ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸಭೆ: 2024ರ ಜನವರಿಯಲ್ಲಿ ಪ್ರಾಣಪ್ರತಿಷ್ಠೆ


Team Udayavani, Apr 20, 2022, 5:55 AM IST

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸಭೆ: 2024ರ ಜನವರಿಯಲ್ಲಿ ಪ್ರಾಣಪ್ರತಿಷ್ಠೆ

ಉಡುಪಿ: ಅಯೋಧ್ಯೆಯಲ್ಲಿ ಮಂಗಳವಾರ ನಡೆದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಸಭೆಯಲ್ಲಿ 2023ರ ಡಿಸೆಂಬರ್‌ ಒಳಗೆ ಮಂದಿರ ಕಾಮಗಾರಿ ನಡೆಸಿ 2024ರ ಜನವರಿಯಲ್ಲಿ ಪ್ರಾಣಪ್ರತಿಷ್ಠೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಯಿತು ಎಂದು ಸಭೆಯಲ್ಲಿ ಪಾಲ್ಗೊಂಡ ಟ್ರಸ್ಟ್‌ ವಿಶ್ವಸ್ತರಾದ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದರು.

2023ರ ಡಿಸೆಂಬರ್‌ನಲ್ಲಿ ಪ್ರಾಣಪ್ರತಿಷ್ಠೆ ನಡೆಸುವುದೆಂದು ಹಿಂದೆ ನಿರ್ಧರಿಸಲಾಗಿತ್ತು. ಈಗ ಜನವರಿಯಲ್ಲಿ ಉತ್ತರಾಯಣ ಪರ್ವಕಾಲ ಬರುವುದರಿಂದ ಜನವರಿಯಲ್ಲಿ ಪ್ರತಿಷ್ಠಾ ವಿಧಿವಿಧಾನಗಳನ್ನು ನಡೆಸಲು ಸಭೆಯಲ್ಲಿ ಚರ್ಚೆ ನಡೆಯಿತು. ಇಲ್ಲಿ ಹಿಂದಿನಿಂದಲೂ ರಮಾನಂದ ಸಂಪ್ರದಾಯದಂತೆ ಪೂಜೆಗಳು ನಡೆಯುತ್ತಿದ್ದು ಈ ಸಂಪ್ರದಾಯದ ಮಠಾಧಿಪತಿಗಳ ನೇತೃತ್ವದಲ್ಲಿ ಪ್ರತಿಷ್ಠಾ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಯಿತು. ಸ್ಥಳೀಯ ಅರ್ಚಕರಿಗೆ ಸೂಕ್ತ ಪ್ರಶಿಕ್ಷಣ ನೀಡಲು ಸಭೆ ನಿರ್ಧರಿಸಿತು ಎಂದರು.

ಕಾಮಗಾರಿ ನಡೆಸುವಾಗ ಸಿಕ್ಕಿರುವ ಅವಶೇಷಗಳನ್ನು ಸಂಗ್ರಹಿಸಿ ವಸ್ತು ಸಂಗ್ರಹಾಲಯ ನಿರ್ಮಿಸಲು ನಿರ್ಧರಿಸಲಾಗಿದೆ. ಇವು ಭಾರತದ ಹಿಂದಿನ ಪ್ರಧಾನಮಂತ್ರಿಗಳ ಜೀವನಚರಿತ್ರೆ ಕುರಿತು ಮಾಡಿದ ವಸ್ತುಸಂಗ್ರಹಾಲಯದ ಮಾದರಿಯಲ್ಲಿ ಮಾಡುವ ಕುರಿತು ಪ್ರಧಾನಿಯವರ ಆಪ್ತ ಸಲಹೆಗಾರರು ವಿವರಿಸಿದರು.

ಯೋಜನಾ ವೆಚ್ಚ ಹೆಚ್ಚಳ
ಈ ಹಿಂದೆ 400 ಕೋ.ರೂ. ವೆಚ್ಚದಲ್ಲಿ ಮಂದಿರ ನಿರ್ಮಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಭೂಸಾಮರ್ಥ್ಯದ ಅಧ್ಯಯನದ ಪ್ರಕಾರ ಅನೇಕ ಬದಲಾವಣೆ ಮಾಡಿರುವುದರಿಂದ ಹೆಚ್ಚುವರಿ ಖರ್ಚು ಮಾಡಲು ಸಭೆ ಅನುಮೋದನೆ ನೀಡಿತು. 70 ಎಕ್ರೆ ಸ್ಥಳದಲ್ಲಿ ಮಂದಿರಕ್ಕೆ ಸಂಬಂಧಿಸಿದ ನಿರ್ಮಾಣಗಳು ಮಾತ್ರ ಇರಲಿವೆ. ಯಾತ್ರೀ ನಿವಾಸಗಳನ್ನು ಇಲ್ಲಿ ನಿರ್ಮಿಸುವುದಿಲ್ಲ ಎಂದು ಸಭೆ ಸ್ಪಷ್ಟಪಡಿಸಿತು.

ಕರಸೇವೆಗೆ ಅವಕಾಶ ಇಲ್ಲ
ಸ್ವಯಂಸೇವಕರು ಕರಸೇವೆ ಮಾಡಲು ಉತ್ಸುಕರಾಗಿದ್ದರೂ ಕ್ರೇನ್‌ ಮೂಲಕ ಕೆಲಸ ನಡೆಯುವುದರಿಂದ ಇದಕ್ಕೆ ಅವಕಾಶ ಇಲ್ಲ ಎಂದು ಸಭೆ ನಿರ್ಧರಿಸಿತು. ಅಖಂಡ ಭಜನೆ ಈಗಾಗಲೇ ಆರಂಭಗೊಂಡಿದ್ದು ಭಕ್ತರು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಯಾವುದೇ ಊರಿನ ಭಕ್ತರು ಇಚ್ಛಿಸಿದರೆ ಅವರು ವಿಹಿಂಪ ಪ್ರಮುಖರಾದ ಚಂಪತ್‌ರಾಯ್‌, ಗೋಪಾಲ್‌ ಅವರನ್ನು ಸಂಪರ್ಕಿಸಬಹುದು ಎಂದು ಶ್ರೀಗಳು ತಿಳಿಸಿದರು.

ದೇವಸ್ಥಾನಕ್ಕೆ ಬಲವಾದ ಬುನಾದಿ ಹಾಕಲಾಗಿದೆ. ಜೂನ್‌ನಲ್ಲಿ 16.5 ಅಡಿ ಎತ್ತರದ ಪ್ಲಿಂತ್‌ ನಿರ್ಮಿಸುವ ಕೆಲಸ ನಡೆಯಲಿದೆ. ಜೂನ್‌ನಲ್ಲಿ ಶಿಲಾಸ್ತಂಭಗಳನ್ನು ನಿಲ್ಲಿಸಲು ಆರಂಭವಾಗುತ್ತದೆ ಎಂದು ಗೋಪಾಲ್‌ ತಿಳಿಸಿದರು.

ಶ್ರೀಗಳು ಮೊದಲು ತಾತ್ಕಾಲಿಕ ಮಂದಿರ ದಲ್ಲಿರುವ ರಾಮಲಲ್ಲಾನ ದರ್ಶನ ಪಡೆದು ಚಾಮರಸೇವೆ, ಮಂಗಳಾರತಿ ಬೆಳಗಿ ದೇಶದ ಕ್ಷೇಮ, ಸುಭಿಕ್ಷೆ, ಶಾಂತಿಗೆ ಪ್ರಾರ್ಥಿಸಿದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.