಾಗೂ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರು ಜಿಲ್ಲೆಗೆ ಆಗಮಿಸಿ ಮಂಡಲ ಅಧ್ಯಕ್ಷರ ಸಭೆ, ಆಕಾಂಕ್ಷಿಗಳ ಮಾಹಿತಿ ಸಂಗ್ರಹಿಸಿದ್ದಾರೆ.

ಇದಲ್ಲದೇ ನ. 21ರಂದು ಜನಸ್ವರಾಜ್‌ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ ನ. 12ರಂದು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ಪ್ರಧಾನ ರಾಜ್ಯ ಕಾರ್ಯದರ್ಶಿ ಎನ್‌.ರವಿಕುಮಾರ, ರಾಜ್ಯ ಕಾರ್ಯದರ್ಶಿ, ನವೀನಕುಮಾರ ಅವರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಆಗ ಮೇಲ್ಮನೆ ಚುನಾವಣೆ ಟಿಕೆಟ್‌ ಆಕಾಂಕ್ಷಿಗಳು ಹಾಗೂ ಪಕ್ಷದ ಮುಖಂಡರೊಂದಿಗೆ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ವಿಜಯಪುರ ಜಿಲ್ಲೆ ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್‌.ಪಾಟೀಲ ಕೂಚಬಾಳ, ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಗೂಳಪ್ಪ ಶೆಟಗಾರ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಕಾಶ ತಪಶೆಟ್ಟಿ, ಪಿ.ಎಚ್‌.ಪೂಜಾರ, ಎಸ್‌.ಪಿ.ಪಾಟೀಲ, ಅರವಿಂದ ಮಂಗಳೂರು, ಜಗದೀಶ ಗುಡಗುಂಟಿ, ಮಲ್ಲಿಕಾರ್ಜುನ ಚರಂತಿಮಠ ಇವರು ತಮ್ಮನ್ನು ಪರಿಗಣಿಸುವಂತೆ ಕೋರಿಕೆ ಸಲ್ಲಿಸಿದ್ದಾರೆ.

ನಾನು ಸೇರಿದಂತೆ ಅವಳಿ ಜಿಲ್ಲೆಯಲ್ಲಿ ಸುಮಾರು 10-12 ಜನರು ಟಿಕೆಟ್‌ ಆಕಾಂಕ್ಷಿಗಳಿದ್ದೇವೆ. ಪಕ್ಷದ ವರಿಷ್ಠರು ಚುನಾವಣೆ ವೀಕ್ಷಕರನ್ನು ನೇಮಿಸಿದ್ದು, ಮಾಹಿತಿಯನ್ನೂ ಸಂಗ್ರಹಿಸಿದ್ದಾರೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ತಲೆ ಬಾಗಬೇಕು. -ಆರ್‌.ಎಸ್‌. ಪಾಟೀಲ, ಕೂಚಬಾಳ, ಜಿಲ್ಲಾಧ್ಯಕ್ಷರು, ಬಿಜೆಪಿ, ವಿಜಯಪುರ

ಅಲ್ಪಸಂಖ್ಯಾತರು ಕಾಂಗ್ರೆಸ್‌ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದ್ದು, ಉತ್ತರ ಕರ್ನಾಟಕದಲ್ಲಿ ಎಲ್ಲಿಯೂ ಮೇಲ್ಮನೆಗೆ ಅವಕಾಶ ನೀಡಿಲ್ಲ. ಹೀಗಾಗಿ ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಲು ನನಗೆ ಟಿಕೆಟ್‌ ನೀಡಿ ಎಂದು ಮನವಿ ಮಾಡಿಕೊಂಡಿದ್ದೇವೆ. -ಎಸ್‌.ಎಂ.ಪಾಟೀಲ, ಗಣಿಹಾರ, ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ, ವಿಜಯಪುರ

-ಜಿ.ಎಸ್‌. ಕಮತರ

 

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.