ವಿಟ್ಲ: ದೈವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿ ಬಂಧನ
Team Udayavani, Oct 21, 2020, 12:28 PM IST
ವಿಟ್ಲ: 2019 ರಲ್ಲಿ ಕೊಳ್ನಾಡು ಗ್ರಾಮದ ಮಾಡರಸು ಕುರಿಯಾಡಿತ್ತಾಯ ಐವರು ಬಂಟರು ದೈವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಳವು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಪುತ್ತೂರು ಚೇತನಾ ಆಸ್ಪತ್ರೆಯ ಬಳಿಯ ನಿವಾಸಿ ಮೊಹಮ್ಮದ್ ಸಾದಿಕ್ ಎಂದು ತಿಳಿದು ಬಂದಿದೆ.
ಕೊಳ್ನಾಡು ಗ್ರಾಮದ ಮಾಡರಸು ಕುರಿಯಾಡಿತ್ತಾಯ ಐವರು ಬಂಟರು ದೈವಸ್ಥಾನದ ಕಾಣಿಕೆ ಡಬ್ಬಿಯನ್ನು 2019ರ ಜನವರಿ 02 ರಂದು ರಾತ್ರಿ ಕಳವುಗೈಯಲಾಗಿತ್ತು. 2019 ರಲ್ಲಿ ಈ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ದೈವಸ್ಥಾನದ ಆಡಳಿತಕ್ಕೆ ಸಂಬಂಧಪಟ್ಟ ರಮೇಶ್ ರಾವ್ ಅವರು ದೂರು ದಾಖಲಿಸಿದ್ದರು.
ಇದೀಗ ಈ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸ್ ಠಾಣಾಧಿಕಾರಿ ವಿನೋದ್ ರೆಡ್ಡಿ ನೇತೃತ್ವದ ತಂಡ ಬಂಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ