ಡ್ರಗ್ ಮಾಫಿಯಾ ವಿರುದ್ಧ ಸಮರ ನಿರಂತರ: ಸಚಿವ ಆರಗ ಜ್ಞಾನೇಂದ್ರ
Team Udayavani, Aug 9, 2021, 9:00 PM IST
ಬೆಂಗಳೂರು: ಡ್ರಗ್ ಮಾಫಿಯಾ ವಿರುದ್ಧದ ಸಮರ ನಿರಂತರವಾಗಿರಬೇಕು. ಬುಡಸಮೇತ ನಿರ್ಮೂಲನೆಗೆ ಪೊಲೀಸ್ ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಟನ್ಗಟ್ಟಲೆ ಮಾದಕ ದ್ರವ್ಯ ಜಪ್ತಿಯಾಗಿರುವುದು ನೋಡಿದರೆ ಆತಂಕವಾಗುತ್ತದೆ. ಇದು ಸಮಾಜಕ್ಕೆ ತಲುಪಿದ್ದರೆ ಏನೆಲ್ಲ ಅಪಾಯಕಾರಿ ಎಂಬುದು ಮನದಟ್ಟಾಗಿದೆ. ಹೀಗಾಗಿ ಡ್ರಗ್ಸ್ ಮಾಫಿಯಾ ವಿಚಾರದಲ್ಲಿ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದವರು ಹಿರಿಯ ಅಧಿಕಾರಿಗಳ ಸಭೆಯ ಬಳಿಕ ತಿಳಿಸಿದರು.
ಪೊಲೀಸ್ ಇಲಾಖೆ ಮಲಗಬಾರದು. ದಿನದ 24 ಗಂಟೆ ಕೆಲಸ ಮಾಡಬೇಕು. ಸಾರ್ವಜನಿಕರು ನೆಮ್ಮದಿಯಾಗಿ ಮಲಗುವಂತಾಗಲು ಪೊಲೀಸರ ಶ್ರಮ ಹೆಚ್ಚಾಗಿದೆ. ಪ್ರಾಮಾಣಿಕವಾಗಿ ದಕ್ಷತೆಯಿಂದ ಕೆಲಸ ಮಾಡುವ ನೂರಾರು ಪೊಲೀಸ್ ಅಧಿಕಾರಿಗಳು ನಮ್ಮಲ್ಲಿ ಇದ್ದಾರೆ ಎಂದರು.
ಇದನ್ನೂ ಓದಿ:ರಾಜ್ಯದಲ್ಲಿ ತಗ್ಗಿದ ಕೋವಿಡ್ : ಇಂದು 1186 ಪ್ರಕರಣ ಪತ್ತೆ| 24 ಜನರ ಸಾವು
ಇಲಾಖೆಯಲ್ಲಿ ಸಿಬಂದಿ ಕೊರತೆ ನೀಗಿಸಲಾಗುವುದು. 16 ಸಾವಿರ ಪೇದೆಗಳ ನೇಮಕಕ್ಕೆ ತೀರ್ಮಾನವಾಗಿದ್ದು ಈಗಾಗಲೇ ನಾಲ್ಕು ಸಾವಿರ ಪೇದೆಗಳ ನೇಮಕವಾಗಿದೆ. ಇನ್ಸ್ಪೆಕ್ಟರ್ ಹುದ್ದೆ ಸಹ ಭರ್ತಿ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…