ಬಂಡೀಪುರದಲ್ಲಿ ಸ್ವಯಂ ಸೇವಕರ ಸೇವೆ ಅನಗತ್ಯ
Team Udayavani, Apr 25, 2019, 3:41 AM IST
ಗುಂಡ್ಲುಪೇಟೆ: ಸ್ವಯಂ ಸೇವಕರು ಎಂಬ ಹೆಸರಿನಲ್ಲಿ ಅರಣ್ಯದೊಳಗೆ ಪ್ರವೇಶಿಸಿ, ಸೆಲ್ಫಿ ತೆಗೆದು ಹೊರಜಗತ್ತಿಗೆ ತಪ್ಪು ಮಾಹಿತಿ ನೀಡುತ್ತಿರುವ ಕಾರಣ, ಎಂತಹ ತುರ್ತು ಪರಿಸ್ಥಿತಿಯಲ್ಲೂ ಸ್ವಯಂ ಸೇವಕರ ಸೇವೆ ಅನಗತ್ಯ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನಟಿ ಶ್ರೀಧರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಂಡೀಪುರ ಹುಲಿ ಯೋಜನೆಯ ಹಿಮವದ್ ಗೋಪಾಲಸ್ವಾಮಿ ಅರಣ್ಯ ವಲಯದಲ್ಲಿ ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಲಂಟಾನಾ ಪೊದೆಗಳು, ಭೂಮಿಯಲ್ಲಿ ತೆವಳುವ ಸಣ್ಣ ಪ್ರಾಣಿಗಳು ಮತ್ತು ಅಲ್ಪ ಪ್ರಮಾಣದ ಹುಲ್ಲು, ಒಣಗಿ ನಿಂತ ದೊಡ್ಡ ಮರಗಳು ಮತ್ತು ಒಣ ಹುಲ್ಲು ಬೆಂಕಿಯಲ್ಲಿ ಸುಟ್ಟುಹೋಗಿದ್ದವು. ಸ್ವಲ್ಪ ಕಾಲದ ನಂತರ ಅವು ಮತ್ತೆ ಬೆಳೆಯುತ್ತವೆ.
ಆದರೆ, ಹಸಿರು ಹೊದ್ದಿದ್ದ ಯಾವುದೇ ಮರಗಳೂ ಸುಟ್ಟಿರಲಿಲ್ಲ. ಆದರೆ, ಕೆಲವು ದುಷ್ಕರ್ಮಿಗಳು ಕೆಲವು ದಿನಗಳಿಂದ ಬಂಡೀಪುರ ಬೆಂಕಿ ಆಕಸ್ಮಿಕದಲ್ಲಿ ಹಲವಾರು ಪ್ರಾಣಿಗಳು ಮೃತಪಟ್ಟಿದ್ದು, ಹಲವಾರು ಮರಗಳು ಸುಟ್ಟುಹೋಗಿವೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
ಅಲ್ಲದೆ, ಬಂಡೀಪುರ ಅರಣ್ಯ ಪ್ರದೇಶವನ್ನು ಪುನರುಜ್ಜೀವನಗೊಳಿಸಲು ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸುವಿಕೆಯಲ್ಲಿ ತೊಡಗಿರುವುದು ಕಂಡು ಬಂದಿದೆ. ಆದರೆ, ಬಂಡೀಪುರದ ಪುನರುತ್ಥಾನಕ್ಕಾಗಿ ಯಾವುದೇ ರೀತಿಯ ಹಣ ಸಹಾಯ ಬೇಡ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ