ವಿನಯ್‌ ಜನ್ಮ ದಿನಾಚರಣೆ: “ಅಣ್ಣಾ ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಕಾರ್ಯಕರ್ತರ ಬೆಂಬಲ


Team Udayavani, Nov 8, 2020, 1:41 PM IST

ವಿನಯ್‌ ಜನ್ಮ ದಿನಾಚರಣೆ: “ಅಣ್ಣಾ ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಕಾರ್ಯಕರ್ತರ ಬೆಂಬಲ

ಧಾರವಾಡ: ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜನ್ಮದಿನವನ್ನು ನಗರದಲ್ಲಿ ಅವರ ಬೆಂಬಲಿಗರು, ಕಾಂಗ್ರೆಸ್‌ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಚರಿಸಿದರು.

ಎಐಸಿಸಿ ಸದಸ್ಯ ದೀಪಕ ಚಿಂಚೋರೆ ನೇತೃತ್ವದಲ್ಲಿ ಖಾಸಗಿ ಹೊಟೇಲ್‌ನಲ್ಲಿ ಕುಲಕರ್ಣಿ ಅವರ ಜನ್ಮದಿನ ಆಚರಿಸಿ ಸಿಬಿಐ ಕ್ರಮ
ಖಂಡಿಸಲಾಯಿತು. ಈ ವೇಳೆ ಮಾತನಾಡಿದ ದೀಪಕ್‌ ಚಿಂಚೋರೆ, ವಿನಯ್‌ ಕುಲಕರ್ಣಿ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ ವ್ಯಕ್ತಿ. ಒಂದು ಕಾಲದಲ್ಲಿ ಯೋಗೀಶಗೌಡ ಅವರನ್ನು ರಾಜಕೀಯವಾಗಿ ಬೆಳೆಸಿದ್ದು ಕೂಡ ಅವರೇ. ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳಿಗೆ ಸಮಾನ ಸೀಟುಗಳು ಆಯ್ಕೆಯಾದಾಗ ಯೋಗೀಶಗೌಡ ಗೌಡರ ಅವರನ್ನು ಧಾರವಾಡದ
ತಾಪಂ ಅಧ್ಯಕ್ಷರನ್ನಾಗಿ ಮಾಡಿದ್ದು ವಿನಯ್‌ ಕುಲಕರ್ಣಿಯೇ ಆಗಿದ್ದರು. ಆದರೆ ಇದೀಗ ಅವರನ್ನೇ ಸಿಬಿಐ ಈ ಪ್ರಕರಣದಲ್ಲಿ ಎಳೆದು ತಂದಿರುವುದು ಎಷ್ಟು ಸರಿ?ಎಂದು ಪ್ರಶ್ನಿಸಿದರು.

ರಕ್ತದಾನ-ಅನ್ನ ಸಂತರ್ಪಣೆ: ಇದಲ್ಲದೇ ಬಸವರಾಜ ಜಾಧವ, ಆನಂದ ಸಿಂಗನಾಥ್‌ ಸೇರಿದಂತೆ ಕುಲಕರ್ಣಿ ಅವರ ಬೆಂಬಲಿಗರು, ಕಾರ್ಯಕರ್ತರು ಕೇಕ್‌ ಕತ್ತರಿಸುವ ಮೂಲಕ ರಕ್ತದಾನ, ಅನ್ನ ಸಂತರ್ಪಣೆ ಮಾಡುವ ಮೂಲಕ ಜನ್ಮದಿನ ಆಚರಿಸಿದರು. ಆದಷ್ಟು ಬೇಗ ಈ ಪ್ರಕರಣದಿಂದ ದೋಷಮುಕ್ತರಾಗಿ ಬರುವಂತೆ ಪ್ರಾರ್ಥಿಸಿದರು.

ಇದನ್ನೂ ಓದಿ:ಏನಿದು ಹಸಿರು ಪಟಾಕಿ ?: ಇವುಗಳನ್ನು ಗುರುತಿಸಲು ಕ್ಯೂಆರ್ ಕೋಡ್ ಬೇಕು ಎಂದು ತಿಳಿದಿದೆಯೇ ?

ಸ್ವಾಭಿಮಾನಿ ಸಮಾಗಮ: ಇನ್ನೂ ಶನಿವಾರ ಸಂಜೆ ಮುರುಘಾಮಠದಲ್ಲಿ ಸರ್ವ ಸಮಾಜಗಳ ಸ್ವಾಭಿಮಾನಿ ವೇದಿಕೆ ವತಿಯಿಂದ ವಿನಯ್‌ ಕುಲಕರ್ಣಿ ಅವರ ಜನ್ಮದಿನ ಆಚರಿಸಲಾಯಿತು. ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಜನ್ಮದಿನದ ಆಚರಣೆಯಲ್ಲಿ ನೂರಾರು ಜನರು ಪಾಲ್ಗೊಂಡು ವಿನಯ್‌ ಅವರಿಗೆ ಬೆಂಬಲ ಸೂಚಿಸಿದರು. “ವಿನಯ್‌ ಅಣ್ಣಾ ನಿಮ್ಮೊಂದಿಗೆ
ನಾವಿದ್ದೇವೆ’ ಎಂಬ ಘೋಷಣೆ ಕೂಗುವ ಮೂಲಕ ವಿನಯ್‌ ಅಭಿಮಾನಿಗಳು ಬೆಂಬಲ ಸೂಚಿಸಿದರು.

ಶುಭ ಕೋರಲು ಹುಬ್ಬಳ್ಳಿಗೆ ಹೋದರು: ಇನ್ನು ವಿನಯ್‌ ಅವರನ್ನು ಬೆಳಗಾವಿ ಹಿಂಡಲಗಾ ಜೈಲಿನಿಂದ ಸಿಬಿಐ ಹುಬ್ಬಳ್ಳಿಗೆ ಕರೆದುಕೊಂಡು ಬಂದಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅವರ ಬೆಂಬಲಿಗರು ಧಾರವಾಡದಿಂದ ನೇರವಾಗಿ ಹುಬ್ಬಳ್ಳಿಗೆ ಹೋಗಿ ಕೇಕ್‌ನೊಂದಿಗೆ ಹೆಜ್ಜೆ ಹಾಕಿದರು. ಕೇಕಿನ ಮೇಲೆ ವಿನಯ್‌ ಚಿತ್ರ ಬಿಡಿಸಿಕೊಂಡು ಅವರಿಂದಲೇ ಕೇಕ್‌ ಕತ್ತರಿಸಿ ಜನ್ಮದಿನ ಆಚರಿಸುವುದಾಗಿ ನೂರಾರು ಯುವಕರು ಹುಬ್ಬಳ್ಳಿಗೆ ಹೋದರು. ಆದರೆ ವಿನಯ್‌ ಕೇಕ್‌ ಕತ್ತರಿಸಲು ನಿರಾಕರಿಸಿದ್ದರಿಂದ
ಅವರ ಹೆಸರಿನ ಘೋಷಣೆ ಕೂಗಿ ಜನ್ಮದಿನ ಆಚರಿಸಿದರು.

ಇನ್ನು ನಗರದಲ್ಲಿ ಅವರ ಜನ್ಮದಿನಕ್ಕೆ ಹಾಕಲಾಗಿದ್ದ ಬ್ಯಾನರ್‌ ಮತ್ತು ಬಂಟಿಂಗ್ಸ್‌ಗಳನ್ನು ಪಾಲಿಕೆ ತೆರುವುಗೊಳಿಸಿದ್ದರೂ ಶನಿವಾರ ಅಲ್ಲಲ್ಲಿ ಮತ್ತೆ ಮಾಜಿ ಸಚಿವ ವಿನಯ್‌ ಬೆಂಬಲಿಗರು ಅವರ ಪೋಸ್ಟರ್‌ಗಳನ್ನು ಕಟ್ಟಿ ಅವರ ಜನ್ಮದಿನಕ್ಕೆ ಶುಭ ಕೋರಿದ್ದು ಕಂಡು ಬಂತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.