Vijayapura: ಎಸ್ಸೆಸ್ಸೆಲ್ಸಿ 60 ಟಾಪರ್ಸ್‌ಗೆ ರಾಜಧಾನಿ ಪ್ರವಾಸ ಭಾಗ್ಯ

ಮಾರ್ಕೆಟಿಂಗ್‌ ಹಾಗೂ ಮೆಟ್ರೋ ರೈಲು ಪ್ರಯಾಣಕ್ಕೂ ಅವಕಾಶ ಕಲ್ಪಿಸಲಾಗಿದೆ.

Team Udayavani, May 23, 2023, 4:46 PM IST

Vijayapura: ಎಸ್ಸೆಸ್ಸೆಲ್ಸಿ 60 ಟಾಪರ್ಸ್‌ಗೆ ರಾಜಧಾನಿ ಪ್ರವಾಸ ಭಾಗ್ಯ

ವಿಜಯಪುರ: ಈಗಾಗಲೇ ಮಿಷನ್‌ ವಿದ್ಯಾಪುರ ಕಾರ್ಯಕ್ರಮದ ಮೂಲಕ ಜಿಪಂ ಸಿಇಒ ರಾಹುಲ್‌ ಶಿಂಧೆ ಜಿಲ್ಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಜಿಲ್ಲೆಯ ಎಸ್ಸೆಸ್ಸೆಲ್ಸಿ 60 ಟಾಪರ್‌ ಗಳಿಗೆ ರಾಜಧಾನಿ ಪ್ರವಾಸ ಆಯೋಜಿಸಿ ಪ್ರೇರಣಾದಾಯಕವಾದ ಮತ್ತೊಂದು ವಿನೂತನ ಹೆಜ್ಜೆ ಇರಿಸಲು ಮುಂದಾಗಿದ್ದಾರೆ.

ರಾಜ್ಯದಲ್ಲೇ ಮೊದಲ ಬಾರಿಗೆ ವಿಜಯಪುರ ಜಿಲ್ಲೆಯ ಶೈಕ್ಷಣಿಕ ವ್ಯವಸ್ಥೆಯಲ್ಲಿನ ಸುಧಾರಣೆಗಾಗಿ ಇಂಥದ್ದೊಂದು ವಿನೂತನ
ಪ್ರಯೋಗಕ್ಕೆ ಸಿದ್ಧತೆ ಅಂತಿಮಗೊಂಡಿದೆ. ಎಸ್ಸೆಸ್ಸೆಲ್ಸಿ ಪ್ರತಿಭಾವಂತ ಮಕ್ಕಳಿಗೆ ಉನ್ನತ ಗುರಿ ಸೃಷ್ಟಿಸಿಕೊಳ್ಳಲು ಹಾಗೂ ಇದೀಗ 9 ಹಾಗೂ 10ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಲ್ಲಿ ಇಂಥ ಅವಕಾಶ ಪಡೆಯುವಲ್ಲಿ ಸ್ಫೂರ್ತಿ  ಹಾಗೂ ಪ್ರೇರಣೆ ನೀಡುವಲ್ಲಿ ಈ ಪ್ರಯೋಗ ಮತ್ತೂಂದು ರೀತಿಯಲ್ಲಿ ನೆರವಾಗಲಿದೆ ಎಂಬ ನಿರೀಕ್ಷೆ ಇದೆ.

ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲೇ ಶಿಕ್ಷಣ ಇಲಾಖೆ ತಾಲೂಕುವಾರು ಟಾಪರ್‌ ಆಯ್ಕೆ ಮಾಡಿದ 30
ವಿದ್ಯಾರ್ಥಿಗಳನ್ನು, ವಿವಿಧ ವಸತಿ ನಿಲಯಗಳಿಂದ 30 ಮಕ್ಕಳು ಸೇರಿ 60 ಟಾಪರ್‌ಗಳನ್ನು ಪ್ರವಾಸಕ್ಕೆ ಕಳಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳು ಮಾತ್ರ ಈ ವಿಶೇಷ ಪ್ರವಾಸಕ್ಕೆ ಅರ್ಹರು. ಇದರಲ್ಲಿ ಸಮಾಜ ಕಲ್ಯಾಣ ಇಲಾಖೆ 16, ಹಿಂದುಳಿದ ವರ್ಗದ 8, ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಯಲದ 6 ಮಕ್ಕಳನ್ನು ಪ್ರವಾಸಕ್ಕೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಅರ್ಧದಷ್ಟು ಬಾಲಕ-ಬಾಲಕಿಯರು ಇರಲಿದ್ದಾರೆ.

ಉದ್ದೇಶ: ಗ್ರಾಮೀಣ ಪರಿಸರದಿಂದ ಬಂದಿರುವ ಬಡ ಮಕ್ಕಳಿಗೆ ಉನ್ನತ ಗುರಿಯೊಂದಿಗೆ ಪ್ರೇರಣಾದಾಯಕ ಕನಸು
ರೂಪಿಸಿಕೊಳ್ಳಲು ಈ ವಿಶೇಷ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಪ್ರವಾಸದಲ್ಲಿ ಕನ್ನಡದಲ್ಲೇ ಓದಿ, ಉನ್ನತ ಸ್ಥಾನಕ್ಕೇರಿದ ಸಾಧಕರ ಭೇಟಿ ಮಾಡಿಸಲಾಗುತ್ತಿದೆ. ಬೆಂಗಳೂರಿನಂತ ಮಹಾನಗರದಲ್ಲಿ ನಾವೂ ಉನ್ನತ ಶಿಕ್ಷಣ ಪಡೆದು, ಉನ್ನತ ಸ್ಥಾನಕ್ಕೆ ಏರಲು ಸಾಧ್ಯವಿದೆ. ಭವಿಷ್ಯದ ಜೀವನ ರೂಪಿಸಿಕೊಳ್ಳಲು ಇರುವ ಅವಕಾಶಗಳ ಬಗ್ಗೆ ಪ್ರತಿಭಾವಂತ ಮಕ್ಕಳಲ್ಲಿ ಪ್ರೇರಣೆ ನೀಡುವುದು ಪ್ರವಾಸದ ಉದ್ಧೇಶ.

ಎಲ್ಲೆಲ್ಲಿ ಭೇಟಿ: ವಿಧಾನಸೌಧ, ವಿಕಾಸಸೌಧ, ಬಹು ಮಹಡಿ ಕಟ್ಟಡ, ಉಚ್ಛ ನ್ಯಾಯಾಲಯ, ನೆಹರು ತಾರಾಲಯ, ಇಂಡಿಯನ್‌ ಇನ್‌ಸ್ಟಿಟ್ಯೂಟ್‌ಆಫ್‌ ಸೈನ್ಸ್‌, ವಿಕ್ಟೋರಿಯಾ ಆಸ್ಪತ್ರೆ-ವೈದ್ಯಕೀಯ ಕಾಲೇಜು, ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯ, ಬಹುರಾಷ್ಟ್ರೀಯ ಬೃಹತ್‌ ಕಂಪನಿಗಳಿಗೆ ಭೇಟಿ ನೀಡಲಿದ್ದಾರೆ. ಈ ಅವ ಧಿಯಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳ ಭೇಟಿಗೆ ಜಿಪಂ ಸಿಇಒ ಅದಾಗಲೇ ಪತ್ರ ಬರೆದು, ಸಮಯ ನೀಡುವಂತೆ ಕೋರಿದ್ದಾರೆ. ಕನ್ನಡದಲ್ಲೇ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಿದ ಸಾಧಕರೊಂದಿಗೆ ಮಕ್ಕಳು ಮುಖಾಮುಖೀಯಾಗಲು ವೇದಿಕೆ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಮಾರ್ಕೆಟಿಂಗ್‌
ಹಾಗೂ ಮೆಟ್ರೋ ರೈಲು ಪ್ರಯಾಣಕ್ಕೂ ಅವಕಾಶ ಕಲ್ಪಿಸಲಾಗಿದೆ.

3 ಲಕ್ಷ ರೂ. ವೆಚ್ಚ: ಟಾಪರ್‌ಗಳ ಪ್ರವಾಸಕ್ಕೆ ಸುಮಾರು 3 ಲಕ್ಷ ರೂ. ವೆಚ್ಚ ತಗುಲುವ ಅಂದಾಜಿದ್ದು, ಸಮುದಾಯದ ಹೊಣೆಗಾರಿಕೆ ನಿಧಿಯಿಂದ ಇದನ್ನು ಭರಿಸಲಾಗುತ್ತಿದೆ. ಪ್ರವಾಸಕ್ಕೆ ಆಯ್ಕೆಯಾದ ಮಕ್ಕಳಿಗೆ ಒಂದು ಟಿ-ಶರ್ಟ್‌, ಪ್ರವಾಸದ ಪಟ್ಟಿ, ಪೆನ್‌, ಪ್ಯಾಡ್‌ ಸೇರಿದಂತೆ ಸಣ್ಣ ಕಿಟ್‌ ಕೊಡಲಾಗುತ್ತದೆ. ಬೆಂಗಳೂರಿನ ಅತ್ಯುತ್ತಮ ಸೌಲಭ್ಯ ಇರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಪ್ರವಾಸಿ ಮಕ್ಕಳ ವಸತಿಗೆ ವ್ಯವಸ್ಥೆ ಮಾಡಲಾಗಿದೆ. ಟಾಪರ್‌ಗಳ ವಿಶೇಷ ಶೈಕ್ಷಣಿಕ ಪ್ರವಾಸಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ 2 ಬಸ್‌ ಕಳಿಸಲು ಸಿದ್ಧತೆ ನಡೆಸಿದ್ದಾರೆ.

ಯಾವಾಗ ಪ್ರವಾಸ: ಮೇ 24ರಂದು ಸಂಜೆ ವಿಜಯಪುರ ನಗರದಿಂದ ಪ್ರವಾಸ ಆರಂಭಗೊಂಡು 25 ಹಾಗೂ 26ರವರೆಗೆ
ಬೆಂಗಳೂರಿನಲ್ಲಿ ಉದ್ಧೇಶಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 27ರಂದು ಬೆಳಗ್ಗೆ ವಿಜಯಪುರ ನಗರಕ್ಕೆ ಮರಳಲಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಬೆಂಗಳೂರಿನ ಪರಿಸ್ಥಿತಿಯಲ್ಲಿ ಬದಲಾವಣೆ  ಆಗದಿದ್ದಲ್ಲಿ ಪ್ರವಾಸದ ದಿನಾಂಕ ಬದಲಾವಣೆ ಆಗುವ ಸಾಧ್ಯತೆ ಇದೆ.

ಅಧಿಕಾರಿಗಳ ತಂಡ: ಜಿಪಂ ಅಧಿಕಾರಿ ಎ.ಬಿ.ಅಲ್ಲಾಪುರ, ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಮಂಜುನಾಥ ಗುಳೇದಗುಡ್ಡ,
ಮಾರ್ಗದರ್ಶನಕ್ಕೆ ಸರ್ಕಾರಿ ಪ್ರವಾಸಿ ಮಾರ್ಗದರ್ಶಿ ಉಮೇಶ ರಾಠೊಡ, ದೈಹಿಕ ಶಿಕ್ಷಕಿಯರು ಸೇರಿ ವಿಶೇಷ ತಂಡ ರಚಿಸಲಾಗಿದೆ.

ಜಿಲ್ಲೆಯ ಶೈಕ್ಷಣಿಕ ಮಟ್ಟದಲ್ಲಿ ಏರಿಕೆಯ ಉದ್ಧೇಶ, ಗ್ರಾಮೀಣ-ಕನ್ನಡ ಮಾಧ್ಯಮದ ಪ್ರತಿಭಾವಂತ ಮಕ್ಕಳು ಉನ್ನತ ಗುರಿ ರೂಪಿಸಿಕೊಂಡು ಸಾಧನೆಯ ಹೆಜ್ಜೆ ಇರಿಸಲು ಈ ಪ್ರಯೋಗ ಯಶಸ್ವಿ ಆಗಲಿದೆ ಎಂಬ ನಿರೀಕ್ಷೆ ಇದೆ. ಇದೀಗ 9-10ನೇ ತರಗತಿಯಲ್ಲಿರುವ ಮಕ್ಕಳಿಗೆ ಪ್ರೇರಣೆ ನೀಡುವಂತೆ ಮಾಡುವುದು ವಿಶೇಷ ಶೈಕ್ಷಣಿಕ ಪ್ರವಾಸದ ಉದ್ದೇಶ.
ರಾಹುಲ್‌ ಶಿಂಧೆ,
ಯೋಜನೆ ರೂವಾರಿ, ಸಿಇಒ-ಜಿಪಂ ವಿಜಯಪುರ

*ವಿಧಾನಸೌಧ, ವಿಕಾಸಸೌಧ, ಹೈಕೋರ್ಟ್‌ಗೆ ಭೇಟಿ
*ನೆಹರು ತಾರಾಲಯ, ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯ ವೀಕ್ಷಣೆ
*ಕನ್ನಡದಲ್ಲೇ ಓದಿ ಉನ್ನತ ಹುದ್ದೆಗೇರಿದ
ಗಣ್ಯರ ಮುಖಾಮುಖಿ
*ಗ್ರಾಮೀಣ ಮಕ್ಕಳಿಗೆ ಉನ್ನತ ಗುರಿಯ
ಪ್ರೇರಣೆಗೆ ವಿಶೇಷ ಪ್ರವಾಸ
*ಸಿಎಸ್‌ಆರ್‌ ನಿ ಧಿಯಲ್ಲಿ 3 ಲಕ್ಷ ರೂ.
ವೆಚ್ಚದ ಅಂದಾಜು

*ಜಿ.ಎಸ್‌.ಕಮತರ

ಟಾಪ್ ನ್ಯೂಸ್

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

Road Mishap; ಬೈಕ್ ಅಪಘಾತ: ಯುವಕ ಸಾವು

Road Mishap; ಬೈಕ್ ಅಪಘಾತ: ಯುವಕ ಸಾವು

India ವಿಶ್ವಕಪ್ ಗೆಲ್ಲಲಿ ಎಂದು ಕಾಡಸಿದ್ದೇಶ್ವರರಿಗೆ ಹೂ ಮಾಲೆ ಅರ್ಪಿಸಿದ ಅಭಿಮಾನಿ

India ವಿಶ್ವಕಪ್ ಗೆಲ್ಲಲಿ ಎಂದು ಕಾಡಸಿದ್ದೇಶ್ವರರಿಗೆ ಹೂ ಮಾಲೆ ಅರ್ಪಿಸಿದ ಅಭಿಮಾನಿ

Lok Sabha Elections:ನನ್ನ ಪರವಾಗಿ ಯಾರ ಹೆಸರನ್ನೂ ಶಿಫಾರಸು ಮಾಡೊಲ್ಲ: ಶ್ರೀನಿವಾಸ ಪ್ರಸಾದ್

Lok Sabha Elections:ನನ್ನ ಪರವಾಗಿ ಯಾರ ಹೆಸರನ್ನೂ ಶಿಫಾರಸು ಮಾಡೊಲ್ಲ: ಶ್ರೀನಿವಾಸ ಪ್ರಸಾದ್

Gangavathi ಎಚ್ ಆರ್ ಜಿ ನಗರದ ಗುಡ್ಡದಲ್ಲಿ ಶಿಲಾಮನೆಗಳು ಪತ್ತೆ: ಜಿಪಂ ಸಿಇಓ ಭೇಟಿ

Gangavathi ಎಚ್ ಆರ್ ಜಿ ನಗರದ ಗುಡ್ಡದಲ್ಲಿ ಶಿಲಾಮನೆಗಳು ಪತ್ತೆ: ಜಿಪಂ ಸಿಇಓ ಭೇಟಿ

Gundlupete ಕೊಳೆತ ಸ್ಥಿತಿಯಲ್ಲಿ ಗಂಡು ಕಾಡಾನೆ ಮೃತದೇಹ ಪತ್ತೆ

Gundlupete ಕೊಳೆತ ಸ್ಥಿತಿಯಲ್ಲಿ ಗಂಡು ಕಾಡಾನೆ ಮೃತದೇಹ ಪತ್ತೆ

Election ಹೊಸ್ತಿಲಲ್ಲಿ ಮಾತ್ರ ಬಿಜೆಪಿಗರಿಗೆ ಹಿಂದೂ ಧರ್ಮ ನೆನಪಾಗುತ್ತೆ: ಸಚಿವ ತಂಗಡಗಿ

Election ಹೊಸ್ತಿಲಲ್ಲಿ ಮಾತ್ರ ಬಿಜೆಪಿಗರಿಗೆ ಹಿಂದೂ ಧರ್ಮ ನೆನಪಾಗುತ್ತೆ: ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

santhosh

Vijayapura; ಪ್ರತಿ ಚುನಾವಣೆಯಲ್ಲಿ ಬಿಜೆಪಿ ರಾಜಕೀಯ ಗಿಮಿಕ್: ಸಚಿವ ಸಂತೋಷ ಲಾಡ್

E- commerce, ಆನ್ ಲೈನ್ ಉದ್ಯಮದ ಕಾರ್ಮಿಕರ ಹಿತ ರಕ್ಷಣೆಗೆ ಕಾನೂನು: ಸಚಿವ ಸಂತೋಷ ಲಾಡ್

E- commerce, ಆನ್ ಲೈನ್ ಉದ್ಯಮದ ಕಾರ್ಮಿಕರ ಹಿತ ರಕ್ಷಣೆಗೆ ಕಾನೂನು: ಸಚಿವ ಸಂತೋಷ ಲಾಡ್

Vijayapura; ಮದುವೆಗೆ ನಿರಾಕರಣೆ, ಯುವತಿ ಹಂತಕನಿಗೆ ಜೀವಾವಧಿ ಶಿಕ್ಷೆ

Vijayapura; ಮದುವೆಗೆ ನಿರಾಕರಣೆ, ಯುವತಿ ಹಂತಕನಿಗೆ ಜೀವಾವಧಿ ಶಿಕ್ಷೆ

Top leaders are silent means that something big is about to happen: Yatnal

BJP ವರಿಷ್ಠರು ಮೌನವಾಗಿದ್ದಾರೆಂದರೆ ಏನೋ ದೊಡ್ಡದೇ ನಡೆಯಲಿದೆ: ಯತ್ನಾಳ

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

rain 1

Rain: ಕೇರಳದ ವಿವಿಧೆಡೆ ಧಾರಾಕಾರ ಮಳೆ: ನದಿಗಳಲ್ಲಿ ಏರುತ್ತಿರುವ ಪ್ರವಾಹ

GOVT OF PUNJAB

Punjab: ಪಂಜಾಬ್‌ಗೆ 2.8 ಲಕ್ಷ ಕೋಟಿ ಸಾಲ- ಅತ್ಯಧಿಕ ಸಾಲ ಹೊಂದಿರುವ ದೇಶದ ಮೊದಲ ರಾಜ್ಯ

LAW

ನ್ಯಾಯಾಂಗ ಸೇವೆಯಲ್ಲಿ ಶೇ.10 ಮೀಸಲು- EWS ಗೆ ಬಿಹಾರ ಸರ್ಕಾರ ಕೊಡುಗೆ

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

SHREE DEVI

Bolllywood: ಡಯಟ್‌ನಿಂದ ನಟಿ ಶ್ರೀದೇವಿ ಸಾವು- ಬೋನಿ ಕಪೂರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.