Election: ಪ್ರೌಢ ಮಕ್ಕಳಲ್ಲಿ ಮತದಾನದ ಜಾಗೃತಿ: ಚು.ಆಯೋಗದ ಚಿಂತನೆ ಸ್ವಾಗತಾರ್ಹ


Team Udayavani, Oct 26, 2023, 8:41 PM IST

election

ದೇಶದ ಯುವಪೀಳಿಗೆ ಪ್ರಜಾಪ್ರಭುತ್ವ ಮತ್ತು ಮತದಾನದ ಬಗೆಗೆ ಅರ್ಥೈಸಿಕೊಂಡು, ಹಕ್ಕು ಚಲಾವಣೆಯ ಸಂದರ್ಭದಲ್ಲಿ ತಮ್ಮ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗ ವಿನೂತನ ಚಿಂತನೆಯೊಂದನ್ನು ದೇಶದ ಮುಂದಿಟ್ಟಿದೆ. ಪ್ರಜಾಪ್ರಭುತ್ವದ ಮೂಲೋದ್ದೇಶ, ಇದರ ಪ್ರಯೋಜನ, ಮಹತ್ವ ಮತ್ತು ದೇಶದ ಭವಿಷ್ಯ ರೂಪಣೆಯಲ್ಲಿ ಮತದಾನ ವಹಿಸುವ ಪಾತ್ರದ ಕುರಿತಂತೆ 9ನೇ ತರಗತಿಯಿಂದ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಂಬಂಧ ಶಿಕ್ಷಣ ಇಲಾಖೆಯೊಂದಿಗೆ ಅತೀ ಶೀಘ್ರದಲ್ಲಿಯೇ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

ಇತ್ತೀಚಿನ ದಶಕಗಳಲ್ಲಿ ಯುವ ಮತದಾರರನ್ನು ಮತದಾನ ಕೇಂದ್ರಗಳತ್ತ ಸೆಳೆಯುವ ಸಲುವಾಗಿ ಆಯೋಗ, ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಚುನಾವಣೆ ಸಂದರ್ಭದಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಆಯೋಗದ ಈ ಪ್ರಯತ್ನದಿಂದಾಗಿ ಕಳೆದ ಕೆಲವು ವರ್ಷಗಳಿಂದೀಚೆಗೆ ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇದೇ ವೇಳೆ ಮತದಾನಕ್ಕೆ ನಿಗದಿಪಡಿಸಲಾಗಿರುವ 18 ವರ್ಷ ತಲುಪುವ ವೇಳೆಗೆ ಪ್ರತಿಯೋರ್ವನೂ ಪ್ರಜಾಪ್ರಭುತ್ವ, ಮತದಾನ ಮತ್ತಿತರ ವಿಷಯಗಳ ಬಗೆಗೆ ಪ್ರಾಥಮಿಕ ಜ್ಞಾನವನ್ನು ಹೊಂದಿದ್ದರೆ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಸದೃಢವಾಗಿ ಬೆಳೆಯಲು ಸಾಧ್ಯ. ನೂರು ಪ್ರತಿಶತ ಮತದಾನದ ಗುರಿಯ ಜತೆಜತೆಯಲ್ಲಿ ಅರ್ಹ ಮತ್ತು ಸಮರ್ಥ ಅಭ್ಯರ್ಥಿಗಳ ಆಯ್ಕೆಯೂ ಅತೀಮುಖ್ಯವಾಗಿದ್ದು ಈ ನಿಟ್ಟಿನಲ್ಲಿ ಚುನಾವಣಾ ಆಯೋಗದ ಈ ಚಿಂತನೆ ಸ್ವಾಗತಾರ್ಹ ಮಾತ್ರವಲ್ಲದೆ ದೂರದೃಷ್ಟಿಯಿಂದ ಕೂಡಿದ್ದಾಗಿದೆ.

ಪ್ರಜಾಪ್ರಭುತ್ವ ಮಾದರಿ ಆಡಳಿತದಲ್ಲಿ ಮತದಾನ ದೇಶದ ಪ್ರತಿಯೋರ್ವ ವಯಸ್ಕ ಪ್ರಜೆಯ ಹಕ್ಕಾಗಿದ್ದು ಚುನಾವಣೆ ವೇಳೆ ಪ್ರತಿಯೋರ್ವ ಅರ್ಹ ಮತದಾರ ತನ್ನ ಹಕ್ಕನ್ನು ತಪ್ಪದೆ ಚಲಾಯಿಸಬೇಕು. ಅಲ್ಲದೆ ಮತ ಚಲಾವಣೆ ವೇಳೆ ತನ್ನ ಪ್ರತಿನಿಧಿಯಾಗಲು ಯಾರು ಅರ್ಹ ಎಂಬುದನ್ನು ನಿರ್ಧರಿಸುವಷ್ಟು ಸಾಮರ್ಥ್ಯವನ್ನು ಆತ ಹೊಂದಿರಬೇಕು. ಇದೇ ಹಿನ್ನೆಲೆಯಲ್ಲಿ ಈ ವಿಷಯಗಳನ್ನು ಪ್ರೌಢ ಶಾಲಾ ಹಂತದ ಪಠ್ಯಗಳಲ್ಲಿ ಸೇರ್ಪಡೆಗೊಳಿಸುವ ಇಂಗಿತವನ್ನು ಮುಖ್ಯ ಚುನಾವಣಾ ಆಯುಕ್ತರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆಯೊಂದಿಗೆ ತಿಳಿವಳಿಕಾ ಒಪ್ಪಂದಕ್ಕೆ ಆಯೋಗ ಅಂಕಿತ ಹಾಕಲಿದೆ ಎಂದವರು ತಿಳಿಸಿದ್ದಾರೆ.

ಪ್ರೌಢ ಹಂತದಲ್ಲಿಯೇ ಮಕ್ಕಳಿಗೆ ಪ್ರಜಾಪ್ರಭುತ್ವ ಸರ್ಕಾರ, ಚುನಾವಣೆ, ಮತದಾನದ ಮಹತ್ವ, ಹಕ್ಕು ಚಲಾವಣೆ ಸಂದರ್ಭದಲ್ಲಿನ ಅವರ ಹೊಣೆಗಾರಿಕೆಗಳು ಮತ್ತಿತರ ವಿಷಯಗಳ ಬಗೆಗೆ ಸಮರ್ಪಕವಾಗಿ ಅರಿವು ಮೂಡಿಸಿದ್ದೇ ಆದಲ್ಲಿ ಕೇವಲ ಯುವಜನತೆಯ ಮತದಾನ ಪ್ರಮಾಣವನ್ನು ಹೆಚ್ಚಿಸುವುದಷ್ಟೇ ಅಲ್ಲದೆ ಸಮರ್ಥ ಮತ್ತು ಸುಸ್ಥಿರ ಸರಕಾರ ರಚನೆಯ ನಿಟ್ಟಿನಲ್ಲಿ ಮುಂದಡಿ ಇಟ್ಟಂತಾಗಲಿದೆ. ಪ್ರೌಢ ಹಂತದಲ್ಲಿಯೇ ಮಕ್ಕಳನ್ನು ದೇಶದ ಭಾವೀ ಹೊಣೆಗಾರಿಕೆಯುತ ಪ್ರಜೆಗಳನ್ನಾಗಿ ರೂಪಿಸುವ ದೂರಾಲೋಚನೆಯೂ ಆಯೋಗದ ಈ ಚಿಂತನೆಯ ಹಿಂದೆ ಅಡಗಿದೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಇದರಿಂದ ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಭಾರತದ ಪ್ರಜಾಡಳಿತ ವ್ಯವಸ್ಥೆ ಇನ್ನಷ್ಟು ಸಶಕ್ತವಾಗಿ ಬೆಳೆಯಲು ಸಾಧ್ಯ.

 

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.