“ವಿಶ್ವನಾಥ್‌ ಟೀಕೆಗೆ ನೊಂದು ರಾಜೀನಾಮೆ’


Team Udayavani, Oct 17, 2019, 3:08 AM IST

vishvanath-tik

ಮೈಸೂರು: “ಮಾಜಿ ಸಚಿವ ಎಚ್‌.ವಿಶ್ವನಾಥ್‌ ಅವರು ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ್ದರಿಂದ ಮನನೊಂದು ಸೆ.18ರಂದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ನನ್ನ ರಾಜೀನಾಮೆ ವಿಚಾರ ಸ್ಪೀಕರ್‌ ಮುಂದಿದೆ’ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ನನ್ನ ರಾಜಕೀಯ ಜೀವನದಲ್ಲಿ ಯಾರ ಬಗ್ಗೆಯೂ ವೈಯಕ್ತಿಕವಾಗಿ ಟೀಕೆ ಮಾಡಿರಲಿಲ್ಲ. ಮಾಡುವುದೂ ಇಲ್ಲ. ಆದರೆ, ವಿಶ್ವನಾಥ್‌ ಅವರು ನನ್ನ ಬಗ್ಗೆ ವೈಯಕ್ತಿಕವಾಗಿ ಮೂರು ಬಾರಿ ಟೀಕೆ ಮಾಡಿದ್ದರಿಂದ ಮನನೊಂದು, ಸದನದಲ್ಲೇ ಎಲ್ಲವನ್ನೂ ಹೇಳಿದ್ದೇನೆ.

ಈ ಎಲ್ಲ ಬೆಳವಣಿಗೆಗಳಿಂದ ಮಾನಸಿಕವಾಗಿ ನೊಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಸೆ.18ರಂದೇ ರಾಜೀನಾಮೆ ಸಲ್ಲಿಸಿದ್ದು, ಅಂದು ವಿಧಾನಸಭಾಧ್ಯಕ್ಷರು ಕೇಂದ್ರಸ್ಥಾನದಲ್ಲಿ ಇಲ್ಲದ ಕಾರಣ ವಿಧಾನಸಭೆಯ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿ ಬಂದಿದ್ದೆ. ನಂತರ ಸ್ಪೀಕರ್‌ ಎರಡು ಬಾರಿ ನನ್ನನ್ನು ಕರೆಸಿ ಮನವೊಲಿಸುವ ಪ್ರಯತ್ನ ಮಾಡಿದರಾದರೂ ನಾನು ರಾಜೀನಾಮೆ ವಾಪಸ್‌ ಪಡೆದಿಲ್ಲ’ ಎಂದರು.

“ರಾಜಕಾರಣದಲ್ಲಿ ಇರುವವರ ಸಾರ್ವಜನಿಕ ಹಾಗೂ ವೈಯಕ್ತಿಕ ಚರಿತ್ರೆ ಬಿಳಿ ಹಾಳೆಯಂತಿರಬೇಕು. ಹೌದು, ನಾನು ರಿಯಲ್‌ಎಸ್ಟೇಟ್‌ ವ್ಯವಹಾರ ಮಾಡಿದ್ದೇನೆ. ರಿಯಲ್‌ ಎಸ್ಟೇಟ್‌ ವ್ಯವಹಾರ ಕಾನೂನು ಬಾಹಿರ ಆಗಿದ್ದರೆ ರದ್ದು ಮಾಡಿಸಲಿ. ರಿಯಲ್‌ ಎಸ್ಟೇಟ್‌ ಹೊರತುಪಡಿಸಿ ಬೇರಾವುದೇ ಮೂಲದಿಂದ ನಾನು ಹಣ ಸಂಪಾದನೆ ಮಾಡಿಲ್ಲ. ವಿಶ್ವನಾಥ್‌ ಅವರು ನನ್ನ ವಿರುದ್ಧ ಬಳಸಿರುವ ಪದಗಳು ಮನಸ್ಸಿಗೆ ಘಾಸಿ ಉಂಟು ಮಾಡಿವೆ.

ಅಶ್ಲೀಲ ಆರೋಪ ಹೊತ್ತು ಸಾರ್ವಜನಿಕ ಜೀವನದಲ್ಲಿ ಇರಲು ನನಗೆ ಮನಸ್ಸಿಲ್ಲ. ಆದ್ದರಿಂದ ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದರು. “ವಿಶ್ವನಾಥ್‌ ಅವರನ್ನು ಜೆಡಿಎಸ್‌ಗೆ ಸೇರ್ಪಡೆ ಮಾಡಿಕೊಳ್ಳುವ ಸಂದರ್ಭದಲ್ಲಿ ವಿಶ್ವನಾಥ್‌ ಒಳ್ಳೆಯವರಲ್ಲ. ನಂಬಿಕೆಗೆ ಅರ್ಹರಲ್ಲ ಎಂದು ಜಿ.ಟಿ.ದೇವೇಗೌಡ ಹೇಳಿದ್ದರು. ಆದರೂ ಅವರ ಮನವೊಲಿಸಿ ಪಕ್ಷಕ್ಕೆ ಕರೆ ತಂದಿದ್ದು ದೊಡ್ಡ ತಪ್ಪಾಯಿತು ಅನಿಸಿದೆ’ ಎಂದು ಹೇಳಿದರು.

“ಡಿ.ದೇವರಾಜ ಅರಸು ಶಿಷ್ಯ ನಾನು ಎನ್ನುವ ವಿಶ್ವನಾಥ್‌, ದೇವರಾಜ ಅರಸರ ಪುತ್ರಿ ಹುಣಸೂರು ಕ್ಷೇತ್ರದಲ್ಲಿ ವಿಧಾನಸಭೆ, ಮೈಸೂರು ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದಾಗ ಯಾವ ರೀತಿ ನಡೆದುಕೊಂಡರು ಅನ್ನುವುದು ಜನರಿಗೆ ಗೊತ್ತಿದೆ. ಮಂತ್ರಿ ಮಾಡಿದ ಎಸ್‌.ಎಂ.ಕೃಷ್ಣರ ವಿರುದ್ಧವೇ ಪುಸ್ತಕ ಬರೆದ್ರೀ. ಸಿದ್ದರಾಮಯ್ಯ ವಿರುದ್ಧ ಸೋನಿಯಾಗಾಂಧಿಗೆ ದೂರು ನೀಡಿದ್ರೀ. ನಂಬಿದವರಿಗೆ ಮೋಸ ಮಾಡುವುದೇ ನಿಮ್ಮ ಕೆಲಸವಾಗಿದೆ’ ಎಂದು ಹರಿಹಾಯ್ದರು.

9 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಪ್ರಮಾಣ ಮಾಡಿ: ಅನರ್ಹ ಶಾಸಕ ಎಚ್‌.ವಿಶ್ವನಾಥ್‌ ನೀಡಿರುವ ಪಂಥಾಹ್ವಾನ ಸ್ವೀಕರಿಸಿದ್ದು, ಅವರು ಹೇಳಿರುವಂತೆಯೇ ಗುರುವಾರ ಬೆಳಗ್ಗೆ 9 ಗಂಟೆಗೆ ಚಾಮುಂಡಿ ಬೆಟ್ಟದಲ್ಲಿರುತ್ತೇನೆ. ವಿಶ್ವನಾಥ್‌ ಅವರೂ ದೇವಿಯ ಸನ್ನಿಧಿಗೆ ಬಂದು ನಾನಾಗಲಿ, ನನ್ನ ಕುಟುಂಬದವರಾಗಲಿ ಯಾವ ಆಸೆ, ಆಮಿಷಕ್ಕೆ ಒಳಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲವೆಂದು ಪ್ರಮಾಣ ಮಾಡಲಿ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಸವಾಲು ಹಾಕಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿಯೇ ವಿಶ್ವನಾಥ್‌ ಆಮಿಷಕ್ಕೆ ಒಳಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಜೆಡಿಎಸ್‌ ತೊರೆದು ಹೋಗಿದ್ದಾರೆಂದು ಹೇಳಿದ್ದೇನೆ. ಹಣ ಕೊಟ್ಟಿರುವವರ್ಯಾರೂ ನಾನೇ ಕೊಟ್ಟಿದ್ದೇನೆಂದು ಹೇಳಲ್ಲ. ಆದರೆ, ನೀವು ಚಾಮುಂಡಿಬೆಟ್ಟಕ್ಕೆ ಬರುವಾಗ ಮಾಜಿ ಪತ್ರಕರ್ತ ಎಂ.ಬಿ.ಮರಮ್‌ಕಲ್‌ ಅವರನ್ನೂ ಕರೆದು ಕೊಂಡು ಬನ್ನಿ. ಅವರಿಗೂ ಕೆಲ ವಿಚಾರಗಳು ಗೊತ್ತಿವೆ. ಕೇವಲ ದುಡ್ಡಿನ ವಿಚಾರವಲ್ಲ, ನನ್ನ ಬಗ್ಗೆ ಮಾಡಿರುವ ವೈಯಕ್ತಿಕ ಟೀಕೆಗಳೂ ಸತ್ಯ ಎಂದು ಪ್ರಮಾಣ ಮಾಡಿದರೆ ಸಾಕು. ನಾನು ಹೇಳಿದ್ದು ಸುಳ್ಳು ಅಂತ ಪ್ರಮಾಣ ಮಾಡಿದರೆ ರಾಜ್ಯದ ಜನತೆಯ ಕ್ಷಮೆ ಕೋರುತ್ತೇನೆ’ ಎಂದು ಹೇಳಿದರು.

ಸಾ.ರಾ.ಮಹೇಶ್‌ ಅವರು ಎಚ್‌.ವಿಶ್ವನಾಥ್‌ ಆರೋಪದಿಂದ ನೊಂದು ರಾಜೀನಾಮೆ ನೀಡಿರುವುದು ನಿಜ. ಸ್ಪೀಕರ್‌ ಊರಲ್ಲಿ ಇರಲಿಲ್ಲ, ವಾಪಸ್‌ ಪಡೆಯಲು ಹೇಳಿದ್ದೇನೆ. ಗುರುವಾರ ವಾಪಸ್‌ ಪಡೆಯುತ್ತಾರೆ. ಒಬ್ಬರು ಚಾಮುಂಡಿ ಬೆಟ್ಟಕ್ಕೆ ಬನ್ನಿ ಅಂತಾರೆ, ಮತ್ತೂಬ್ಬರು ಅವಶ್ಯಕತೆ ಇಲ್ಲ ಅಂತಾರೆ. ಆರೋಪ-ಪ್ರತ್ಯಾರೋಪಗಳು ಸರಿಯಲ್ಲ.
-ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.