ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು


Team Udayavani, Dec 1, 2021, 6:50 AM IST

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ಮುಂಬಯಿ: ನ್ಯೂಜಿ ಲ್ಯಾಂಡ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯವನ್ನು ಡ್ರಾ ಮಾಡಿಕೊಂಡಿರುವ ಭಾರತವೀಗ ಮುಂಬಯಿಯಲ್ಲಿ ನಡೆ ಯಲಿರುವ ದ್ವಿತೀಯ ಟೆಸ್ಟ್‌ಗೆ ಸಿದ್ದತೆ ಆರಂಭಿಸಿದೆ. ಆದರೆ ತಂಡದ ಆಡಳಿತ ಮಂಡಳಿ ಜಟಿಲವಾದ ಸಮಸ್ಯೆಗೆ ಸಿಲುಕಿದೆ. ವಿರಾಟ್‌ ಕೊಹ್ಲಿಗಾಗಿ ಯಾರನ್ನು ಬಿಡುವುದು ಎಂಬುದೇ ಇಲ್ಲಿನ ಪ್ರಶ್ನೆ!

ಹೌದು, ಟಿ20 ವಿಶ್ವಕಪ್‌ ಬಳಿಕ ವಿಶ್ರಾಂತಿಯಲ್ಲಿದ್ದ ವಿರಾಟ್‌ ಕೊಹ್ಲಿ ದ್ವಿತೀಯ ಟೆಸ್ಟ್‌ಗೆ ತಂಡ ಸೇರಿಕೊಂಡು ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಆದ್ದರಿಂದ ಕೊಹ್ಲಿಗಾಗಿ ಯಾರನ್ನು ತಂಡದಿಂದ ಕೈಬಿಡಬೇಕು ಎನ್ನುವುದು ತಲೆನೋವಾಗಿ ಪರಿಣಮಿಸಿದೆ.

ಅಯ್ಯರ್‌ ಸ್ಥಾನ ಗಟ್ಟಿ
ಮೊದಲ ಟೆಸ್ಟ್‌ನಲ್ಲಿ ಕೊಹ್ಲಿ ಸ್ಥಾನದಲ್ಲಿ ಆಡಲಿಳಿದ ಶ್ರೇಯಸ್‌ ಅಯ್ಯರ್‌ ತಮ್ಮ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡಿದ್ದರು. ಚೊಚ್ಚಲ ಟೆಸ್ಟ್‌ನಲ್ಲೇ ಶತಕ, ಅರ್ಧ ಶತಕ ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಪಾತ್ರರಾಗಿದ್ದರು. ಆದ್ದರಿಂದ ಅವರನ್ನು ತಂಡದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ. ಇನ್ನು ಉಪನಾಯಕ ರಹಾನೆ ಮತ್ತು ಚೇತೇಶ್ವರ್‌ ಪೂಜಾರ. ಇವರಿಬ್ಬರೂ ಸದ್ಯ ಬ್ಯಾಟಿಂಗ್‌ ಲಯದಲ್ಲಿಲ್ಲ. ಆದರೆ ಅನುಭವದ ಆಧಾರದಲ್ಲಿ ಉಳಿದುಕೊಳ್ಳಬಹುದು.

ಉಳಿದಂತೆ ಸ್ಪಿನ್‌ ವಿಭಾಗದಲ್ಲಿ ಅಶ್ವಿ‌ನ್‌, ಜಡೇಜ, ಅಕ್ಷರ್‌ ಉತ್ತಮ ಲಯದಲ್ಲಿರುವುದರಿಂದ ಮತ್ತು ಭಾರತದಲ್ಲಿ ಸ್ಪಿನ್‌ ಸ್ನೇಹಿ ಪಿಚ್‌ಗಳಿರುವ ಕಾರಣ ಮೂವರು ಸ್ಪಿನ್ನರ್‌ಗಳು ಕಣಕ್ಕಿಳಿಯುವುದ ಬಹುತೇಕ ಖಚಿತ.

ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಇಬ್ಬರು ವೇಗಿಗಳಾದ ಇಶಾಂತ್‌ ಶರ್ಮ, ಉಮೇಶ್‌ ಯಾದವ್‌ ಕೂಡ ಪರಿಣಾಮ ಬೀರಿಲ್ಲ. ಇವರಲ್ಲೊಬ್ಬರನ್ನು ಕೈಬಿಡಬಹುದಾದರೂ ಸ್ಟ್ರೈಕ್‌ ಬೌಲರ್‌ ಒಬ್ಬರ ಕೊರತೆ ಎದುರಾಗುತ್ತದೆ.

ಮಾಯಾಂಕ್‌ ಅಗರ್ವಾಲ್‌ ಸ್ಥಾನಕ್ಕೆ ಕುತ್ತು?
ಆರಂಭಿಕ ಆಟಗಾರ ಮಾಯಾಂಕ್‌ ಅಗರ್ವಾಲ್‌ ಅವರನ್ನು ಕೈ ಬಿಟ್ಟು ಕೊಹ್ಲಿಯನ್ನು ತಂಡಕ್ಕೆ ಸೇರಿಸಿಕೊಳ್ಳುವ ಮಾರ್ಗವೊಂದಿದೆ. ಆದರೆ ಇಲ್ಲೂ ಒಂದು ಸಮಸ್ಯೆ ಇದೆ. ಆಗ ಕತ್ತು ನೋವಿನಿಂದಾಗಿ ಬಳಲುತ್ತಿರುವ ಭಾರತದ ಪ್ರಧಾನ ಕೀಪರ್‌ ವೃದ್ಧಿಮಾನ್‌ ಸಾಹಾ ಅವರನ್ನು ಹೊರಗುಳಿಸಬೇಕಾಗುತ್ತದೆ. ಅವರ ಸ್ಥಾನಕ್ಕೆ ಬರುವ ಶ್ರೀಕರ್‌ ಭರತ್‌ ಅವರನ್ನು ಗಿಲ್‌ ಜತೆಗೆ ಆರಂಭಿಕನಾಗಿ ಇಳಿಸಬಹುದು. ಆಗ ವಿರಾಟ್‌ ಆಯ್ಕೆ ಸುಲಭ. ಆದರೆ ಇನ್ನೂ ಸ್ಥಿರವಾದ ಓಪನಿಂಗ್‌ ಕಾಣದ ಭಾರತ ಪದೇಪದೆ ಆರಂಭಿಕರನ್ನು ಬದಲಿಸುವುದು ಎಷ್ಟು ಸರಿ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ.

ಕೊನೆ ಗಳಿಗೆಯಲ್ಲಿ ಒಂದು ಅಸ್ತ್ರವಂತೂ ಇದೆ. ಪೂಜಾರ ಅಥವಾ ರಹಾನೆ ಅವರನ್ನು “ಅನ್‌ಫಿಟ್‌’ ಎಂದು ಘೋಷಿಸಿ ಹೊರಗಿರಿಸಿ ಕೊಹ್ಲಿಯನ್ನು ಸೇರಿಸಿಕೊಳ್ಳುವುದು!

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.