ಉದ್ಯಮ ಮಿತ್ರ ಸರ್ಕಾರ: ವಿವಾದ್ ಸೇ ವಿಶ್ವಾಸ್- 2 ಯೋಜನೆ
ವಾಣಿಜ್ಯ ವಿವಾದಗಳ ಪರಿಹಾರಕ್ಕೆ ಮತ್ತೊಂದು ಯೋಜನೆ ಪ್ರಕಟ
Team Udayavani, Feb 2, 2023, 6:15 AM IST
ಉದ್ಯಮ ಸ್ನೇಹಿ ನಿರ್ಣಯಗಳ ಮೂಲಕ ವ್ಯಾಪಾರ-ವಹಿವಾಟು ಸುಲಭಗೊಳಿಸಲು ಹಲವು ಕ್ರಮ ಕೈಗೊಂಡಿರುವ ಮೋದಿ ಸರ್ಕಾರ, ಉದ್ಯಮಿಗಳಿಗೆ ಪೂರಕವಾಗುವಂತೆ ವಿವಾದ್ ಸೇ ವಿಶ್ವಾಸ್-2, ಒನ್ ಸ್ಟಾಪ್ ಸಲ್ಯೂಷನ್, ಇ-ಕೋರ್ಟ್ಗಳ ಸ್ಥಾಪನೆ ಸೇರಿದಂತೆ ವಿವಿಧ ಪರಿಹಾರಗಳನ್ನು ಘೋಷಿಸಿದೆ.
ಸರ್ಕಾರ ಮತ್ತು ಸರ್ಕಾರಿ ಸಂಸ್ಥೆಗಳ ಜತೆಗಿನ ಒಪ್ಪಂದಗಳಿಗೆ ಸಂಬಂಧಿಸಿದ ವಿವಾದಗಳನ್ನು ಪರಿಹರಿಸಲು ವಿವಾದ್ ಸೇ ವಿಶ್ವಾಸ್-2 ಅನ್ವಯ ಪರಿಹಾರ ಯೋಜನೆ ಘೋಷಿಸುವುದಾಗಿ ತಿಳಿಸಿದೆ.
ಅಲ್ಲದೇ, ವಿವಿಧ ಸರ್ಕಾರಿ ಸಂಸ್ಥೆಗಳಿಗೆ ವ್ಯಕ್ತಿಯ ಒಂದೇ ಮಾಹಿತಿಯನ್ನು ಪ್ರತ್ಯೇಕವಾಗಿ ಒದಗಿಸುವುದನ್ನು ತಡೆಗಟ್ಟಲು ಪರಿಹಾರಕ್ರಮವಾಗಿ ಒನ್ಸ್ಟಾಪ್- ಒನ್ಸಲ್ಯೂಷನ್ ಯೋಜನೆ ಪರಿಚಯಿಸಲು ನಿರ್ಣಯಿಸಿದೆ.
ಜತೆಗೆ ವಿವಾದಗಳ ಪರಿಹಾರಕ್ಕಾಗಿ 7 ಸಾವಿರ ಕೋಟಿ ರೂ.ವೆಚ್ಚದಲ್ಲಿ ಇ- ಕೋರ್ಟ್ಗಳನ್ನು ಸ್ಥಾಪಿಸುವುದಾಗಿ ತಿಳಿಸಿದೆ. ಉದ್ಯಮ ಸ್ಥಾಪನೆಗೆ ಅಗತ್ಯವಿರುವ ಸರ್ಕಾರದ ಎಲ್ಲಾ ಡಿಜಿಟಲ್ ಸೇವೆಗಳನ್ನು ಪ್ಯಾನ್ಕಾರ್ಡ್ಗಳನ್ನು ಆಧಾರವಾಗಿಟ್ಟುಕೊಂಡೇ ಬಳಸಿಕೊಳ್ಳಲು ಅನುವು ಮಾಡಿಕೊಡುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ