ವರ್ಣಾಲಂಕಾರದ ಮೂಲಕ ಶಿವನಗರ ಹಿ.ಪ್ರಾ. ಶಾಲೆಗೆ ಹೊಸಕಳೆ ತಂದ ಹಳೆ ವಿದ್ಯಾರ್ಥಿಗಳು


Team Udayavani, Oct 19, 2020, 3:35 PM IST

ಶಿವನಗರ ಹಿ.ಪ್ರಾ. ಶಾಲೆಗೆ ವರ್ಣಾಲಂಕಾರದ ಮೂಲಕ ಹೊಸಕಳೆ ತಂದ ಹಳೆ ವಿದ್ಯಾರ್ಥಿಗಳು

ಪುಂಜಾಲಕಟ್ಟೆ : ಕೋವಿಡ್ ಕಾರಣದಿಂದ ಶಾಲಾರಂಭಕ್ಕೆ ದಿನ ನಿಗದಿಯಾಗದಿದ್ದರೂ ಶಾಲೆಗಳು ಪುನರಾರಂಭಕ್ಕೆ ಸಜ್ಜುಗೊಳ್ಳುತ್ತಿವೆ. ತಾವು ಕಲಿತ ಶಾಲೆ ಅಂದವಾಗಿ ಆಕರ್ಷಣೀಯವಾಗಬೇಕೆಂದು ಇಲ್ಲೊಂದು ಶಾಲೆಯ ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಸೇರಿ ಶಾಲೆಗೆ ಬಣ್ಣ ಬಳಿದು, ಚಿತ್ತಾರ ಬಿಡಿಸಿ ಶೃಂಗಾರಗೊಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಮಾವಿನಕಟ್ಟೆ ,  ಶಿವನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಯುವ ಜನರ ತಂಡ ವರ್ಣಾಲಂಕಾರದಿಂದ ಹೊಸರೂಪ ನೀಡಿ ಪ್ರಶಂಸೆ ಗಳಿಸಿದ್ದಾರೆ.

ಕೋವಿಡ್ ಕಾರಣದಿಂದ ದೂರದೂರಿಗೆ ಹೋಗಲಾಗದೆ ಊರಲ್ಲಿರುವ ಶಾಲಾ ಹಳೆವಿದ್ಯಾರ್ಥಿಗಳು  ವಿದ್ಯಾರ್ಥಿಗಳೊಂದಿಗೆ ಸೇರಿ ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಸದಸ್ಯರಿದ್ದ ಈ ತಂಡ ತಮ್ಮೂರಿನ ಶಾಲೆಯ ಹೊರ ಮತ್ತು ಒಳಗೋಡೆಗಳನ್ನು ವರ್ಲಿ ಕಲೆಯ ಮೂಲಕ ಆಕರ್ಷಣೀಯಗೊಳಿಸಿ ಲಾಕ್ ಡೌನ್ ಸಮಯವನ್ನು ಸದ್ವಿನಿಯೋಗಪಡಿಸಿಕೊಂಡಿದೆ.

ಬೆಂಗಳೂರುನಲ್ಲಿ  ಸಿವಿಲ್ ಇಂಜಿನಿಯರ್ ವೃತ್ತಿಯಲ್ಲಿರುವ , ಚಿತ್ರಕಲಾವಿದ, ಉತ್ಸಾಹಿ ಯುವಕ ಅವಿನಾಶ್ ಬದ್ಯಾರ್ ನೇತೃತ್ವದಲ್ಲಿ ಜತೆಯಾದ ತಂಡದಿಂದ ಕೋವಿಡ್ ಲಾಕ್ ಡೌನ್ ವಿರಾಮದ ವೇಳೆಯಲ್ಲಿ ರೂಪುಗೊಂಡ ಕ್ರಿಯಾತ್ಮಕ ಚಿಂತನೆಯ ಫಲವೇ ತಾವು ಹಿಂದೆ ಕಲಿತ ಪ್ರಾಥಮಿಕ ಶಾಲೆಗೆ ಕಲೆಯ ಸೊಬಗಿನೊಂದಿಗೆ ಸುಂದರ ರೂಪ ನೀಡುವ ಸುಮಧುರ ಯೋಜನೆ.

ಯುವಕರ ತಂಡ ಒಂದು ತಿಂಗಳ ಯೋಜನೆಯನ್ನು ಸಿದ್ಧಪಡಿಸಿತು, ಚಿತ್ರಕಲೆಯಲ್ಲಿ ಪಳಗಿದವರು, ಹೊಸ ಕಲಾವಿದರು, ಆಸಕ್ತ ವಿದ್ಯಾರ್ಥಿಗಳು ಜತೆಯಾದರು,   ಅವಿನಾಶರ ಕಲ್ಪನೆಯಂತೆ ಕುಂಚ ಹಿಡಿದು ತಾವು ಕಲಿತ ಶಾಲೆಯ ಗೋಡೆಯ ಮೇಲೆ ಹಳೆಯ ನೆನಪುಗಳೊಂದಿಗೆ ಹೊಸ ರೂಪಗಳನ್ನು ಚಿತ್ರಿಸಿದರು.

ತಿಂಗಳು ಕಳೆಯುವಾಗ ಶಾಲೆ ಹೊಸಬಣ್ಣದ ಸೊಗಡಿನೊಂದಿಗೆ ಹೊಸರೂಪ ಪಡೆಯಿತು. ಯುವಕರ ಒಂದು ತಿಂಗಳ ಉತ್ಸಾಹ, ಉಲ್ಲಾಸದ ಪ್ರಯೋಗಶೀಲತೆಯಿಂದ  ಶಿವನಗರ ಶಾಲೆ ವರ್ಲಿ ಕಲೆಯ ಚಿತ್ರ, ಚಿತ್ತಾರದೊಂದಿಗೆ ಅಂದಚೆಂದವಾಗಿ ಕಂಗೊಳಿಸಿತು. ಹಳೆಯ ನೆನಪುಗಳನ್ನು ಹೊತ್ತ ಕಂಬಗಳು, ಗೋಡೆಗಳು ಈಗ ಇನ್ನಷ್ಟು ಹೊಸ ಕಥೆಗಳನ್ನು ಹೊತ್ತು ಸಂಭ್ರಮದಿಂದ ಮೆರೆಯುತ್ತಿದೆ.

ತಂಡದ ಮಾರ್ಗದರ್ಶಕರ, ಸದಸ್ಯರ ಆಸಕ್ತಿ, ಪ್ರತಿಭೆ, ಕೌಶಲ್ಯ ನಿಜಕ್ಕೂ ಮೆಚ್ಚುವಂತದ್ದು. ಶಾಲಾ ಹೊರಾಂಗಣದಲ್ಲಿ ವರ್ಲಿ ಕಲೆಯಲ್ಲಿ ಮೂಡಿಬಂದ ತುಳುನಾಡಿನ ಸಂಸ್ಕೃತಿ, ಆಚರಣೆ, ಆರಾಧನೆ, ಜನಪದ ಸೊಗಡಿನ ಆಕೃತಿಗಳು ಹಾಗೂ ಹಾಲ್‌ನಲ್ಲಿ  ಮೈದಳೆದ ಭಾರತಮಾತೆ ಮತ್ತು  ಶಾರದಾಂಬೆಯ ಕಲಾಕೃತಿಗಳು ಅದ್ಭುತವಾಗಿದೆ, ನೋಡುಗರನ್ನು ಕೈಬೀಸಿ ಶಾಲೆಯೆಡೆಗೆ ಕರೆಯುವಂತಿದೆ. ಸರಕಾರಿ ಶಾಲೆಯ ಉಳಿವು- ಬೆಳವಣಿಗೆಯಲ್ಲಿಯೂ ಈ ಪ್ರಯತ್ನವು ಶ್ಲಾಘನೀಯವೆನಿಸಿದೆ. ಹಿರಿ- ಕಿರಿಯ ಪ್ರತಿಭೆಗಳ ಈ ವಿನೂತನ ಸಾಹಸಕ್ಕೆ ಶಾಲಾ ಶಿಕ್ಷಕವೃಂದ, ಪೋಷಕವೃಂದ ಹಾಗೂ ಸಮುದಾಯದ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.