ಸಭಾಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆ


Team Udayavani, Aug 1, 2019, 3:08 AM IST

sabhadyaksjha]

ವಿಧಾನಸಭೆ: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಶಿರಸಿ-ಸಿದ್ದಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯಲ್ಲಿ ಬುಧವಾರ ಉಪ ಸಭಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿಯವರು ಸಭಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ಪ್ರಸ್ತಾಪ ಮಂಡಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಗೇರಿ ಅವರ ಹೆಸರು ಸೂಚಿಸಿದರು. ಬಸವರಾಜ ಬೊಮ್ಮಾಯಿ ಅನುಮೋದಿಸಿದರು. ನಂತರ, ಕಾಗೇರಿ ಅವರನ್ನು ಯಡಿಯೂರಪ್ಪ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್‌ ಪೀಠಕ್ಕೆ ಕರೆ ತಂದರು.

ಶಿಸ್ತಿನ ಸಿಪಾಯಿ: ನಂತರ, ಸಿಎಂ ಯಡಿಯೂರಪ್ಪ ಮಾತನಾಡಿ, ಸ್ವೀಕರ್‌ ಹುದ್ದೆಗೆ ಅತ್ಯಂತ ಅರ್ಹ ವ್ಯಕ್ತಿಯನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದು ಸಂತೋಷದ ಸಂಗತಿ. ಈ ಸದನದ ಘನತೆ, ಗೌರವ ಎತ್ತಿ ಹಿಡಿಯುತ್ತಾರೆ ಎಂಬ ಭರವಸೆ, ವಿಶ್ವಾಸ ನನಗಿದೆ ಎಂದರು. ಜೆಡಿಎಸ್‌ನ ಎಚ್‌.ಕೆ.ಕುಮಾರಸ್ವಾಮಿ ಮಾತನಾಡಿ, ಈ ಸದನದ 224 ಸದಸ್ಯರ ಹಕ್ಕು ರಕ್ಷಣೆ ಮಾಡುವ ಹೊಣೆಗಾರಿಕೆ ನಿಮ್ಮ ಮೇಲಿದೆ. ವರ್ಷಕ್ಕೆ 60 ದಿನ ಸದನ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸೂಕ್ಷ್ಮತೆ: ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಮಾತನಾಡಿ, ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಂದವರು ನೀವು. ಆರ್‌ಎಸ್‌ಎಸ್‌ ಸಿದ್ಧಾಂತ ಬೇರೆ, ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಕೊಟ್ಟಿರುವ ಸಂವಿಧಾನದಡಿ ಇಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಸೂಕ್ಷ್ಮವಾಗಿ ಹೇಳಿ ದರು. ಬಿಜೆಪಿಯ ಜಗದೀಶ್‌ ಶೆಟ್ಟರ್‌ ಮಾತ ನಾಡಿ, “ಆರ್‌ಎಸ್‌ಎಸ್‌ ಸ್ವಯಂ ಸೇವಕರಾಗಿ ನಾವು ಕೆಲಸ ಮಾಡಿರುವುದಕ್ಕೆ ಹೆಮ್ಮೆ ಇದೆ. ಆದರೆ, ಸ್ಪೀಕರ್‌ ಸ್ಥಾನದಲ್ಲಿ ಅಲಂಕರಿಸಿದ ಮೇಲೆ ಎಲ್ಲರನ್ನೂ ಸಮಾನವಾಗಿ ಕಾಣುವ ಹಾಗೂ ಸಂವಿಧಾನದ ಆಶಯ ಎತ್ತಿ ಹಿಡಿಯುವ ಕೆಲಸ ಮಾಡುತ್ತೇವೆ ಎಂದು ರಮೇಶ್‌ಕುಮಾರ್‌ ಅವರಿಗೆ ಪರೋಕ್ಷವಾಗಿ ಟಾಂಗ್‌ ನೀಡಿದರು.

ಮತ್ತೂಬ್ಬ ಹಿರಿಯ ಸದಸ್ಯ ಕೆ.ಎಸ್‌.ಈಶ್ವರಪ್ಪ ಮಾತನಾಡಿ, ಆರ್‌ಎಸ್‌ಎಸ್‌ನಲ್ಲಿ ಕೆಲಸ ಮಾಡಿದವರಿಗೆ ಶಿಸ್ತು, ಬದ್ಧತೆ ಇರುತ್ತದೆ. ನನ್ನ ಅಣ್ಣ ಆರ್‌ಎಸ್‌ಎಸ್‌ಗೆ ಹೋಗುತ್ತಿದ್ದ. ನಮ್ಮ ಊರಿನಲ್ಲಿರುವವರು ಯಾಕೆ ಅಲ್ಲಿಗೆ ಕಳುಹಿಸುತ್ತೀರಿ, ಅಲ್ಲಿ ಬ್ರಾಹ್ಮಣರದೇ ಪಾರುಪತ್ಯ, ಹಿಂದುಳಿದವರನ್ನು ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಾರೆ ಎಂದೆಲ್ಲಾ ನಮ್ಮ ತಂದೆಗೆ ಹೇಳಿದ್ದರು. ಒಮ್ಮೆ, ನಮ್ಮ ತಂದೆ ಶಾಖೆಗೆ ಹೋಗಬೇಡ ಎಂದು ಅಣ್ಣನಿಗೆ ಹೊಡೆದು ಮನೆಯಿಂದ ಹೊರಗೆ ಕಳುಹಿಸಿದರು. ಮೂರು ದಿನವಾದರೂ ಆತ ಬರಲಿಲ್ಲ. ಆಗ ನಮ್ಮ ತಂದೆ-ತಾಯಿ ಅಣ್ಣನ ಹುಡುಕುತ್ತಿದ್ದಾಗ ಆಂಜನೇಯ ದೇವಾಲಯದ ಅರ್ಚಕರ ಮನೆಯಲ್ಲಿ ಇರಬಹುದು ಎಂದು ಯಾರೋ ಹೇಳಿದರು.

ಅಲ್ಲಿಗೆ ಹೋಗಿ ನಮ್ಮ ತಂದೆ ನೋಡಿದಾಗ ಬ್ರಾಹ್ಮಣರಾದ ಅರ್ಚಕರು ಹಿಂದುಳಿದ ವರ್ಗಕ್ಕೆ ಸೇರಿದ ನಮ್ಮ ಅಣ್ಣನನ್ನು ತಮ್ಮ ಮಕ್ಕಳ ಜತೆ ಕೂರಿಸಿ ಊಟ ಮಾಡಿಸುತ್ತಿದ್ದರು. ಇದನ್ನು ನೋಡಿದ ನಂತರ ನಮ್ಮ ತಂದೆಗೆ ಆರ್‌ಎಸ್‌ಎಸ್‌ ಬಗೆಗಿನ ಕಲ್ಪನೆ ಬದಲಾಯಿತು. ನಂತರ ನಾನೂ ಶಾಖೆಗೆ ಹೋದೆ, ಅದರಿಂದಲೇ ಇಲ್ಲಿ ನಿಂತಿದ್ದೇನೆ. ಆರ್‌ಎಸ್‌ಎಸ್‌, ಬಿಜೆಪಿ ಎಂದರೆ ಹಿಂದುತ್ವ ಎಂದು, ಅದು ಕೇವಲ ಹಿಂದೂಗಳಿಗೆ ಎಂದು ಬೇರ್ಪಡಿಸುವ ಮಾತುಗಳನ್ನು ಆಡಲಾಗುತ್ತಿದೆ. ಆದರೆ, ಹಿಂದುತ್ವ ಎಂಬುದು ಜೀವನ ಪದ್ಧತಿ. ಇದನ್ನು ನ್ಯಾಯಾಲಯವೇ ಹೇಳಿದೆ ಎಂದು ರಮೇಶ್‌ಕುಮಾರ್‌ ಅವರ ಮಾತಿಗೆ ಮಾತಿನಲ್ಲೇ ಚುಚ್ಚಿದರು.

ನೂತನ ಸ್ಪೀಕರ್‌ ಪರಿಚಯ
* ವಿದ್ಯಾರ್ಥಿ ಜೀವನದಲ್ಲಿ ಎಬಿವಿಪಿ ಕಾರ್ಯಕರ್ತರಾಗಿ ಸಕ್ರಿಯ.

* ರಾಜ್ಯ ಕಾರ್ಯದರ್ಶಿಯಾಗಿ, ಐದು ವರ್ಷ ಪೂರ್ಣಾವಧಿ ಕಾರ್ಯಕರ್ತರಾಗಿ ಕೆಲಸ ಮಾಡಿ, ಭ್ರಷ್ಟಾಚಾರ ವಿರೋಧಿ ಹೋರಾಟ, ಸಾಮಾಜಿಕ , ಶೈಕ್ಷಣಿಕ, ಪರಿಸರ ಸಮಸ್ಯೆಗಳ ಹೋರಾಟದಲ್ಲಿ ಭಾಗಿ.

1990ರಿಂದ ಸಕ್ರಿಯ ರಾಜಕೀಯ ಪ್ರವೇಶ. 1994ರವರೆಗೆ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಯುವ ಮೋರ್ಚಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ.

* 1994ರಲ್ಲಿ ಪ್ರಥಮ ಬಾರಿಗೆ ಅಂಕೋಲಾ ವಿಧಾನಸಭೆಯಿಂದ ಆಯ್ಕೆ. ಸತತ ಮೂರು ಬಾರಿ ಆ ಕ್ಷೇತ್ರ ಹಾಗೂ 2008 ರಿಂದ ಸತತ ಮೂರು ಬಾರಿ ಶಿರಸಿ-ಸಿದ್ದಾಪುರ ಕ್ಷೇತ್ರದಿಂದ ಪುನರಾಯ್ಕೆ.

* 2008ರಲ್ಲಿ ಬಿಜೆಪಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಣೆ.

ಸಭಾಧ್ಯಕ್ಷ ಪೀಠ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ತರ ಸ್ಥಾನ ಪಡೆದುಕೊಂಡಿದೆ. ನೀವು ಎಬಿವಿಪಿ, ಆರ್‌ಎಸ್‌ಎಸ್‌, ಬಿಜೆಪಿ ಹಿನ್ನೆಲೆಯಿಂದ ಬಂದಿದ್ದರೂ ಸ್ಪೀಕರ್‌ ಪೀಠ ಅಲಂಕರಿಸಿದ ಮೇಲೆ ಅದೆಲ್ಲದರ ಸೋಂಕಿನಿಂದ ಹೊರಗೆ ಬಂದಂತೆ. ಈಗ ನೀವು ಪಕ್ಷಾತೀತರು, ಹೊಣೆಗಾರಿಕೆಯೂ ಹೆಚ್ಚಾಗಿದೆ.
-ಸಿದ್ದರಾಮಯ್ಯ, ಮಾಜಿ ಸಿಎಂ

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.