ಹೊಸಪೇಟೆ: ಅಂತ್ಯಕ್ರಿಯೆಗೆ ಪರದಾಡಿದ ಗ್ರಾಮಸ್ಥರು; ಮಳೆಯಿಂದ ಹಳ್ಳ ದಾಟಲು ಪರದಾಟ
Team Udayavani, Oct 22, 2022, 10:16 AM IST
ಹೊಸಪೇಟೆ: ನಿರಂತರ ಮಳೆಯ ಪರಿಣಾಮ ಹಳ್ಳ-ಕೊಳ್ಳಗಳಲ್ಲಿ ನೀರು ಸಂಗ್ರಹವಾಗಿ ಸ್ಮಶಾನಕ್ಕೆ ಶವ ಹೊತ್ತೊಯ್ಯಲು ಪರದಾಡಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕುಂಚೂರು ಕೆರೆ ತಾಂಡದಲ್ಲಿ ಶನಿವಾರ ನಡೆದಿದೆ.
ಮಳೆಯಿಂದ ಹಳ್ಳ, ಕೆರೆಗಳಲ್ಲಿ ಹೆಚ್ಚು ನೀರು ಸಂಗ್ರಹವಾಗಿ ಅಂತ್ಯಸಂಸ್ಕಾರಕ್ಕೆ ಅಡ್ಡಿಯುಂಟಾಗಿದೆ. ಮೃತಪಟ್ಟ ತಾಂಡಾದ ನಿವಾಸಿ ಶಾಂತಾಬಾಯಿ ಎಂಬ ಮಹಿಳೆಯ ಶವವನ್ನು ಹೊತ್ತು ಹಳ್ಳವನ್ನು ದಾಟಿ ಸ್ಮಶಾನಕ್ಕೆ ತೆರಳಲು ಗ್ರಾಮಸ್ಥರು ಹೆಣಗಾಡಿದರು. ಗ್ರಾಮದಲ್ಲಿ ಹೆಣ ಹೂಳಲು ಪ್ರತ್ಯೇಕ ಜಾಗ ಇಲ್ಲದ್ದಕ್ಕೆ ಈ ದುಸ್ಥಿತಿ ನಿರ್ಮಾಣವಾಗಿದೆ.
ಕುಂಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಂದಾಜು 2 ಸಾವಿರ ಜನಸಂಖ್ಯೆ ಹೊಂದಿರುವ ತಾಂಡದಲ್ಲಿ ಜನ ಸತ್ತರೆ ಹೂಳಲು ಸೂಕ್ತ ಸ್ಥಳವಿಲ್ಲ. ಪ್ರತ್ಯೇಕ ಸ್ಮಶಾನ ಜಾಗ ಕಲ್ಪಿಸುವಂತೆ ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಮನವಿ ಮಾಡಿದರು.
ಗ್ರಾಮದಲ್ಲಿ ಸರ್ಕಾರಕ್ಕೆ ಸೇರಿದ ಜಾಗವನ್ನು ಹೆಣ ಹೂಳಲು ಅನುಕೂಲ ಮಾಡಿಕೊಡಬೇಕು ಎಂದು ಲಂಬಾಣಿ ಸಮುದಾಯ ಮುಖಂಡ ಟೀಕ್ಯ ನಾಯ್ಕ ಸೇರಿ ಹಲವರು ಒತ್ತಾಯ ಮಾಡಿದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಹರಪನಹಳ್ಳಿ ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಅವರು ಸಶ್ಮಾನಕ್ಕೆ ಕೂಡಲೇ ಜಾಗ ನೀಡಬೇಕು ಎಂದು ತಲಾಟಿಗೆ ಸೂಚನೆ ನೀಡಿದರು. ಇದರಿಂದಾಗಿ ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ