BJP: ವಿಜಯೇಂದ್ರ, ಅಶೋಕ್ ದಿಲ್ಲಿ ಭೇಟಿ ಮುಂದಕ್ಕೆ
Team Udayavani, Nov 30, 2023, 9:41 PM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ ಅವರ ದಿಲ್ಲಿ ಭೇಟಿ ಮುಂದೂಡಿಕೆಯಾಗಿದೆ.
ಡಿಸೆಂಬರ್ 1 ಅಥವಾ 2ರಂದು ಇಬ್ಬರು ದಿಲ್ಲಿಗೆ ತೆರಳಿ ವರಿಷ್ಠರ ಭೇಟಿ ಮಾಡುವ ಸಾಧ್ಯತೆ ಬಗ್ಗೆ ಈ ಹಿಂದೆ ಚರ್ಚೆಯಾಗಿತ್ತು. ಆದರೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹಾಗೂ ಆ ಬಳಿಕ ಎದುರಾಗುವ ವಿದ್ಯಮಾನಗಳ ಬಗ್ಗೆ ವರಿಷ್ಠರು ತಲೆಕೆಡಿಸಿಕೊಂಡಿರುವುದರಿಂದ ಸಮಯಾವಕಾಶ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಭೇಟಿ ಮುಂದೂಡಿಕೆಯಾಗಿದೆ.
ದಿಲ್ಲಿ ಭೇಟಿ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆ ಹಾಗೂ ಹೊಸ ಕೋರ್ ಕಮಿಟಿ ರಚನೆ ಬಗ್ಗೆ ವರಿಷ್ಠರ ಒಪ್ಪಿಗೆ ಪಡೆಯಲು ಚಿಂತನೆ ನಡೆಸಲಾಗಿತ್ತು. ಜತೆಗೆ ವಿಧಾನಸಭೆ ಉಪನಾಯಕ ಹಾಗೂ ಮುಖ್ಯಸಚೇತಕ, ವಿಧಾನ ಪರಿಷತ್ ವಿಪಕ್ಷ ನಾಯಕ, ಉಪನಾಯಕ ಹಾಗೂ ಮುಖ್ಯ ಸಚೇತಕರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ವರಿಷ್ಠರ ಒಪ್ಪಿಗೆ ಪಡೆಯಲು ನಿರ್ಧರಿಸಲಾಗಿತ್ತು. ಹೀಗಾಗಿ ಬೆಳಗಾವಿ ಅಧಿವೇಶನದ ಬಳಿಕ ದಿಲ್ಲಿ ಪ್ರವಾಸ ಸಾಧ್ಯತೆ ಇದೆ.
ಇಬ್ಬರಲ್ಲಿ ಯಾರಿಗೆ ಅದೃಷ್ಟ?: ಇದೆಲ್ಲದರ ಮಧ್ಯೆ ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನ ಯಾರಿಗೆ ಎಂಬ ಪ್ರಶ್ನೆ ಉದ್ಭವವಾಗಿದೆ. ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಘುನಾಥ್ ಮಲ್ಕಾಪುರೆ ಪೈಕಿ ಯಾರಾದರೊಬ್ಬರಿಗೆ ಅದೃಷ್ಟ ಒಲಿಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ