ಇವು ರೋಗ ನಿರೋಧಕ ಶಕ್ತಿ ಹೆಚ್ಚಿಸುವ “ವಿಟಮಿನ್ ಸಿ” ಆಹಾರಗಳು…


ಮಹೇಶ್ ಹೆಬ್ರಿ, Sep 7, 2020, 5:15 PM IST

ವಿಟಮಿನ್ ಸಿ ಆಹಾರ

ಸಾಂದರ್ಭಿಕ ಚಿತ್ರ

ವಿಟಮಿನ್ ಸಿಯಲ್ಲಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸೋಂಕನ್ನು ನಿವಾರಿಸುವ ಗುಣಗಳಿವೆ.  ನಮ್ಮ ದೇಹಕ್ಕೆ ಪ್ರತಿಯೊಂದು ವಿಟಮಿನ್‍ಗಳು ಕೂಡ ಮುಖ್ಯ. ಒಂದರ ಕೊರತೆ ಕಾಣಿಸಿದರೂ ಅದು ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುವುದು ಖಚಿತ. ಕೆಲವು ವಿಟಮಿನ್ ಗಳು ನಮಗೆ ಆಹಾರಗಳಿಂದ ಲಭ್ಯವಾಗುವುದು. ದ್ರವಾಹಾರವಾಗಿರುವಂತಹ ವಿಟಮಿನ್ ಸಿಯು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ತುಂಬಾ ಪ್ರಮುಖ ಪಾತ್ರ ವಹಿಸುವುದು.

ವಿಟಮಿನ್ ಸಿ ಲಾಭಗಳೆಂದರೆ ಅದು ಪರಿಧಮನಿ ಕಾಯಿಲೆ, ಪ್ರತಿರೋಧಕ ವ್ಯವಸ್ಥೆಯ ಕೊರತೆ, ಪ್ರಸವ ಪೂರ್ವ ಆರೋಗ್ಯ ಸಮಸ್ಯೆ, ಕಣ್ಣಿನ ಕಾಯಿಲೆ, ಚರ್ಮದಲ್ಲಿ ಕಂಡು ಬರುವ ನೆರಿಗೆಗೆ ಸಹಕಾರಿ, ಮಾನವರಲ್ಲಿ ಈ ಜೀವಸತ್ವದ ಕೊರತೆಯು ಸ್ಕರ್ವಿ ರೋಗವನ್ನು ಉಂಟುಮಾಡುತ್ತದೆ.

ವಿಟಮಿನ್ ಸಿ ಇರುವ ಆಹಾರಗಳು

ಪಾಲಕ್‌ ಸೊಪ್ಪು
ವಿಟಮಿನ್‌ ಸಿ ಯಥೇಚ್ಛ ಪ್ರಮಾಣದಲ್ಲಿರುವ ಪಾಲಕ್‌ ಸೊಪ್ಪು ಆ್ಯಂಟಿಆಕ್ಸಿಡೆಂಟ್ಸ್‌ ಮತ್ತು ಬೀಟಾ ಕ್ಯಾರೊಟಿನ್‌ನ ಆಗರವೂ ಆಗಿದೆ. ಇವು ಸೋಂಕಿನ ವಿರುದ್ಧ ಹೋರಾಡುತ್ತವೆ.

ಕಿವಿ ಹಣ್ಣು: ಇದರಲ್ಲಿರುವ ವಿಟಮಿನ್‌ ಸಿ ಯಥೇಚ್ಛವಾಗಿದ್ದು ನೆಗಡಿಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯವಿರುವ ಶಕ್ತಿಯನ್ನೂ ನೀಡುತ್ತದೆ.

ಪಪ್ಪಾಯಿ : ಕಚ್ಚಾ ಪಪ್ಪಾಯಿಯಲ್ಲಿ ವಿಟಮಿನ್ ಸಿ ಉನ್ನತ ಮಟ್ಟದಲ್ಲಿದೆ. ಒಂದು ಕಪ್ ಕಚ್ಚಾ ಪಪ್ಪಾಯಿಯಲ್ಲಿ ದೈನಂದಿನ ಅಗತ್ಯಕ್ಕೆ ಬೇಕಾಗುವ 144 ಶೇ. ವಿಟಮಿನ್ ಸಿ ಇದೆ.

ಟೊಮೆಟೊ :  ಅಡುಗೆ ಮನೆಯಲ್ಲಿ ಸದಾ ಇರುವ ಮತ್ತು ವರ್ಷವಿಡೀ ಸಿಗುವ ಟೊಮೆಟೊ ವಿಟಮಿನ್‌ ಸಿ ಯ ಆಗರವಾಗಿದೆ. ಇದನ್ನು ಸಾರು, ಪಲ್ಯ, ಪಾಸ್ತಾ, ಸಲಾಡ್‌, ಸಾಸ್‌, ಸೂಪ್‌ ಇತ್ಯಾದಿಗಳಿಗೆ ಸೇರಿಸಿ ಸೇವಿಸಬಹುದು.

ನೆಲ್ಲಿಕಾಯಿ : ಆಮ್ಲ ಎಂದೂ ಕರೆಯಲ್ಪಡುವ ನೆಲ್ಲಿಕಾಯಿಯಲ್ಲಿ ಮೂರು ಕಿತ್ತಳೆಗಳಲ್ಲಿರುವುದಕ್ಕಿಂತಲೂ ಹೆಚ್ಚಿನ ವಿಟಮಿನ್ ಸಿ ಇದೆ.

ದ್ರಾಕ್ಷಿ ಹಣ್ಣು:  ದ್ರಾಕ್ಷಿ ಹಣ್ಣು ಬಿಳಿ ಇರಲಿ ಕಪ್ಪು ಇರಲಿ, ರುಚಿಕರ ಮತ್ತು ಆರೋಗ್ಯಕರವಾಗಿವೆ. ಇದರಲ್ಲಿ ಉತ್ತಮ ಪ್ರಮಾಣದ ಕ್ಯಾಲೋರಿಗಳು, ಕರಗುವ ನಾರು ಮತ್ತು ವಿಟಮಿನ್ ಸಿ ಇವೆ. ನಿತ್ಯವೂ ಕೊಂಚ ಪ್ರಮಾಣದಲ್ಲಿ ದ್ರಾಕ್ಷಿಗಳನ್ನು ಸೇವಿಸುತ್ತಾ ಬಂದರೆ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸನ್ನು ಪಡೆಯಬಹುದು.

ಸ್ಟ್ರಾಬೆರಿ
ಸ್ಟ್ರಾಬೆರಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಈ ರುಚಿಕರ ಹಣ್ಣನ್ನು ಸಲಾಡ್, ಸ್ಮೂಥಿ ಮತ್ತು ಡೆಸರ್ಟ್ ಗಳಲ್ಲಿ ಬಳಸಬಹುದು.

ಕಿತ್ತಳೆ  ಹಣ್ಣು : ಕಿತ್ತಳೆಯು ವಿಟಮಿನ್ ಸಿ ಸಮೃದ್ಧವಾಗಿರುವಂತಹ ಸಿಟ್ರಸ್ ಹಣ್ಣಾಗಿದೆ. ಒಂದು ದೊಡ್ಡ ಕಿತ್ತಳೆ ಹಣ್ಣಿನಲ್ಲಿ 163 ಶೇ. ವಿಟಮಿನ್ ಸಿ ಇದೆ. ಕಿತ್ತಳೆ ಹಣ್ಣನ್ನು ಸಲಾಡ್, ಜ್ಯೂಸ್ ಮೂಲಕ ಸೇವಿಸಬಹುದು.

ಲಿಂಬೆರಸ : ಒಂದು ಲಿಂಬೆಯ ರಸದಲ್ಲಿರುವ ವಿಟಮಿನ್ ಸಿ ದಿನದ ಅಗತ್ಯದ ಅರ್ಧದಷ್ಟನ್ನು ಪೂರೈಸುತ್ತದೆ. ಅಲ್ಲದೇ ಹೃದಯದ ಕ್ಷಮತೆಯನ್ನು ಹೆಚ್ಚಿಸುತ್ತದೆ ಮತ್ತು ಹೃದಯದ ಒತ್ತಡವನ್ನು ನಿಯಂತ್ರಣದಲ್ಲಿರಿಸಲು ನೆರವಾಗುತ್ತದೆ.

ಅನಾನಸ್ ಹಣ್ಣು : ಉಷ್ಣವಲಯದ ಹಣ್ಣಾಗಿರುವ ಅನಾನಸ್ ನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಅನಾನಸ್ ನಲ್ಲಿ ಉನ್ನತ ಮಟ್ಟದ ವಿಟಮಿನ್ ಎ, ಕ್ಯಾಲ್ಸಿಯಂ, ಪೊಟಾಶಿಯಂ ಮತ್ತು ಆಹಾರದ ನಾರಿನಾಂಶವಿದೆ.

ಹೂಕೋಸು : ಹೂಕೋಸು ವಿಟಮಿನ್ ಸಿ ಇರುವ ಎಲೆಜಾತಿಯ ವಿಭಾಗಕ್ಕೆ ಸೇರಿದ ತರಕಾರಿಯಾಗಿದೆ. ಹೂಕೋಸಿನಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್ ಕೆ, ಪೊಟಾಶಿಯಂ ಮತ್ತು ಪ್ರೋಸ್ಪರಸ್ ಸಮೃದ್ಧವಾಗಿದೆ.

ವಿಟಮಿನ್ ಸಿ ಯುಕ್ತ ಆಹಾರ ಪದಾರ್ಥಗಳು ದೇಹದ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಯಾವುದೇ ರೀತಿಯ ಸೋಂಕು ಹರಡದಂತೆ ತಡೆಯುವಲ್ಲಿ ಸಹಕಾರಿಯಾಗಬಲ್ಲದು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.