ಸಂಕ್ರಾಂತಿ ನಂತರವೂ ಸಂಪುಟ ವಿಸ್ತರಣೆ ಮುಂದೂಡಿಕೆ?


Team Udayavani, Dec 27, 2019, 6:30 AM IST

sd-39

ಬೆಂಗಳೂರು: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರೂ ಜನವರಿಯಲ್ಲಿ ಸಂಪುಟ ವಿಸ್ತರಣೆ ದಿನಾಂಕವನ್ನು ಮತ್ತೆ ಮುಂದೂಡುವ ಸಾಧ್ಯತೆಯಿದೆ.

ವಿಧಾನಮಂಡಲ ಅಧಿವೇಶನವು ಜ.27ಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ
ತರಾತುರಿಯಲ್ಲಿ ಸಂಪುಟ ವಿಸ್ತರಣೆಯಾಗುವುದೇ ಎಂಬ ಪ್ರಶ್ನೆ ಮೂಡಿಸಿದೆ. ಜ.20ರಿಂದ 30ವರೆಗೆ ವಿಧಾನಮಂಡಲ ಜಂಟಿ ಅಧಿವೇಶನ ಕರೆಯಲಾಗಿದೆ. ಆದರೆ ಜ. 21ರಿಂದ 24ರವರೆಗೆ ಸ್ವಿಡ್ಜರ್ಲೆಂಡ್‌ನ‌ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯೂಇಎಫ್) 50ನೇ ವಾರ್ಷಿಕ ಸಭೆ ನಡೆಯಲಿದ್ದು, ದೇಶದ ಮುಖ್ಯಮಂತ್ರಿಗಳೆಲ್ಲ ಪಾಲ್ಗೊಳ್ಳುತ್ತಿದ್ದಾರೆ. ಹಾಗಾಗಿ ಯಡಿಯೂರಪ್ಪ ಅವರು ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದರೆ ವಿಧಾನಮಂಡಲ ಅಧಿವೇಶನ ಹಾಗೂ ಸಂಪುಟ
ವಿಸ್ತರಣೆ ಮುಂದೂಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಬಿಜೆಪಿ ಸರ್ಕಾರ ಸುಭದ್ರವಾಗುತ್ತಿದ್ದಂತೆ ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆಯಾಗುವ ಮಾತು ಕೇಳಿಬಂದಿತು. ಕಾಂಗ್ರೆಸ್‌, ಜೆಡಿಎಸ್‌ ತೊರೆದು ಬಿಜೆಪಿ ಸೇರಿ ಗೆದ್ದಿರುವವರು ಪ್ರಭಾವಿ ಖಾತೆಗಳಿಗೆ ಪಟ್ಟು ಹಿಡಿದ್ದಾರೆ ಎನ್ನಲಾಗಿತ್ತು. ಯಡಿಯೂರಪ್ಪ ಅವರು ವರಿಷ್ಠರ ಭೇಟಿಗೆ ಪ್ರಯತ್ನಿಸಿದರೂ ಸಾಧ್ಯವಾಗದ ಕಾರಣ ಸಂಪುಟ ವಿಸ್ತರಣೆ ಮುಂದೂಡಿಕೆಯಾಯಿತು. ಬಳಿಕ ಧನುರ್ಮಾಸ ಕಾರಣಕ್ಕೆ ಶಾಸಕರು ಸಹ ಸಂಪುಟ ವಿಸ್ತರಣೆಗೆ ಹೆಚ್ಚು ಒತ್ತಡ ಹೇರಿಲ್ಲ. ಆ ಹಿನ್ನೆಲೆಯಲ್ಲಿ ಜನವರಿ ಮೊದಲ ವಾರದಲ್ಲೇ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಿಎಎ ವಿರುದ್ಧ ರಾಷ್ಟ್ರದ ಹಲವೆಡೆ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ವರಿಷ್ಠರು ಅದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವತ್ತ ಗಮನ ಹರಿಸಿದ್ದಾರೆ.

ಕೇಂದ್ರ ಬಜೆಟ್‌ಗೂ ತಯಾರಿ ನಡೆಸಬೇಕಿರುವುದರಿಂದ ಕಾರ್ಯ ಒತ್ತಡದಲ್ಲಿದ್ದಾರೆ. ಈ ಹೊತ್ತಿನಲ್ಲಿ ವರಿಷ್ಠರನ್ನು ಭೇಟಿಯಾಗಿ ಸಂಪುಟ ವಿಸ್ತರಣೆಗೆ ಸಮಯಾವಕಾಶ ಸಿಗುವುದೇ ಎಂಬುದು ಮುಖ್ಯವೆನಿಸಿದೆ.
ಒಂದೊಮ್ಮೆ ಜನವರಿ ಮೊದಲ ವಾರದಲ್ಲಿ ಯಡಿಯೂರಪ್ಪ ವರಿಷ್ಠರನ್ನು ಭೇಟಿಯಾಗಲು ಸಾಧ್ಯವಾಗದಿದ್ದರೆ ಸಂಕ್ರಾಂತಿ ಹೊತ್ತಿಗೆ ಭೇಟಿಗೆ ಪ್ರಯತ್ನಿಸಬಹುದು. ಅಲ್ಲಿಂದ ಅನುಮೋದನೆ ಪಡೆದು ಸಂಪುಟ ಪುನಾರಚನೆ ಇಲ್ಲವೇ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳುವುದು ವಿಳಂಬವಾದರೆ ನಂತರ ಯಡಿಯೂರಪ್ಪ ಅವರು ಸಿಡ್ಜರ್ಲೆಂಡ್‌ ಪ್ರವಾಸಕ್ಕೆ ತೆರಳಲಿದ್ದಾರೆ. ಅವರು ರಾಜ್ಯಕ್ಕೆ ಹಿಂತಿರುಗುವ ಹೊತ್ತಿಗೆ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಲಿದೆ. ಹಾಗಾಗಿ ಜನವರಿಯಲ್ಲೂ ಸಂಪುಟ ವಿಸ್ತರಣೆ ಬಗ್ಗೆ ಸಚಿವಾಕಾಂಕ್ಷಿಗಳಲ್ಲಿ ಅನುಮಾನ ಮೂಡಿದೆ ಎನ್ನಲಾಗಿದೆ.

ಅಧಿವೇಶನ ಮುಂದಕ್ಕೆ
ಸ್ವಿಡ್ಜರ್ಲೆಂಡ್‌ನ‌ಲ್ಲಿ ನಡೆಯಲಿರುವ ಡಬ್ಲ್ಯೂಇಎಫ್ ಸಾಮಾನ್ಯ ಸಭೆಗೆ ಸಚಿವರೊಬ್ಬರನ್ನು ಕಳುಹಿಸಲು ಬಿಎಸ್‌ವೈ ಚಿಂತಿಸಿದ್ದಾರೆ. ಆದರೆ ದೇಶದ ಎಲ್ಲ ಸಿಎಂಗಳು ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಅವರೇ ಹೋಗುವುದು ಸೂಕ್ತ ಎಂಬುದಾಗಿ ಆಪ್ತ ಸಚಿವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಒಂದೊಮ್ಮೆ ಯಡಿಯೂರಪ್ಪ ಅವರೇ ಪ್ರವಾಸ ಕೈಗೊಂಡರೆ ಅಧಿವೇಶನ ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚು ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.