![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
ಬ್ರಹ್ಮಾವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
Team Udayavani, Apr 24, 2024, 10:07 PM IST
![Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’](https://www.udayavani.com/wp-content/uploads/2024/04/KOTA1E-620x282.jpg)
ಕೋಟ: ಜಯಪ್ರಕಾಶ್ ಹೆಗ್ಡೆಯವರಿಂದ ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ರಮೇಶ್ ತಿಳಿಸಿದರು. ಅವರು ಮಂಗಳವಾರ ಬ್ರಹ್ಮಾವರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.
ಹಿಂದಿನಂತೆ ಕೆಲಸ ಮಾಡುವೆ
ಈ ಬಾರಿ ಮತ್ತೊಮ್ಮೆ ಅವಕಾಶ ನೀಡಿದರೆ ಅದೇ ಕ್ರಿಯಾಶೀಲತೆಯೊಂದಿಗೆ ನಿಮ್ಮ ಸೇವೆ ಮಾಡುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.
ಹೆಗ್ಡೆ ಗೆದ್ದರೆ ನಾವೆಲ್ಲ ಗೆದ್ದಂತೆ
ಜಯಪ್ರಕಾಶ್ ಹೆಗ್ಡೆಯವರು ಗೆದ್ದರೆ ನಮ್ಮ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎನ್ನುವ ನೋವು ದೂರವಾಗಲಿದೆ. ಉಡುಪಿ ಜಿಲ್ಲೆಗೊಂದು ಎಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು ಸ್ಥಾಪನೆಯಾಗಲಿದೆ. ಕೈಗಾರಿಕಾ ವಲಯ, ಕಂಪೆನಿಗಳು ಸ್ಥಾಪನೆಯಾಗಿ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಈ ಮೂಲಕ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭಿವೃದ್ಧಿ ಯೋಜನೆ ಹರಿದುಬರಲಿದೆ. ಆದ್ದರಿಂದ ಹೆಗ್ಡೆ ಗೆಲುವು ಕ್ಷೇತ್ರದ ಜನರಿಗೆ, ನಮ್ಮ ನಿಮ್ಮಲ್ಲರಿಗೆ ಅಗತ್ಯವಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.
ಎ.ಐ.ಸಿ.ಸಿ. ಸದಸ್ಯ ಚಿಕ್ಕಮಗಳೂರಿನ ಸಂದೀಪ್, ಕಾಂಗ್ರೆಸ್ ಮುಖಂಡರಾದ ಎಂ.ಎ. ಗಪೂರ್, ಸು ಧೀರ್ ಕುಮಾರ್ ಮುರೊಳ್ಳಿ, ಕಿಶನ್ ಹೆಗ್ಡೆ, ದಿನಕರ ಹೇರೂರು, ಶಂಕರ್ ಕುಂದರ್, ಭುಜಂಗ ಶೆಟ್ಟಿ, ಪ್ರಸಾದ್ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಮೈರ್ಮಾಡಿ ಸುಧಾಕರ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ ಇದ್ದರು. ವಿನಯ ಕುಮಾರ್ ಕಬ್ಯಾಡಿ ಕಾರ್ಯಕ್ರಮ ನಿರೂಪಿಸಿದರು.
ಪಿಂಚಣಿ ದೇಣಿಗೆಗೆ
ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ವಿಜಯಾ ಬ್ಯಾಂಕ್ ನಿವೃತ್ತ ಮ್ಯಾನೇಜರ್, ಜಿ.ಪಂ. ಮಾಜಿ ಸದಸ್ಯ, ಬಂಟರ ಸಂಘದ ಅಧ್ಯಕ್ಷ ಮೈರ್ಮಾಡಿ ಸುಧಾಕರ ಶೆಟ್ಟಿ ಅವರು ತಮ್ಮ ಒಂದು ತಿಂಗಳ ಪಿಂಚಣಿ ಯನ್ನು ಬ್ಯಾಂಕ್ನ ಮಾಜಿ ಸಹೋದ್ಯೋಗಿ ಕೆ. ಜಯಪ್ರಕಾಶ್ ಹೆಗ್ಡೆ ಅವರ ಚುನಾವಣ ವೆಚ್ಚಕ್ಕೆ ದೇಣಿಗೆ ನೀಡಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.