ನಂದಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ ಪ್ರಕರಣ: ಗಾಯಾಳು ಪಶ್ಚಿಮ ಬಂಗಾಳದ ಕಾರ್ಮಿಕ ಮೃತ್ಯು
Team Udayavani, Mar 5, 2023, 12:48 PM IST
ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ್ದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರಲ್ಲಿ ಪಶ್ಚಿಮ ಬಂಗಾಳ ಮೂಲದ ಓರ್ವ ಕಾರ್ಮಿಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಮೃತ ಕಾರ್ಮಿಕನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಸಂದೀಪ ಮಂಡಲ ಎಂದು ಗುರುತಿಸಲಾಗಿದೆ.
ಬಾಯ್ಲರ್ ಸ್ಫೋಟ ಘಟನೆಯಲ್ಲಿ ಗಾಯಗೊಂಡಿದ್ದ ಐವರು ಕಾರ್ಮಿಕರನ್ನು ವಿಜಯಪುರ ನಗರದ ಬಿ.ಎಲ್.ಡಿ.ಇ. ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೇ ಸಂದೀಪ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಇತರೆ ಕಾರ್ಮಿಕರಾದ ಪರಸನಜಿತ ಮಂಡಲ, ರಾಜಕುಮಾರ ರಾಮ್ ಇವರ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಈ ಇಬ್ಬರು ಕಾರ್ಮಿಕರು ಮಾತ್ರವಲ್ಲದೇ ಸಾಮಾನ್ಯ ಗಾಯಗಳಾಗಿರುವ ಇಮ್ರಾನ್ ಅನ್ಸಾರಿ ಹಾಗೂ ಅಲೋಕಕುಮಾರ ರಾಮ್ ಇವರಿಗೂ ಚಿಕಿತ್ಸೆ ಮುಂದುವರೆದಿದೆ.
ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಪುಣೆ ಮೂಲದ ಎಸ್.ಎಸ್.ಎಂಜಿನಿಯರ್ಸ್ ಗುತ್ತಿಗೆ ಸಂಸ್ಥೆಯಿಂದ ಹೊಸದಾಗಿ ನಿರ್ಮಿಸಿರುವ 220 ಟನ್ ಸಾಮರ್ಥ್ಯದ ಬಾಯ್ಲರ್ ಶನಿವಾರ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತಿತ್ತು. ಈ ವೇಳೆ ಬಾಯ್ಲರ್ ಸ್ಫೋಟಗೊಂಡು ಐವರು ಕಾರ್ಮಿಕರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ